ಪಾಕಿಸ್ತಾನದ ವಾಯು ರಕ್ಷಣಾ ದಾಳಿ ಪ್ರಯತ್ನ ವಿಫಲಗೊಳಿಸಿದ ಭಾರತ, ಲಾಹೋರ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಪಾಕಿಸ್ತಾನದ ವಾಯು ರಕ್ಷಣಾ ದಾಳಿ ಪ್ರಯತ್ನ ವಿಫಲಗೊಳಿಸಿದ ಭಾರತ, ಲಾಹೋರ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಪಾಕಿಸ್ತಾನದ ವಾಯು ರಕ್ಷಣಾ ದಾಳಿ ಪ್ರಯತ್ನ ವಿಫಲಗೊಳಿಸಿದ ಭಾರತ, ಲಾಹೋರ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಅರಂಭಿಸಿರುವ ಆಪರೇಷನ್‌ ಸಿಂದೂರ್‌ ಮುಂದುವರಿದ ಭಾಗವಾಗಿ ಪಾಕಿಸ್ತಾನದಿಂದ ನಡೆದ ಪ್ರತಿ ದಾಳಿ ತಡೆದಿರುವ ಭಾರತದ ಸೇನೆ ಲಾಹೋರ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ ಮಾಡಿದೆ.

ಭಾರತ ಸೇನೆಯು ಲಾಹೋರ್‌ನಲ್ಲಿರುವ ಪಾಕಿಸ್ತಾನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ ಮಾಡಿದೆ
ಭಾರತ ಸೇನೆಯು ಲಾಹೋರ್‌ನಲ್ಲಿರುವ ಪಾಕಿಸ್ತಾನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ ಮಾಡಿದೆ

ದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಗುರುವಾರ ತಡರಾತ್ರಿ ಮತ್ತು ಬೆಳಗಿನ ಜಾವ ಉದ್ವಿಗ್ನತೆಯನ್ನು ಹೆಚ್ಚಿಸಲು ಪಾಕಿಸ್ತಾನ ಮಾಡಿದ ಪ್ರಯತ್ನಗಳನ್ನು ಭಾರತ ಸೇನೆ ತಡೆದಿವೆ. ಎಂದು ಸರ್ಕಾರ ಗುರುವಾರ ತಿಳಿಸಿದೆ. ಅಲ್ಲದೇ ಶ್ರೀನಗರ, ಪಠಾಣ್‌ಕೋಟ್, ಅಮೃತಸರ, ಲುಧಿಯಾನ ಮತ್ತು ಚಂಡೀಗಢ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಲು ಪಾಕ್ ಮಾಡಿದ ಪ್ರಯತ್ನಗಳಿಗೆ ಪ್ರತಿಕ್ರಿಯೆಯಾಗಿ ಲಾಹೋರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪಾಕಿಸ್ತಾನದ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಭಾರತೀಯ ಪಡೆಗಳು ಗುರಿಯಾಗಿಸಿ ಧ್ವಂಸಗೊಳಿಸಿದೆ ಎಂದು ಸರ್ಕಾರ ಹೇಳಿದೆ.

ಶ್ರೀನಗರ, ಪಠಾಣ್‌ಕೋಟ್, ಅಮೃತಸರ, ಲುಧಿಯಾನ ಮತ್ತು ಚಂಡೀಗಢ ಸೇರಿದಂತೆ ಹಲವು ಸ್ಥಳಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಮಾಡಿದ ಪ್ರಯತ್ನಗಳಿಗೆ ಪ್ರತಿಯಾಗಿ, ಪಾಕಿಸ್ತಾನದ ಪ್ರಮುಖ ನಗರ ಲಾಹೋರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪಾಕಿಸ್ತಾನದ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಪಡೆಗಳು ದಾಳಿ ನಡೆಸಿದವು ಎಂದು ತಿಳಿಸಲಾಗಿದೆ. ಪಾಕಿಸ್ತಾನ ನಡೆಸಿದ ದಾಳಿಯಂತೆಯೇ ಭಾರತೀಯ ಪಡೆಗಳ ಪ್ರತಿಕ್ರಿಯೆಯೂ ಅದೇ ಕ್ಷೇತ್ರದಲ್ಲಿ ಹೆಚ್ಚಿನ ತೀವ್ರತೆಯೊಂದಿಗೆ ಇತ್ತು ಎಂದು ಸರ್ಕಾರ ಇಂದು ಮಧ್ಯಾಹ್ನ ಸ್ಪಷ್ಟಪಡಿಸಿದೆ.

