ಕರ್ನಾಟಕ ಹವಾಮಾನ ಮೇ 31; ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಇಂದು ಮಳೆ, ಉಳಿದೆಡೆ ಒಣಹವೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 31; ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಇಂದು ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮೇ 31; ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಇಂದು ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮೇ 31; ಮುಂಗಾರು ಪೂರ್ವ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಇನ್ನು ಮುಂಗಾರು ಮಳೆಯ ನಿರೀಕ್ಷೆಯ ಹೊತ್ತು. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆ ಬೀಳಬಹುದು. ಉಳಿದೆಡೆ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 31; ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು. ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 31; ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು ಸೇರಿ 15 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು. ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದೆ. ಈ ಬಾರಿ ವಾಡಿಕೆಗಿಂತ ಮೊದಲೇ ನೈಋತ್ಯ ಮಾನ್ಸೂನ್ ಬರಲಿದೆ. ಮುಂಗಾರು ಪೂರ್ವ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದಾಗ್ಯೂ ಇಂದು (ಮೇ 29) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಮೆಳಯಾಗಲಿದೆ. ಉಳಿದಂತೆ ಬೆಂಗಳೂರು, ಮೈಸೂರು ಸೇರಿ 12 ಜಿಲ್ಲೆಗಳಲ್ಲಿ ಇಂದು ಮಳೆ ಬೀಳಲಿದೆ. ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಪ್ರಕಟಿಸಿದ ಮಳೆ ಮುನ್ಸೂಚನೆ ವರದಿ ಪ್ರಕಾರ ಜೂನ್ 1ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ತಾಪಮಾನ ಹೆಚ್ಚಳವಾಗಲಿದೆ. ಆದಾಗ್ಯೂ ಕೆಲವು ಕಡೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ವರದಿ ಹೇಳಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ. ಈ ಭಾಗದಲ್ಲಿ ಕೆಲವು ಕಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲೂ ಬಹುದು. ಇನ್ನುಳಿದಂತೆ, ಕೋಲಾರ, ವಿಜಯನಗರ, ಚಿತ್ರದುರ್ಗ,ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಬೆಂಗಳೂರು ಹವಾಮಾನ ಇಂದು (ಮೇ 31); ನಗರ, ಗ್ರಾಮಾಂತರ ಜಿಲ್ಲೆಗಳ ಕೆಲವು ಕಡೆ ಮಳೆ ಸಾಧ್ಯತೆ

ಬೆಂಗಳೂರು ನಗರದಲ್ಲಿ ಇಂದು (ಮೇ 31) ಕೂಡ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 30) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 31 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 77)

ಹೊನ್ನಾವರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಕಲಬುರಗಿ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 49)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಕಾರವಾರ – 34.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 69 )

----------------------

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner