ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತ: ನೀಟ್-ಯುಜಿ ಫಲಿತಾಂಶಕ್ಕೆ ತಡೆ ನೀಡಿದ ಮದ್ರಾಸ್ ಹೈಕೋರ್ಟ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತ: ನೀಟ್-ಯುಜಿ ಫಲಿತಾಂಶಕ್ಕೆ ತಡೆ ನೀಡಿದ ಮದ್ರಾಸ್ ಹೈಕೋರ್ಟ್

ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತ: ನೀಟ್-ಯುಜಿ ಫಲಿತಾಂಶಕ್ಕೆ ತಡೆ ನೀಡಿದ ಮದ್ರಾಸ್ ಹೈಕೋರ್ಟ್

ನೀಟ್-ಯುಜಿ ಪರೀಕ್ಷೆಯ ದಿನಾಂಕದಂದು ಚೆನ್ನೈನ ಪರೀಕ್ಷಾ ಕೇಂದ್ರದಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಿದ್ಯುತ್ ಕಡಿತವಾಗಿತ್ತು ಎಂದು ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋದ ಪರಿಣಾಮ ಫಲಿತಾಂಶಕ್ಕೆ ತಡೆ ನೀಡಿದೆ.

ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋದ ಪರಿಣಾಮ ಫಲಿತಾಂಶಕ್ಕೆ ತಡೆ
ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋದ ಪರಿಣಾಮ ಫಲಿತಾಂಶಕ್ಕೆ ತಡೆ (HT Archive)

ಚೆನ್ನೈ: ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತೊಂದರೆಗೊಳಗಾದ ಹಲವಾರು ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದ ನಂತರ ಮದ್ರಾಸ್ ಹೈಕೋರ್ಟ್ ನೀಟ್-ಯುಜಿ -2025 ಫಲಿತಾಂಶಗಳನ್ನು ಬಿಡುಗಡೆ ಮಾಡದಂತೆ ಅಧಿಕಾರಿಗಳಿಗೆ ಮಧ್ಯಂತರ ತಡೆ ನೀಡಿದೆ. ನೀಟ್-ಯುಜಿ ಪರೀಕ್ಷೆಯ ದಿನಾಂಕದಂದು ಚೆನ್ನೈನ ಪರೀಕ್ಷಾ ಕೇಂದ್ರದಲ್ಲಿ ಸುಮಾರು ಮಧ್ಯಾಹ್ನ 3.00 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತವಾಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣನ್ ಅವರು ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದ್ದಾರೆ.

ಚಂಡಮಾರುತ ಮತ್ತು ಭಾರಿ ಮಳೆಯಿಂದಾಗಿ, ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಚೆನ್ನೈನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಸಿಆರ್‌ಪಿಎಫ್‌-ಆವಡಿಯಲ್ಲಿ ಪರೀಕ್ಷೆಯ ದಿನಾಂಕದಂದು ಅಂದರೆ ಮೇ 4, 2025 ರಂದು ಸುಮಾರು ಮಧ್ಯಾಹ್ನ 3.00 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತ ಉಂಟಾಗಿತ್ತು ಎಂದು ವಿದ್ಯಾರ್ಥಿಗಳು ನ್ಯಾಯಾಲಯಕ್ಕೆ ದೂರು ನೀಡಿದ್ದರು. 13 ವಿದ್ಯಾರ್ಥಿಗಳ ಅಫಿಡವಿಟ್ ಪ್ರಕಾರ, ನೀಟ್ ಪರೀಕ್ಷಾ ಕೇಂದ್ರದಲ್ಲಿ ಜನರೇಟರ್ ಅಥವಾ ಇನ್‌ವರ್ಟರ್‌ಗಳಂತಹ ಯಾವುದೇ ಬ್ಯಾಕಪ್ ಸೌಲಭ್ಯಗಳು ಇರಲಿಲ್ಲ.

ಕಡಿಮೆ ಬೆಳಕಿನ ಪರಿಸ್ಥಿತಿಗಳಲ್ಲಿ ನಾವು ಪರೀಕ್ಷೆಯನ್ನು ಬರೆಯಲು ಒತ್ತಾಯಿಸಲಾಯಿತು, ಮತ್ತು ಮಳೆನೀರು ಸೋರಿಕೆ ಪರೀಕ್ಷಾ ಕೊಠಡಿಯಲ್ಲಿ ಸಮಸ್ಯೆ ಉಂಟುಮಾಡಿತು. ಇದರಿಂದಾಗಿ ನಿಗದಿಪಡಿಸಿದ ಆಸನಗಳಿಂದ ಎದ್ದು ಬೇರೆಡೆ ಹೋಗಿ ಕುಳಿತುಕೊಳ್ಳಲು ನಮಗೆ ಸೂಚಿಸಿದ್ದರಿಂದ ಮತ್ತಷ್ಟು ಅಡ್ಡಿಯಾಯಿತು ಎಂದು ವಿದ್ಯಾರ್ಥಿಗಳು ದೂರಿದ್ದರು. ಅಲ್ಲದೆ, ಅಡಚಣೆಯ ಹೊರತಾಗಿಯೂ, ಪರೀಕ್ಷಾ ಅಧಿಕಾರಿಗಳು ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುವರಿ ಸಮಯವನ್ನು ನೀಡಲಿಲ್ಲ. ಈ ಕಾರಣದಿಂದಾಗಿ, ಅರ್ಜಿದಾರರು ಪರೀಕ್ಷೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯಕ್ಕೆ ಕೋರಿದ್ದರು.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.