Karnataka News Live December 27, 2024 : ಕ್ಯಾಬ್ ಚಾಲಕನಿಗೆ ನಿದ್ದೆ, ಬೆಂಗಳೂರಿನಲ್ಲಿ ಪ್ರಯಾಣಿಕನೇ ಟ್ಯಾಕ್ಸಿ ಓಡಿಸಿಕೊಂಡು ಬಂದ ಕಥೆ ಕೇಳಿ ಅಯ್ಯೋ ಪಾಪ ಎಂದ ನೆಟ್ಟಿಗರು
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Fri, 27 Dec 202403:40 PM IST
Bengaluru Viral News: ಬೆಂಗಳೂರಿನಲ್ಲಿ ಐಐಟಿ ಪದವೀಧರ ಮಿಲಿಂದ್ ಚಂದ್ವಾನಿಗೆ ವಿನೂತನ ಅನುಭವವಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಟ್ಯಾಕ್ಸಿಯಲ್ಲಿ ಬಂದಾಗ ಚಾಲಕ ನಿದ್ದೆಗಣ್ಣಿನಲ್ಲಿದ್ದನು. ಈ ಸಮಯದಲ್ಲಿ ತಾನೇ ಕಾರು ಚಲಾಯಿಸಿಕೊಂಡು ಬರಬೇಕಾಯಿತು ಎಂದು ಹೇಳಿದ್ದಾರೆ. ಈ ಸೋಷಿಯಲ್ ಮೀಡಿಯಾ ಪೋಸ್ಟ್ಗೆ ನೆಟ್ಟಿಗರಿಂದ ನಾನಾ ಪ್ರತಿಕ್ರಿಯೆಗಳು ಬಂದಿವೆ.
Fri, 27 Dec 202402:11 PM IST
New year in Bengaluru: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗಿದೆ. ಎಂಜಿ ರಸ್ತೆ, ಬಿಗ್ರೇಡ್ ರಸ್ತೆಗಳಲ್ಲಿ ಇದಕ್ಕೆ ತಯಾರಿ ನಡೆದಿದೆ. ಹೊಸ ವರ್ಷಾಚರಣೆ ಖುಷಿಯಲ್ಲಿರುವ ಬೆಂಗಳೂರಿಗರಿಗೊಂದು ಸಂತಸದ ಸುದ್ದಿ ಕೊಟ್ಟಿದೆ ಬಿಎಂಆರ್ಸಿಎಲ್. ಡಿಸೆಂಬರ್ 31 ರಂದು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ ಆಗಿದೆ. (ವರದಿ: ಎಚ್. ಮಾರುತಿ, ಬೆಂಗಳೂರು)
Fri, 27 Dec 202401:35 PM IST
New Year in Bangalore: ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ರೈಲಿನ ಮೂಲಕ ಬೆಂಗಳೂರಿಗೆ ಸಾಗಿಸುತ್ತಿದ್ದ 1 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಆರೋಪಿಗಳ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ: ಎಚ್.ಮಾರುತಿ, ಬೆಂಗಳೂರು)
Fri, 27 Dec 202401:32 PM IST
- Christmas Special train: ಭಾರತೀಯ ರೈಲ್ವೆಯು ಕ್ರಿಸ್ಮಸ್ ಹಬ್ಬದ ಬಳಿಕ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲುಗಳನ್ನು ಬಿಟ್ಟಿದೆ. ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು ಆರಂಭಿಸಿರುವುದಾಗಿ ತಿಳಿಸಿದೆ.
Fri, 27 Dec 202412:18 PM IST
Hubballi LPG Blast: ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
Fri, 27 Dec 202410:31 AM IST
Manmohan Singh Death: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಮೈಸೂರು ವಿವಿ ರಿಜಿಸ್ಟ್ರಾರ್ ಎನ್ ನಾಗರಾಜ್ ಮಾಹಿತಿ ನೀಡಿದ್ದಾರೆ.
Fri, 27 Dec 202408:45 AM IST
- ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನಲ್ಲಿ ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದೂ ಅಲ್ಲದೇ ಚಪ್ಪಲಿ ಹಾರ ಹಾಕಿದ್ದು, ಆತ ಮೃತಪಟ್ಟಿರುವ ಘಟನೆ ನಡೆದಿದೆ.
Fri, 27 Dec 202407:01 AM IST
- ಕರ್ನಾಟಕದಲ್ಲಿ ವಾಹನಗಳಿಗೆ ಎಚ್ಎಸ್ಆರ್ ಪಿ ನೋಂದಣಿಗೆ ಕಡ್ಡಾಯಗೊಳಿಸಿದ್ದರೂ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಗಡುವನ್ನು ಜನವರಿ 31 ರವರೆಗೂ ವಿಸ್ತರಿಸಲಾಗಿದೆ.
Fri, 27 Dec 202404:54 AM IST
Manmohan Singh Karnataka Relation: ಅಗಲಿದ ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರಿಗೆ ಕರ್ನಾಟಕದ ಮೇಲೆ ವಿಶೇಷ ಪ್ರೀತಿ. ಸ್ನೇಹಿತನ ಒಡನಾಟದಿಂದ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವಿಶೇಷ ಅನುದಾನ ನೀಡಿದ್ದರು. ಇನ್ಫೋಸಿಸ್ ಮೈಸೂರು ಘಟಕ ಉದ್ಘಾಟನೆಗೂ ಬಂದಿದ್ದರು.
Fri, 27 Dec 202401:46 AM IST
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರವೂ ಸರ್ಕಾರಿ ರಜೆ ಘೋಷಣೆಯಾಗಿದೆ. ಈಗಾಗಲೇ ವರ್ಷಾಂತ್ಯ, ವಾರಾಂತ್ಯದ ರಜೆ ಮೂಡ್ನಲ್ಲಿದ್ದವರಿಗೆ ಹೆಚ್ಚುವರಿ ರಜೆ ಸಿಗಲಿದೆ. ಇದರಿಂದ ಪ್ರವಾಸಿ ತಾಣಗಳು ಮತ್ತಷ್ಟು ಪ್ರವಾಸಿಗರಿಂದ ಭರ್ತಿಯಾಗಬಹುದು.
Fri, 27 Dec 202401:21 AM IST
- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಡಿಸೆಂಬರ್ 27ರ ಶುಕ್ರವಾರ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನ ಕರ್ನಾಟಕ ಹವಾಮಾನ ವರದಿ ಇಲ್ಲಿದೆ.