ಕನ್ನಡ ಸುದ್ದಿ / ಕರ್ನಾಟಕ /
ಬಂಡೀಪುರದಲ್ಲಿ ಕಾಡಾನೆ ಸಾವು; ಅಂತ್ಯ ಸಂಸ್ಕಾರ ನೆರವೇರಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ
ಬಂಡೀಪುರದಲ್ಲಿ ಕಾಡಾನೆಯೊಂದು ಮೃತಪಟ್ಟಿದ್ದು, ಸಾವಿಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಳೇಬರದ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ.

ಬಂಡೀಪುರದಲ್ಲಿ ಕಾಡಾನೆ ಸಾವು (ಸಾಂಧರ್ಬಿಕ ಚಿತ್ರ) (Pexels)
ಗುಂಡ್ಲುಪೇಟೆ: ಗೋಪಾಲಸ್ವಾಮಿ ಬೆಟ್ಟ ವಲಯದ ಹಂಗಳ ಹಿರಿಕೆರೆ ಬಳಿ ಕಾಡಾನೆಯೊಂದು ಸಾವನ್ನಪ್ಪಿದ್ದು, ಕಳೇಬರ ಪತ್ತೆಯಾಗಿದೆ. ಸುಮಾರು 35 ರಿಂದ 40 ವರ್ಷದ ಗಂಡಾನೆ ಸಾವಿಗೀಡಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಕಾಡಾನೆ ಸಾವನ್ನಪ್ಪಿರುವ ಸ್ಥಳಕ್ಕೆ ಬಂಡೀಪುರ ಸಿಎಫ್ ಪ್ರಭಾಕರನ್, ಎಸಿಎಫ್ ನವೀನ್ ಕುಮಾರ್ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಪಶು ವೈದ್ಯಾಧಿಕಾರಿಗಳಿಂದ ಮೃತ ಕಾಡಾನೆಯ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಳೇಬರದ ಅಂತ್ಯ ಸಂಸ್ಕಾರವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನೆರವೇರಿಸಿದ್ದಾರೆ.