
Karnataka News Live January 25, 2025 : ಕೊಪ್ಪಳದ ತೊಗಲುಗೊಂಬೆಯಾಟ ಕಲಾವಿದೆ 96 ವರ್ಷದ ಭೀಮವ್ವಗೆ ಪದ್ಮಶ್ರೀ ಪ್ರಶಸ್ತಿ ಗೌರವ; 7 ದಶಕಗಳ ಕಲಾ ಕೃಷಿಯಲ್ಲಿ ಭೀಮವ್ವರ ಹಾದಿ ಹೀಗಿತ್ತು
ಎಚ್ಟಿ ಕನ್ನಡ ಲೈವ್ ಅಪ್ಡೇಟ್ಸ್ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Sat, 25 Jan 202503:38 PM IST
- ತೊಗಲುಗೊಂಬೆಯಾಟದ ಕಲಾ ಕ್ಷೇತ್ರದಲ್ಲಿ ಬರೋಬ್ಬರಿ 70 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ 96 ವರ್ಷದ ವೃದ್ಧೆ ಭೀಮವ್ವಗೆ ಕೇಂದ್ರ ಸರ್ಕಾರ ನೀಡುವ ದೇಶದ ಅತ್ಯುನ್ನತ ಗೌರವವಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರು ನಡೆದು ಬಂದ ಹಾದಿ ಇಲ್ಲಿದೆ.
Sat, 25 Jan 202503:07 PM IST
- ಕಲಬುರಗಿಯ ಹಿರಿಯ ವೈದ್ಯೆ, ಕ್ಯಾನ್ಸರ್ ತಜ್ಞರಾದ ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಈ ಬಾರಿಯ ಪದ್ಮಶ್ರೀ ಗೌರವ ಒಲಿದು ಬಂದಿದೆ. 4 ದಶಕಗಳ ಕಾಲ ಕ್ಯಾನ್ಸರ್ ರೋಗಿಗಳ ಉಳಿವಿಗಾಗಿ ಶ್ರಮಿಸಿದ ತಾಯಿಗೆ ಕೇಂದ್ರ ಸರ್ಕಾರದಿಂದ ಉನ್ನತ ಗೌರವ ಸಂದಿದೆ.
Sat, 25 Jan 202501:57 PM IST
- Padma Awards 2025: ಕರ್ನಾಟಕದ ಕರ್ನಾಟಕದ ಗೊಂಧಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗಾಟೆಕರ್ಗೆ ಪ್ರತಿಷ್ಠಿತ 2025ರ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಾಗಲಕೋಟೆಯ ಈ ಸಾಧಕನಿಗೆ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.
Sat, 25 Jan 202512:17 PM IST
Clinical trial death: ಸಿಂಜಿನ್ ಸಂಸ್ಥೆಯ ವೈದ್ಯಕೀಯ ಪ್ರಯೋಗ (ಕ್ಲಿನಿಕಲ್ ಟ್ರಯಲ್)ನಲ್ಲಿ ಭಾಗವಹಿಸಿದ ಬೆಂಗಳೂರಿನ ನಾಗೇಶ್ ವೀರಣ್ಣ (33 ವರ್ಷ) ಮೃತ ಪಟ್ಟಿದ್ದಾರೆ. ಪ್ರಾಯೋಗಿಕ ಔಷಧಗಳಿಂದ ಉಂಟಾದ ಅಡ್ಡಪರಿಣಾಮಗಳು ಸಾವಿಗೆ ಕಾರಣವೆಂದು ಮೃತರ ಸಹೋದರ ರೇವಣ್ಣ ಸಿದ್ದಪ್ಪ ಆರೋಪಿಸಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Sat, 25 Jan 202512:09 PM IST
ಮಂಗಳೂರು: ಗೋಹತ್ಯೆ ಮತ್ತು ಗೋವಿನ ವಿರುದ್ಧದ ಹಿಂಸೆಯನ್ನು ಖಂಡಿಸಿ ಇಂದು (ಜನವರಿ 25) ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಶನಿವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ಮತ್ತು ಸಾಮೂಹಿಕ ವಿಷ್ಣುಸಹಸ್ರನಾಮ ಪಾರಾಯಣ ಸಂಪನ್ನಗೊಂಡಿತು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
Sat, 25 Jan 202511:13 AM IST
Bellary Doctor Kidnap: ಆಘಾತಕಾರಿ ವಿದ್ಯಮಾನ ಒಂದರಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ ಸುನಿಲ್ ಅವರ ಅಪಹರಣ ನಡೆದಿದೆ. ಇಂದು (ಜನವರಿ 25) ಬೆಳಗ್ಗೆ ದುಷ್ಕರ್ಮಿಗಳು ಡಾ ಸುನಿಲ್ ಅವರನ್ನು ಅಪಹರಣ ಮಾಡಿದ್ದು, ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Sat, 25 Jan 202510:17 AM IST
Nanjangud Accident: ಮೈಸೂರು ಊಟಿ ಹೆದ್ದಾರಿಯಲ್ಲಿ ಇಂದು (ಜನವರಿ 25) ನಂಜನಗೂಡು ತಾಲೂಕು ಮುದ್ದಹಳ್ಳಿ ಸಮೀಪ ಈ ಹೃದಯ ವಿದ್ರಾವಕ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ನಿಂದ ತಲೆಹೊರ ಹಾಕಿದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ದಾರಿಯ ಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳೆ ಪ್ರಯಾಣಿಸಿದ್ದರು.
