Cyclone Remal: ಮೇ 26ಕ್ಕೆ ಪಶ್ಚಿಮ ಬಂಗಾಳಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಒಡಿಶಾದಲ್ಲೂ ಭಾರಿ ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Cyclone Remal: ಮೇ 26ಕ್ಕೆ ಪಶ್ಚಿಮ ಬಂಗಾಳಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಒಡಿಶಾದಲ್ಲೂ ಭಾರಿ ಮಳೆಯ ಮುನ್ಸೂಚನೆ

Cyclone Remal: ಮೇ 26ಕ್ಕೆ ಪಶ್ಚಿಮ ಬಂಗಾಳಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಒಡಿಶಾದಲ್ಲೂ ಭಾರಿ ಮಳೆಯ ಮುನ್ಸೂಚನೆ

ರೆಮಲ್ ಚಂಡಮಾರುತವು ಮೇ 26 ರಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ 26ಕ್ಕೆ ಪಶ್ಚಿಮ ಬಂಗಾಳಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದ ಬಂಗಾಳ ಮತ್ತು ಒಡಿಶಾದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮೇ 26ಕ್ಕೆ ಪಶ್ಚಿಮ ಬಂಗಾಳಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದ ಬಂಗಾಳ ಮತ್ತು ಒಡಿಶಾದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ದೆಹಲಿ: ಬಂಗಾಳಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತವು ಶನಿವಾರ (ಮೇ 25) ಸಂಜೆಯ ವೇಳೆಗೆ ಚಂಡಮಾರುತವಾಗಿ ಕೇಂದ್ರೀಕರಿಸುವ ಸಾಧ್ಯತೆ ಇರುವುದರಿಂದ ರೆಮಲ್ ಚಂಡಮಾರುತವು (Remal Cyclone) ಶೀಘ್ರದಲ್ಲೇ ಭೂಮಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ರೆಮಲ್ ಚಂಡಮಾರುತದ ಪರಿಣಾಮವಾಗಿ ಬಾಂಗ್ಲಾದೇಶ (Bangladesh) ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ (West Bengal) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological department) ನೀಡಿದೆ.

ಚಂಡಮಾರುತವು ಗಂಟೆಗೆ 110-120 ಕಿ.ಮೀ ವೇಗದಲ್ಲಿ ಭೂಮಿಗೆ ಅಪ್ಪಳಿಸುವುದರಿಂದ ಭೂಕುಸಿತ ಉಂಟಾಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೆಮಲ್ ಮೇ 26 (ಭಾನುವಾರ) ರ ರಾತ್ರಿ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ, ಆದರೆ ಇದಕ್ಕೂ ಮುನ್ನ ಅಂದರೆ ಮೇ 25 (ಶನಿವಾರ) ರ ಸಂಜೆಯ ವೇಳೆಗೆ ಬಂಗಾಳಕೊಳ್ಳಿಯಲ್ಲಿನ ಆಳವಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಲಿದೆ ಎಂದು ತಿಳಿಸಿದೆ.

ಚಂಡಮಾರುತದಿಂದಾಗಿ ಎಚ್ಚರಿಕೆ ನೀಡಿದ ಐಎಂಡಿ, ಮೇ 26-27 (ಭಾನುವಾರ-ಸೋಮವಾರ) ರಂದು ಪಶ್ಚಿಮ ಬಂಗಾಳ (West Bengal Rain) ಮತ್ತು ಉತ್ತರ ಒಡಿಶಾದ ಕರಾವಳಿ (Odisha Rain) ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಮೇ 27-28 (ಸೋಮವಾರ-ಮಂಗಳವಾರ) ರಂದು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಮೇ 26 (ಸೋಮವಾರ) ರ ರಾತ್ರಿ ಭೂಮಿಗೆ ಅಪ್ಪಳಿಸುವ ಸಮಯದಲ್ಲಿ, ರೆಮಲ್ ಚಂಡಮಾರುತವು 1.5 ಮೀಟರ್ ವರೆಗೆ ಚಂಡಮಾರುತದ ಉಲ್ಬಣವನ್ನು ಹೊಂದುವ ನಿರೀಕ್ಷೆಯಿದೆ, ಇದು ಕರಾವಳಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ತಗ್ಗು ಪ್ರದೇಶಗಳನ್ನು ಮುಳುಗಿಸುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಿದೆ.

ಪಶ್ಚಿಮ ಬಂಗಾಳದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯ ತೀರದಲ್ಲಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದ್ದು, ಮೇ 27 (ಸೋಮವಾರ) ರ ಬೆಳಿಗ್ಗೆಯವರೆಗೆ ಉತ್ತರ ಬಂಗಾಳ ಕೊಲ್ಲಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸಲಹೆ ನೀಡಿದೆ. ಇದಲ್ಲದೆ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳಿಗೆ ಮೇ 26 ಮತ್ತು 27 (ಭಾನುವಾರ ಮತ್ತು ಸೋಮವಾರ) ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮೇ 26 (ಭಾನುವಾರ) ಮತ್ತು ಮೇ 27 (ಸೋಮವಾರ) ರಂದು ಕೋಲ್ಕತ್ತಾ, ಹೌರಾ, ನಾಡಿಯಾ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗಂಟೆಗೆ 80 ರಿಂದ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಮತ್ತು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ.

ಉತ್ತರ ಒಡಿಶಾದ ಕರಾವಳಿ ಜಿಲ್ಲೆಗಳಾದ ಬಾಲಸೋರ್, ಭದ್ರಾಕ್ ಮತ್ತು ಕೇಂದ್ರಪಾರದಲ್ಲಿ ಮೇ 26-27 ರಂದು ಭಾರಿ ಮಳೆಯಾಗಲಿದ್ದು, ಮೇ 27 ರಂದು ಮಯೂರ್ಭಂಜ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕಡಲ ತೀರದಲ್ಲಿ ವಾಸಿಸುವವರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೇ 27 ರವರೆಗೆ ಮನೆಯೊಳಗೆ ಇರಲು ಸೂಚಿಸಲಾಗಿದೆ. ಮೇ 26 ಮತ್ತು 27 ರಂದು ಸ್ಥಳೀಯ ಪ್ರವಾಹ ಮತ್ತು ವಿದ್ಯುತ್ ಮಾರ್ಗಗಳು, ಬೆಳೆಗಳು ಮತ್ತು ಹಣ್ಣಿನ ತೋಟಗಳಿಗೆ ಹಾನಿಯಾಗುವ ಬಗ್ಗೆಯೂ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.