ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಕೋಟ್ಯಂತರ ಭಕ್ತರು ನಿರಂತರವಾಗಿ ಆಗಮಿಸುತ್ತಿದ್ದಾರೆ. ನಿರಂತರವಾಗಿ ದೇಶದ ಮೂಲೆ ಮೂಲೆಗಳಿಂದ ಆಗಮಿಸುತ್ತಿರುವ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ದಿನೇದಿನೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಕುಂಭ ಮೇಳದಲ್ಲಿ ಭದ್ರತೆಯೇ ಸವಾಲಾಗಿದೆ.