Sat, 25 Jan 202509:26 AM IST
Microfinance Harassment: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜನವರಿ 25) ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೈಕ್ರೋಫೈನಾನ್ಸ್ ವಿಶೇಷ ಸಭೆ ನಡೆಸಿದರು. ಅಲ್ಲಿ ಕಿರುಹಣಕಾಸು ಸಂಸ್ಥೆ ಪ್ರತಿನಿಧಿಗಳಿಗೆ 5 ನೇರ ಪ್ರಶ್ನೆಗಳನ್ನು ಕೇಳಿದರು. ಅದಕ್ಕೆ ಉತ್ತರ ನೀಡಲಾಗದೆ ಕಿರುಹಣಕಾಸು ಸಂಸ್ಥೆ ಪ್ರತಿನಿಧಿಗಳು ಕಷ್ಟಪಟ್ಟರು. ಇಲ್ಲಿದೆ ಆ ವಿವರ.
Sat, 25 Jan 202509:11 AM IST
- ಮೈಕ್ರೋಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಿರುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳ ಅಟ್ಟಹಾಸಕ್ಕೆ ಅಂಕುಶ ಹಾಕಲು ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಕಾನೂನು ತರಲು ಸರ್ಕಾರ ನಿರ್ಧರಿಸಿದೆ.
Sat, 25 Jan 202507:49 AM IST
- Presidents Medals: ಕರ್ನಾಟಕ ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ, ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. (ವರದಿ-ಎಚ್. ಮಾರುತಿ)
Sat, 25 Jan 202506:24 AM IST
- ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ರೌಡಿ ಶೀಟರ್ ಫೈಟರ್ ರವಿ ಬಂಧನವಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಸೈಬರ್ ವಂಚಕರು ಮಹಿಳೆಯೊಬ್ಬರಿಗೆ 2 ಲಕ್ಷ ರೂಪಾಯಿ ವಂಚಿಸಿದ್ದಾರೆ. (ವರದಿ-ಎಚ್. ಮಾರುತಿ)
Sat, 25 Jan 202506:22 AM IST
Charmadi Ghat Forest Fire: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಆವರಿಸಿದೆ. ಇದರ ಪರಿಣಾಮ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವುದು ಗಮನಸೆಳೆದಿದೆ.
(ವರದಿ- ಹರೀಶ್ ಮಾಂಬಾಡಿ, ಮಂಗಳೂರು)
Sat, 25 Jan 202505:54 AM IST
Lawyer Jagadish Arrested: ಬೆಂಗಳೂರು ಕೊಡಿಗೇಹಳ್ಳಿಯಲ್ಲಿ ಅಣ್ಣಮ್ಮ ಉತ್ಸವದ ವಿಚಾರವಾಗಿ ಸ್ಥಳೀಯರು ಮತ್ತು ಲಾಯರ್ ಜಗದೀಶ್ ನಡುವೆ ಸಂಘರ್ಷ ಏರ್ಪಟ್ಟಿತ್ತು. ನಿನ್ನೆ ಜಗದೀಶ್ ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿತ್ತು. ಇಂದು (ಜನವರಿ 25) ಲಾಯರ್ ಜಗದೀಶ್ ಮತ್ತು ಅವರ ಗನ್ಮ್ಯಾನ್ ಅನ್ನು ಪೊಲೀಸರು ಬಂಧಿಸಿದ್ಧಾರೆ.
Sat, 25 Jan 202505:36 AM IST
Planet parade 2025: ಆಕಾಶದಲ್ಲಿ ಈ ಜನವರಿಯಲ್ಲಿ ಸಂಭವಿಸುವ ಅಪರೂಪದ ವಿದ್ಯಮಾನ "ಪ್ಲಾನೇಟ್ ಪೆರೇಡ್" ಜನವರಿ 25 ಅಂದರೆ ಇಂದು ಹೆಚ್ಚು ಸ್ಪಷ್ಟವಾಗಿ ಕಾಣಲಿದೆ. ಶುಕ್ರ, ಮಂಗಳ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್ ಗ್ರಹಗಳನ್ನು ಆಕಾಶದಲ್ಲಿ ಒಂದೇ ಸಾಲಿನಲ್ಲಿ (ಪರಿಪೂರ್ಣ ಸಾಲು ಅಲ್ಲ) ನೋಡಬಹುದಾಗಿದೆ.
Sat, 25 Jan 202503:05 AM IST
- ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಅಪ್ಪನನ್ನೂ ಬಂಧಿಸಿರುವ ಮಂಗಳೂರು ಪೊಲೀಸರು, 16 ಕೆಜಿ ಚಿನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಮುಂಬೈ-ತಮಿಳುನಾಡು-ಮಂಗಳೂರು ಲಿಂಕ್ ಸಿಕ್ಕಿದ್ದು ಹೇಗೆ? (ವರದಿ-ಹರೀಶ್ ಮಾಂಬಾಡಿ)
Sat, 25 Jan 202502:31 AM IST
- Karnataka High court: ಚುನಾವಣಾ ತಕರಾರು ಕಾರಣ ಮೈಸೂರು ಸಂಸದ ಯದುವೀರ ಒಡೆಯರ್ಗೆ ಹೈಕೋರ್ಟ್ ನೋಟಿಸ್ ನೀಡಿದೆ. ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. (ವರದಿ: ಎಚ್. ಮಾರುತಿ)
Sat, 25 Jan 202501:53 AM IST
- ಗಣರಾಜ್ಯೋತ್ಸವ ಅಂಗವಾಗಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲದೆ ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. (ವರದಿ-ಎಚ್.ಮಾರುತಿ)
Sat, 25 Jan 202501:34 AM IST
- Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಜನವರಿ 25) ಒಣಹವೆ ಮುಂದುವರೆಯಲಿದೆ. ಆದರೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಶೀತ ಗಾಳಿ ಹೆಚ್ಚಾಗಲಿದೆ. ಬೆಂಗಳೂರು, ಮೈಸೂರು, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.