ಕರ್ನಾಟಕ ಹವಾಮಾನ ಮೇ 15; ಬಾಗಲಕೋಟೆ, ಬೀದರ್ ಸೇರಿ 6 ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳ ಕೆಲವೆಡೆ ಮಳೆ ನಿರೀಕ್ಷೆ, ಉಳಿದಂತೆ ಒಣಹವೆ
ಕರ್ನಾಟಕ ಹವಾಮಾನ ಮೇ 15; ರಾಜ್ಯದ ಬಾಗಲಕೋಟೆ, ಬೀದರ್ ಸೇರಿ 6 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳ ಕೆಲವು ಕಡೆ ಮಳೆ ಬೀಳುವ ನಿರೀಕ್ಷೆ ಇದೆ. ಗುಡುಗು ಮಿಂಚು, ಮಳೆ ಬೀಳುವ ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೂ ಬೀಸಲಿದೆ ಎಂದು ಭಾರತೀಯ ಹವಾಮಾನ ವರದಿ ಹೇಳಿದೆ.

ಬೆಂಗಳೂರು: ಕರ್ನಾಟಕದ ಬಾಗಲಕೋಟೆ, ಬೀದರ್, ರಾಯಚೂರು, ಯಾದಗಿರಿ ಸೇರಿ 6 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಇಂದು ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ.
ಬಾರತೀಯ ಹವಾಮಾನ ಇಲಾಖೆ ಮೇ 16ರ ಬೆಳಗ್ಗೆ 8.30ರ ತನಕ ನೀಡಿರುವ ಮಳೆ ಮುನ್ಸೂಚನೆ ವರದಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗಲಿದ್ದು, ಗುಡುಗು ಮಿಂಚು ಕೂಡ ಇರಲಿದೆ. ಇನ್ನು ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬರುಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಈ ಆರು ಜಿಲ್ಲೆಗಳು ಬಿಟ್ಟು ಉಳಿದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಈ 5 ಜಿಲ್ಲೆಗಳಲ್ಲಿ ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇಲ್ಲಿ ಮಳೆ ಬೀಳುವಾಗ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.
ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ - ಈ ಏಳು ಜಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗಲಿದ್ದು, ಗುಡುಗು ಮಿಂಚು, ಬಿರುಗಾಳಿಯ ಮುನ್ಸೂಚನೆ ಇದ್ದು, ಮುಂಜಾಗ್ರತೆ ವಹಿಸುವಂತೆ ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.
ಬೆಂಗಳೂರು ಹವಾಮಾನ ಇಂದು (ಮೇ 15), ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಕನಿಷ್ಠ 20 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಮೇ 15) ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಶಿಯಸ್ ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮೋಡ ಕವಿದ ವಾತಾವರಣ ಮತ್ತು ಹಲವೆಡೆ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಲಿದ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 14) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 30.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆ 26 ಮಿ.ಮೀ. ಮಳೆಯಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗುಡುಗು ಮಿಂಚಿನ ಎಚ್ಚರಿಕೆ ನೀಡಲಾಗಿದೆ. ನಿನ್ನೆ (ಮೇ 14) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 33.3 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 20.5. ಡಿಗ್ರಿ ಸೆಲ್ಶಿಯಸ್ ಇತ್ತು. ನಿನ್ನೆ 3.6 ಎಂಎಂ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 15 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 24.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)
ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)
ಚಿತ್ರದುರ್ಗ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)
ಹೊನ್ನಾವರ – 25.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಕಲಬುರಗಿ – 22.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 99)
ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 33.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)

ವಿಭಾಗ