ಕನ್ನಡ ಸುದ್ದಿ  /  Karnataka  /  Yadagiri Veera Mahanta Shivacharya Swamiji Dies At Bangalore Railway Station Due To Cardiac Arrest

Yadagiri Swamiji: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ದಿಢೀರ್‌ ಕುಸಿದುಬಿದ್ದು ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ನಿನ್ನೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಲಿಂಗೈಕ್ಯರಾಗಿದ್ದಾರೆ.

ದಿಢೀರ್‌ ಕುಸಿದುಬಿದ್ದು ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
ದಿಢೀರ್‌ ಕುಸಿದುಬಿದ್ದು ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ನಿನ್ನೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಲಿಂಗೈಕ್ಯರಾಗಿದ್ದಾರೆ.

ಸ್ವಾಮೀಜಿಯವರು ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ವೇಳೆ ದಿಢೀರ್ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ.

ತಮ್ಮ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಬಿ.ವೈ ವಿಜಯೇಂದ್ರ ಮತ್ತು ಇತರೆ ಗಣ್ಯರಿಗೆ ಆಹ್ವಾನ ನೀಡುವ ಸಲುವಾಗಿ ಸ್ವಾಮೀಜಿ ಬೆಂಗಳೂರಿಗೆ ಆಗಮಿಸಿದ್ದರು. ಫೆಬ್ರವರಿ 25ರಂದು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.

ಬೆಂಗಳೂರಿನ ಭೇಟಿ ಮುಗಿಸಿ ಯಾದಗಿರಿಗೆ ವಾಪಸ್‌ ಆಗುವ ಸಮಯದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆಇವರು ನಿನ್ನೆ ಆಗಮಿಸಿದ್ದರು. ರೈಲ್ವೆ ನಿಲ್ದಾಣದಲ್ಲಿ ನಡೆದಾಡಿಕೊಂಡು ಹೋಗುವ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು.

ತಕ್ಷಣ ಇವರ ಜತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಸಿಪಿಆರ್‌ ಕೂಡ ಮಾಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ಸಮಯದಲ್ಲಿ ಅವರು ಇಹಲೋಕ ತ್ಯಜಿಸಿಯಾಗಿತ್ತು.

ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದೆ.

ಶಿವಮೊಗ್ಗ: ಶಾಲಾ ಬಾಲಕನಿಗೆ ಹೃದಯಾಘಾತ

ಶಿವಮೊಗ್ಗ: ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಿನ್ನೆ ಬೆಳಗ್ಗೆ ವರದಿಯಾಗಿತ್ತು.

ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಜಯಂತ್ ರಜತಾದ್ರಯ್ಯ (16) ಮೃತಪಟ್ಟ ಬಾಲಕನೆಂದು ಗುರುತಿಸಲಾಗಿದೆ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದನು. ಎಣ್ಣೆಕೊಪ್ಪ ಗ್ರಾಮದ ಈತ ಮುಂಜಾನೆ ತರಗತಿಗೆ ಹೊರಡಲು ಸಿದ್ಧವಾಗುವ ವೇಳೆ ಎದೆನೋವು ಕಾಣಿಸಿಕೊಂಡಿದೆ. ಈತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಸಮಯದಲ್ಲಿಯೇ ಮೃತಪಟ್ಟಿದ್ದ.

ಸುರತ್ಕಲ್‌:ಶಾಲಾ ಬಾಲಕನಿಗೆ ಹೃದಯಾಘಾತ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲೂ ಶಾಲಾ ಬಾಲಕನೊಬ್ಬ ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿದ್ದ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದರು. ಈ ಘಟನೆ ಇದೇ ವಾರ ಸೋಮವಾರ ನಡೆದಿತ್ತು. ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

IPL_Entry_Point