Karnataka News Live December 5, 2024 : ಹಿರಿಯ ಪತ್ರಕರ್ತ ಡಿ ಉಮಾಪತಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Thu, 05 Dec 202403:24 PM IST
- D Umapathy: ಕರ್ನಾಟಕದ ಹಿರಿಯ ಪತ್ರಕರ್ತ ಡಿ ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ದೊರತಿದೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.
Thu, 05 Dec 202412:23 PM IST
Tumkur: ಕಳೆದ ಬಲಿಪಾಡ್ಯಮಿಯಂದು ಪ್ರತಿಷ್ಠಾಪಿಸಲಾಗಿದ್ದ ತುಮಕೂರು ಜಿಲ್ಲೆ ಗೂಳೂರು ಗಣೇಶ ಮೂರ್ತಿ ನಿಮಜ್ಜನಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ಡಿಸೆಂಬರ್ 7 ಹಾಗೂ 8ಕ್ಕೆ ಅದ್ದೂರಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಸುತ್ತಮುತ್ತಲಿನ ಗ್ರಾಮಗಳ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Thu, 05 Dec 202409:54 AM IST
- Siddaramaiah Hassan Convention: ಹಾಸನದಲ್ಲಿ ಕಾಂಗ್ರೆಸ್ ಹಾಗೂ ಸ್ವಾಭಿಮಾನಿ ಸಮಾವೇಶ ನಡೆದು ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನವೂ ಆಯಿತು. ಹೇಗಿತ್ತು ಸಮಾವೇಶ.
Thu, 05 Dec 202408:40 AM IST
- NIA Raid In Karnataka: ರಾಷ್ಟ್ರೀಯ ತನಿಖಾ ಸಂಸ್ಥೆ( NIA) ಅಧಿಕಾರಿಗಳ ತಂಡ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದೆ.
- ವರದಿ: ಹರೀಶ ಮಾಂಬಾಡಿ.ಮಂಗಳೂರು
Thu, 05 Dec 202408:37 AM IST
- MUDA Case: ಮುಡಾ ಕೇಸ್ಗೆ ರಾಜ್ಯಪಾಲರ ಅನುಮತಿ ಎತ್ತಿ ಹಿಡಿದಿದ್ದ ಏಕಾಂಗಿ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿಯಲ್ಲಿ ಹೈಕೋರ್ಟ್ ಗುರುವಾರ (ಡಿಸೆಂಬರ್ 5) ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
Thu, 05 Dec 202406:50 AM IST
Mangaluru: ದೂರವಾಣಿಯಲ್ಲಿ ಮಾತನಾಡುವಾಗಲೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆಲಂಕಾರು ಗ್ರಾಮದ ಬಾಕಿಲ ನಿವಾಸಿ 42 ವರ್ಷ ವಯಸ್ಸಿನ ಪ್ರದೀಪ್ ಬಾಕಿಲ ಎಂಬುವರೇ ಹೃದಯಾಘಾತದಿಂದ ನಿಧನರಾದವರು.
Thu, 05 Dec 202404:07 AM IST
Hassan Congress Convention: ಸಿದ್ದತೆ ಶುರುವಾದಾಗ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶವಾಗಿದ್ದ ಹಾಸನದಲ್ಲಿ ಗುರುವಾರ ನಡೆಯುವ ಸಮಾವೇಶ ಈಗ ಜನಕಲ್ಯಾಣದ ರೂಪ ಪಡೆದಿದೆ. ಯಾರ ವಿರುದ್ದ ಸಂದೇಶ ಇಲ್ಲಿಂದ ರವಾನೆಯಾಗಲಿದೆ ಎನ್ನುವ ಕುತೂಹಲ ಕಾಂಗ್ರೆಸ್ನಲ್ಲಿಯೇ ಇದೆ.
Thu, 05 Dec 202403:41 AM IST
- Darshan Thoogudeepa case: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಇರುವ ನಟ ದರ್ಶನ್ ಅವರಿಗೆ ನೀಡಿರುವ ಜಾಮೀನು ರದ್ದತಿ ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
- ವರದಿ: ಎಚ್.ಮಾರುತಿ.ಬೆಂಗಳೂರು
Thu, 05 Dec 202402:11 AM IST
- Karnataka Weather: ಫೆಂಗಲ್ ಚಂಡಮಾರುತದ ಪರಿಣಾಮ ಇನ್ನೂ ತಗ್ಗಿದಂತಿಲ್ಲ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 5) ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ಕೆಲವು ಕಡೆ ಚಳಿ ಪ್ರಭಾವವೂ ಜೋರಿರಲಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿಂದು ಮಳೆಯಾಗಲಿದೆ ನೋಡಿ.
Thu, 05 Dec 202412:40 AM IST
- ಎಚ್ಡಿ ಕೋಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹುಲಿ ಇರುವಿಕೆ ಖಚಿತಗೊಂಡಿರುವ ಸಲುವಾಗಿ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. WAAS ಮೂಲಕ ತುರ್ತು ಸಂದೇಶಗಳನ್ನು ಕಳುಹಿಸಿ ಜನರನ್ನು ಎಚ್ಚರಿಸಲಾಗುತ್ತಿದೆ. ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ ಗ್ರಾಮಗಳಲ್ಲಿ ಅರಣ್ಯ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.