
Karnataka News Live January 22, 2025 : ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದಿಂದ ಲಕ್ಕುಂಡಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆ ಟ್ಯಾಬ್ಲೋ ಸಿದ್ಧ
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Wed, 22 Jan 202503:46 PM IST
Republic Day 2025: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ದೆಹಲಿಯ ಕರ್ತವ್ಯಪಥದಲ್ಲಿ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.
Wed, 22 Jan 202501:25 PM IST
- 2025 Sslc Examination Model Question Papers: ಕರ್ನಾಟಕ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗೆ ಅನುಕೂಲವಾಗುವಂತೆ 2025ರ ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿದೆ. ಈ ಪಿಡಿಎಫ್ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದು.
Wed, 22 Jan 202511:04 AM IST
- ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ 10 ಜನರು ಮೃತಪಟ್ಟು, 15 ಜನರು ಗಾಯಗೊಂಡ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
Wed, 22 Jan 202510:00 AM IST
- ಕರ್ನಾಟಕ ಕರಾವಳಿ ಭಾಗದಲ್ಲಿ ದರೋಡೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನ ಏರಿಕೆ ಕಾಣುತ್ತಿವೆ. ಅದಕ್ಕೆ ನಿಖರವಾದ ಕಾರಣವೇನು? ದರೋಡೆಕಾರರಿಗೆ ಮಾಹಿತಿ ನೀಡುತ್ತಿರುವ ಸ್ಥಳೀಯರು ಯಾರು? ಇಲ್ಲಿದೆ ಸಂಪೂರ್ಣ ವಿವರ. (ವಿಶೇಷ ವರದಿ: ಹರೀಶ ಮಾಂಬಾಡಿ, ಮಂಗಳೂರು)
Wed, 22 Jan 202508:03 AM IST
ಬೆಳಗಾವಿಯ ಸುವರ್ಣಸೌಧದಲ್ಲಿ ಮಂಗಳವಾರ 25 ಅಡಿ ಎತ್ತರದ ಗಾಂಧೀಜಿ ಪುತ್ಥಳಿಯನ್ನು ಚರಕ ನೇಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದ್ದಾರೆ. ಆದರೆ ಸರ್ಕಾರಿ ಕಾರ್ಯಕ್ರಮಕ್ಕೆ ಜನರ ಹಣ ಬಳಸಿಕೊಳ್ಳಲಾಗುತ್ತಿರುವ ಬಗ್ಗೆ ಆಕ್ಷೇಪ ಕೇಳಿಬರುತ್ತಲೇ ಇದೆ. ಈ ವಿಚಾರವಾಗಿ ಲೇಖಕ ರಾಜೀವ್ ಹೆಗಡೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
Wed, 22 Jan 202506:39 AM IST
Yellapura Accident: ಯಲ್ಲಾಪುರ ತಾಲೂಕು ಅರಬೈಲ್ ಘಾಟ್ನ ಗುಳ್ಳಾಪುರದಲ್ಲಿ ಇಂದು (ಜನವರಿ 22) ನಸುಕಿನ ವೇಳೆ ನಡೆದ ಲಾರಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ನಡುವೆ, ಯಲ್ಲಾಪುರ ಲಾರಿ ದುರಂತ ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ವಿಳಂಬಕ್ಕೆ ಗಾಯಾಳುಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wed, 22 Jan 202505:55 AM IST
- ಗೋವುಗಳ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಜನವರಿ 23 ರಿಂದ 29 ರವರೆಗೆ ಗೋವಂಶ ಸುರಕ್ಷೆಗೆ ಪ್ರಾರ್ಥಿಸಿ ಅಭಿಯಾನವನ್ನು ಕೈಗೊಂಡಿರುವುದಾಗಿ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಕೋಟಿ ವಿಷ್ಣುಸಹಸ್ರನಾಮ ಪಾರಾಯಣಕ್ಕೆ ಕರೆ ನೀಡಿದ್ದಾರೆ.
Wed, 22 Jan 202505:31 AM IST
ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಎರಡು ಅಪಘಾತಗಳಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸಂತಾಪ ಸೂಚಿಸಿದರು.
Wed, 22 Jan 202505:03 AM IST
Yellapura Accident: ಯಲ್ಲಾಪುರ ಸಮೀಪ ಗುಳ್ಳಾಪುರದಲ್ಲಿ ಲಾರಿ ಕಂದಕಕ್ಕೆ ಉರುಳಿ ಭಾರಿ ದುರಂತ ಸಂಭವಿಸಿದೆ. ಯಲ್ಲಾಪುರ ಅಪಘಾತದಲ್ಲಿ ಮೃತಪಟ್ಟವರು ಯಾರು, ಅವರು ಎಲ್ಲಿಯವರು, ಅವರ ಹಿನ್ನೆಲೆ ಏನು ಎಂಬಿತ್ಯಾದಿ ವಿವರ ಇಲ್ಲಿದೆ.
