ಕರ್ನಾಟಕ ಹವಾಮಾನ ಜುಲೈ 24; ದಕ್ಷಿಣ ಒಳನಾಡಿನಲ್ಲಿ ಮಳೆ ಇಳಿಮುಖ, ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ರಾಜ್ಯದ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಜುಲೈ 24; ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಇಳಿಮುಖವಾಗಿದೆ. ಉತ್ತರ ಒಳನಾಡಿನಲ್ಲಿ ಕೂಡ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿದ ರಾಜ್ಯದ ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಇಳಿಮುಖವಾಗಿದ್ದು, ಈ ಭಾಗದ ಜಿಲ್ಲೆಗಳಲ್ಲಿ ಹಲವಡೆ ಮಳೆ ಬೀಳಲಿದೆ. ಇನ್ನು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವುದಾದರೂ ಮಳೆಯ ತೀವ್ರತೆ ಕಡಿಮೆಯಾಗಿದೆ. ಈ ಭಾಗದ ಮೂರು ಜಿಲ್ಲೆಗಳು ಮತ್ತು ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 25 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಭಾಗದಲ್ಲಿ ಇಂದು ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ನಾಳೆಯಿಂದ 27ರ ತನಕ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಸತತ ಮಳೆಯ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದೇ ವೇಳೆ, ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ. ಆದಾಗ್ಯೂ ಇಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಇನ್ನುಳಿದಂತೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂತೆಯೇ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಯೆಲ್ಲೋ ಅಲರ್ಟ್ ಇರುವ ಜಿಲ್ಲೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು
ಬೆಂಗಳೂರು ಹವಾಮಾನ ಇಂದು (ಜುಲೈ 24); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಇಂದು (ಜುಲೈ 24) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 23) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 26.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 23) ಗರಿಷ್ಠ ತಾಪಮಾನ 27.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 24 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 21.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)
ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)
ಚಿತ್ರದುರ್ಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)
ಗದಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಹೊನ್ನಾವರ – 25.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)
ಕಲಬುರಗಿ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)
ಬೆಳಗಾವಿ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)
ಕಾರವಾರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95 )
----------------------
(ಕನ್ನಡದಲ್ಲಿ ಸ್ಪಷ್ಟ ಸುದ್ದಿ, ನಿಖರ ವಿಶ್ಲೇಷಣೆ, ಸಮಗ್ರ ಮಾಹಿತಿಗೆ ಎಚ್ಟಿ ಕನ್ನಡ ಬೆಸ್ಟ್. ತಾಜಾ ವಿದ್ಯಮಾನ ಮತ್ತು ಬಜೆಟ್ ವಿವರಣೆ, ರಾಜಕೀಯ ವಿಶ್ಲೇಷಣೆಗಳಿಗಾಗಿ kannada.hindustantimes.com/nation-and-world ಕ್ಕೆ ಭೇಟಿ ನೀಡಿ.)
(This copy first appeared in Hindustan Times Kannada website. To read more like this please logon to kannada.hindustantimes.com)