ಬುಧವಾರವೇ ನಡೆಸಿದ್ದ ಆಪರೇಷನ್‌ ಸಿಂದೂರ್‌ ಭಾಗವಾಗಿ ಉಗ್ರರ ಅಡಗುದಾಣ, ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಲಾಗಿತ್ತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ ದಾಳಿ ನಡೆಸಿದ್ದರಿಂದ ಭಾರತವೂ ಪ್ರತ್ಯುತ್ತರ ನೀಡಲು ಆರಂಭಿಸಿದೆ. ಇದರ ಭಾಗವಾಗಿಯೇ ಪಾಕಿಸ್ತಾನದ ಲಾಹೋರ್‌ನಲ್ಲಿರುವ ವಾಯುನೆಲೆಯನ್ನು ಧ್ವಂಸ ಮಾಡಲಾಗಿದೆ.

2025 ರ 07-08 ಮೇ ರಂದು ಪಾಕಿಸ್ತಾನವು ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ, ಭುಜ್‌ಲೈ, ಉತ್ತರಾಲೈ, ಭುಜ್‌ಲಾಯಿ ಸೇರಿದಂತೆ ಹಲವಾರು ಸೇನಾ ಗುರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಯಿತು. ಈ ದಾಳಿಗಳ ಅವಶೇಷಗಳನ್ನು ಈಗ ಪಾಕಿಸ್ತಾನಿ ದಾಳಿಗಳನ್ನು ಸಾಬೀತುಪಡಿಸುವ ಹಲವಾರು ಸ್ಥಳಗಳಿಂದ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಪ್ರೆ ಸ್‌ ಬ್ಯೂರೋ ಆಫ್‌ ಇಂಡಿಯಾ( PIB) ಬಿಡುಗಡೆ ಮಾಡಿರುವ ಪ್ರಕರಣೆಯಲ್ಲಿ ತಿಳಿಸಲಾಗಿದೆ.

ಗುರುವಾರ ಬೆಳಿಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡವು. ಭಾರತದ ಪ್ರತಿಕ್ರಿಯೆಯು ಪಾಕಿಸ್ತಾನದಂತೆಯೇ ಅದೇ ಕ್ಷೇತ್ರದಲ್ಲಿ ಮತ್ತು ಅದೇ ತೀವ್ರತೆಯಿಂದ ಕೂಡಿದೆ. ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ವಿಶ್ವಾಸಾರ್ಹವಾಗಿ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿ ಪಾಕಿಸ್ತಾನವು ನಿಯಂತ್ರಣ ರೇಖೆಯುದ್ದಕ್ಕೂ ಮಾರ್ಟರ್‌ಗಳು ಮತ್ತು ಭಾರೀ ಕ್ಯಾಲಿಬರ್ ಫಿರಂಗಿಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ.ಪಾಕಿಸ್ತಾನದ ಗುಂಡಿನ ದಾಳಿಯಿಂದಾಗಿ ಮೂವರು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಹದಿನಾರು ಮುಗ್ಧ ಜೀವಗಳು ಬಲಿಯಾಗಿವೆ. ಇಲ್ಲಿಯೂ ಸಹ, ಪಾಕಿಸ್ತಾನದಿಂದ ಬಂದ ಮಾರ್ಟರ್ ಮತ್ತು ಫಿರಂಗಿ ಗುಂಡಿನ ದಾಳಿಯನ್ನು ನಿಲ್ಲಿಸಲು ಭಾರತವು ಪ್ರತಿಕ್ರಿಯಿಸಬೇಕಾಯಿತು. ಪಾಕಿಸ್ತಾನಿ ಸೇನೆಯು ಗೌರವಿಸಿದರೆ, ಉದ್ವಿಗ್ನತೆ ಹೆಚ್ಚಾಗದಂತೆ ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತವೆ ಎಂದು ರಕ್ಷಣಾ ಸಚಿವಾಲಯದ ಪ್ರತಿಕ್ರಿಯೆ ಉಲ್ಲೇಖಿಸಿ ಪಿಐಬಿ ಮಾಹಿತಿ ನೀಡಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.