ಯುದ್ಧದ ಮಧ್ಯೆಯೂ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ಐಎಂಎಫ್: ಭಾರತ ಆಕ್ಷೇಪ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಯುದ್ಧದ ಮಧ್ಯೆಯೂ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ಐಎಂಎಫ್: ಭಾರತ ಆಕ್ಷೇಪ

ಯುದ್ಧದ ಮಧ್ಯೆಯೂ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ಐಎಂಎಫ್: ಭಾರತ ಆಕ್ಷೇಪ

ಭಾರತದ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲವನ್ನು ಉಲ್ಲೇಖಿಸಿ ಪಾಕಿಸ್ತಾನಕ್ಕೆ ನೆರವು ನೀಡುವ ಐಎಂಎಫ್ ನಿರ್ಧಾರವನ್ನು ಭಾರತ ಪ್ರಶ್ನಿಸಿರುವ ಮಧ್ಯೆಯೇ ಐಎಂಎಫ್ 1 ಬಿಲಿಯನ್ ಡಾಲರ್ ನೆರವು ಘೋಷಿಸಿದೆ.

ಪಾಕ್  ಪ್ರಧಾನಿ ಮುಹಮ್ಮದ್ ಶೆಹಬಾಜ್ ಷರೀಫ್
ಪಾಕ್ ಪ್ರಧಾನಿ ಮುಹಮ್ಮದ್ ಶೆಹಬಾಜ್ ಷರೀಫ್ (AFP)

ನವದೆಹಲಿ: ಭಾರತದ ವಿರುದ್ಧ ಉಗ್ರವಾದ ಮತ್ತು ಕಾಲು ಕೆರೆದು ಯುದ್ಧಕ್ಕೆ ಬರುತ್ತಿರುವ ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 1 ಬಿಲಿಯನ್ ಡಾಲರ್ ನೆರವು ಘೋಷಣೆ ಮಾಡಿದೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಭಾರತದೊಂದಿಗೆ ಸಂಘರ್ಷಕ್ಕೆ ಇಳಿದಿದೆ. ಆದರೂ ಐಎಂಎಫ್ ಕಾರ್ಯನಿರ್ವಾಹಕ ಮಂಡಳಿಯು ತನ್ನ 7 ಬಿಲಿಯನ್ ಡಾಲರ್ ನೆರವಿನ ಪೈಕಿ ಮೊದಲ ಕಂತಿನಲ್ಲಿ 1 ಬಿಲಿಯನ್ ಡಾಲರ್ (85,42,48,90,600 ರೂ.) ನೆರವು ಬಿಡುಗಡೆ ಮಾಡಿದೆ.

ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ಹಣಕಾಸು ನಿಧಿ 1 ಬಿಲಿಯನ್ ಡಾಲರ್ ಮೊದಲ ಕಂತನ್ನು ಅನುಮೋದಿಸಿದ ಬಗ್ಗೆ ಪ್ರಧಾನಿ ಮುಹಮ್ಮದ್ ಶೆಹಬಾಜ್ ಷರೀಫ್ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಐಎಂಎಫ್‌ ಇತ್ತೀಚಿನ ಅನುಮೋದನೆಯು 7 ಬಿಲಿಯನ್ ಡಾಲರ್ ನೆರವು ಯೋಜನೆಯಲ್ಲಿ ಈಗಾಗಲೇ 2 ಬಿಲಿಯನ್ ಡಾಲರ್ ನೆರವು ಪಾಕಿಸ್ತಾನಕ್ಕೆ ಲಭ್ಯವಾಗಿದೆ. ಭಾರತದ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲವನ್ನು ಉಲ್ಲೇಖಿಸಿ ಪಾಕಿಸ್ತಾನಕ್ಕೆ ತನ್ನ ಸಾಲಗಳನ್ನು ಪರಿಶೀಲಿಸುವಂತೆ ಭಾರತ ಸರ್ಕಾರ ಐಎಂಎಫ್‌ಗೆ ಮನವಿ ಮಾಡಿಕೊಂಡಿದ್ದರೂ, ಪಾಕಿಸ್ತಾನಕ್ಕೆ ಮತ್ತೆ ನೆರವಿನ ಘೋಷಣೆಯಾಗಿದೆ.

ನವದೆಹಲಿ ಮತ್ತು ಇಸ್ಲಾಮಾಬಾದ್ ನಡುವೆ ಉದ್ವಿಗ್ನತೆ ಹೆಚ್ಚಾಗುವ ಮೊದಲೇ ಐಎಂಎಫ್ ಪಾಕಿಸ್ತಾನಕ್ಕೆ ನೆರವು ಘೋಷಣೆಯಾಗಿತ್ತು ಎಂಬ ಮಾಹಿತಿಯಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಪಾಕ್‌ಗೆ ನೆರವು ಅನುಮೋದನೆಯ ನಂತರ ಪ್ರತಿಕ್ರಿಯೆಗಾಗಿ ಏಜೆನ್ಸಿಯ ಮನವಿಗೆ ಜಾಗತಿಕ ಸಂಸ್ಥೆ ಪ್ರತಿಕ್ರಿಯಿಸಲಿಲ್ಲ. ಪಾಕಿಸ್ತಾನಕ್ಕೆ 2.3 ಬಿಲಿಯನ್ ಡಾಲರ್ ಹೊಸ ಸಾಲವನ್ನು ವಿಸ್ತರಿಸುವ ಐಎಂಎಫ್ ಪ್ರಸ್ತಾಪವನ್ನು ಭಾರತ ಶುಕ್ರವಾರ ವಿರೋಧಿಸಿದ್ದು, ಅವುಗಳನ್ನು ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣಕಾಸು ಒದಗಿಸಲು ದುರುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.