ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

ಕರ್ನಾಟಕ ಹವಾಮಾನ ಏಪ್ರಿಲ್ 27: ರಾಜ್ಯದ ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ರಣಬಿಸಿಲು, ಬಿಸಿಗಾಳಿ ಹಾಗು ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಮುನ್ಸೂಚನಾ ವರದಿ ನೀಡಿದೆ. ಮುಂಜಾನೆ, ಬೆಳಗ್ಗೆ ಸ್ವಲ್ಪ ಹೊತ್ತು ಬೆಂಗಳೂರು ಸುತ್ತಮುತ್ತ ಮೋಡಕವಿದ ವಾತಾವರಣ ಇದ್ದು ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ದಾಟಬಹುದು ಎಂದು ವರದಿ ಹೇಳಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅದರ ನಕ್ಷೆಯನ್ನೂ ಬಿಡುಗಡೆ ಮಾಡಿದೆ.
ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅದರ ನಕ್ಷೆಯನ್ನೂ ಬಿಡುಗಡೆ ಮಾಡಿದೆ.

ಬೆಂಗಳೂರು: ಕರ್ನಾಟಕದ ಬೀದರ್‌, ಮೈಸೂರು, ಬಾಗಲಕೋಟೆ, ಮಂಡ್ಯ, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 27) ರಣಬಿಸಿಲು, ಬಿಸಿಗಾಳಿ ಮತ್ತು ಶಾಖದ ಅಲೆಗಳು ಉಂಟಾಗಬಹುದು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ/ ಬೆಳಗ್ಗೆ ಮೋಡಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್‌ ದಾಟಬಹುದು ಎಂಬ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉಳಿದಂತೆ ಎಲ್ಲೆಡೆ ಒಣಹವೆ ಇರಲಿದ್ದು, ಗರಿಷ್ಠ ತಾಪಮಾನ ಹೆಚ್ಚಳ ಅನುಭವ ಉಂಟಾಗಲಿದೆ. ಕರಾವಳಿಯ ಜಿಲ್ಲೆಗಳಲ್ಲಿ ಸುಡುಬಿಸಿಲಿನ ಜೊತೆಗೆ ಆರ್ದ್ರತೆಯೂ ಇರಲಿದ್ದು, ಶುಷ್ಕತೆಯೊಂದಿಗೆ ಸುಡುಬಿಸಿಲು ಕಾಡಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಪ್ರಕಾರ, ಏಪ್ರಿಲ್ 28ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಆದಾಗ್ಯೂ, ಏಪ್ರಿಲ್ 30 ರ ತನಕ ಗರಿಷ್ಠ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 25 ರಿಂದ 29 ರ ತನಕದ ಅವಧಿಯಲ್ಲಿ ಬಿಸಿ ಮತ್ತು ಆರ್ದ್ರತೆಯೂ ಹೆಚ್ಛಾಗಲಿದೆ.

ಉತ್ತರ ಒಳನಾಡಿನ ಬಾಲಕೋಟೆ, ಬೀದರ್‌, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಆದರೆ, ಗರಿಷ್ಠ ತಾಪಮಾನ ಪ್ರಮಾಣ ಹೆಚ್ಚಾಗಲಿದೆ. ಈ ಪ್ರದೇಶಗಳಲ್ಲಿ ಏಪ್ರಿಲ್ 30ರ ತನಕ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗು ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ರಣಬಿಸಿಲು, ಶಾಖದ ಅಲೆ ಉಂಟಾಗಬಹುದು. ಉಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ ಹೆಚ್ಚಾಗಲಿದೆ. ಏಪ್ರಿಲ್ 30ರ ತನಕ ದಕ್ಷಿಣ ಒಳಾನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಿಕೆಯಾಗಬಹುದು ಎಂದು ವರದಿ ಎಚ್ಚರಿಸಿದೆ.

ಶಾಖದ ಅಲೆಗಳ ಮುನ್ನೆಚ್ಚರಿಕೆ

ಕರ್ನಾಟಕದಲ್ಲಿ ಇಂದು ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ರಣಬಿಸಿಲು, ಶಾಖದ ಅಲೆಗಳು ಹೆಚ್ಚಾಗಬಹುದು. ಆದ್ದರಿಂದ, ರಣಬಿಸಿಲು ಮತ್ತು ಶಾಖದ ಅಲೆಯಿಂದ ರಕ್ಷಣೆ ಪಡೆಯಲು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲುಸ್ತುವಾರಿ ಕೇಂದ್ರದ ವರದಿ ಮುನ್ನೆಚ್ಚರಿಕೆಯ ಸಲಹೆ ನೀಡಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 27), ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 27) ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮುಂಜಾನೆ ಹೊತ್ತು ಭಾಗಶಃ ಮೋಡಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 26) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 26) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 38.4 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 23.2 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 26 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)

ಮಂಗಳೂರು – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)

ಚಿತ್ರದುರ್ಗ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 29.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)

ಹೊನ್ನಾವರ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಕಲಬುರಗಿ – 30.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 27)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಕಾರವಾರ – 33.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point