Wed, 22 Jan 202504:16 AM IST
- Road Accident: ಇಂದು (ಜನವರಿ 22) ಬೆಳ್ಳಂಬೆಳಿಗ್ಗೆ ಕರ್ನಾಟಕದ ಹಲವೆಡೆ ಭೀಕರ ಅಪಘಾತ ಸಂಭವಿಸಿದ್ದು, 18 ವರ್ಷದ ವಿದ್ಯಾರ್ಥಿ ಸೇರಿ 14 ಮಂದಿ ಸಾವನ್ನಪ್ಪಿದ್ದಾರೆ.
Wed, 22 Jan 202503:42 AM IST
Sindhanur Accident: ರಾಯಚೂರು ಜಿಲ್ಲೆಯ ಸಿಂಧನೂರು ಸಮೀಪ ಭೀಕರ ರಸ್ತೆ ದುರಂತ ಸಂಭವಿಸಿದೆ. ಅರಗಿನಮನೆ ಕ್ಯಾಂಪ್ ಸಮೀಪ ಈ ರಸ್ತೆ ದುರಂತ ಸಂಭವಿಸಿದ್ದು, ಕ್ರೂಸರ್ ವ್ಯಾನ್ ಪಲ್ಟಿಯಾಗಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳ ದುರ್ಮರಣಕ್ಕೀಡಾದರು.
Wed, 22 Jan 202503:26 AM IST
- ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರೆಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಇಂದು (ಜನವರಿ 22) ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಲಾರಿಯಲ್ಲಿ 40ಕ್ಕೂ ಹೆಚ್ಚು ಜನ ಇದ್ದರು ಎಂದು ಹೇಳಲಾಗುತ್ತಿದೆ. ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ.
Wed, 22 Jan 202502:42 AM IST
Yellapur Accident: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕು ಗುಳ್ಳಾಪುರದಲ್ಲಿ ತರಕಾರಿ ಟ್ರಕ್ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ ಕನಿಷ್ಠ 9 ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಹಲವರು ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ.
Wed, 22 Jan 202501:58 AM IST
Dharwad Municipal Corporation: ಹುಬ್ಬಳ್ಳಿ ಧಾರವಾಡ ವಿಭಜನೆ ಅಧಿಕೃತವಾಗಿದ್ದು, ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಯಾಗಲಿದೆ. ಇದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಮಂಗಳವಾರ (ಜನವರಿ 21) ಪ್ರಕಟಿಸಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ಈ ಅಧಿಸೂಚನೆ ಪ್ರಕಟವಾಗಿದ್ದು, ಲಿಖಿತ ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
Wed, 22 Jan 202501:30 AM IST
- ಬೆಂಗಳೂರಿನಲ್ಲಿ ಕೆಲಸ ಕೊಟ್ಟರೂ ಸರಿಯಾಗಿ ಸಂಬಳ ಕೊಡದೇ ಸತಾಯಿಸುತ್ತಿದ್ದ ಮನೆಯಲ್ಲಿಯೇ ಭಾರೀ ಕಳ್ಳತನ ಮಾಡಿದ್ದ ಕಲಬುರಗಿ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
- ವರದಿ: ಎಚ್.ಮಾರುತಿ. ಬೆಂಗಳೂರು
Wed, 22 Jan 202501:09 AM IST
Praveen Nettaru Murder: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಕೇಸ್ನ ಮುಖ್ಯ ಸಂಚುಕೋರ ಪರಾರಿಯಾಗಲು ನೆರವಾಗಿದ್ದ ಆರೋಪ ಆತನ ಮೇಲಿದೆ.
Wed, 22 Jan 202512:45 AM IST
Karnataka Weather: ಕರ್ನಾಟಕದ ಬಹುತೇಕ ಕಡೆಗಳಲ್ಲಿ ಇಂದು (ಜನವರಿ 22) ಒಣಹವೆ ಇರಲಿದೆ. ಉಳಿದಂತೆ ಇಂದು ಬೆಂಗಳೂರು, ಮೈಸೂರು, ಬೀದರ್ ಭಾಗದಲ್ಲಿ ಚಳಿ ಹೆಚ್ಚಳವಾಗಲಿದ್ದು, ಕರ್ನಾಟಕ ಹವಾಮಾನದ ವಿವರ ಹೀಗಿದೆ.
Wed, 22 Jan 202512:41 AM IST
Bengaluru Crime: ಬೆಂಗಳೂರು ನಗರದ ವಿವಿಧೆಡೆ 6 ತಿಂಗಳಲ್ಲಿ ಜಪ್ತಿ ಮಾಡಲಾದ 38.11 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶ ಮಾಡಲಾಗಿದೆ. ಪ್ರತ್ಯೇಕ ಪ್ರಕರಣದಲ್ಲಿ, ವೃದ್ಧರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.(ವರದಿ- ಎಚ್. ಮಾರುತಿ, ಬೆಂಗಳೂರು)