ಕೇಂದ್ರದಿಂದ ಜನಗಣತಿಯೊಂದಿಗೆ ಜಾತಿಗಣತಿ; ನರೇಂದ್ರ ಮೋದಿ ಸರ್ಕಾರದ ಮಹತ್ವದ ಘೋಷಣೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಕೇಂದ್ರದಿಂದ ಜನಗಣತಿಯೊಂದಿಗೆ ಜಾತಿಗಣತಿ; ನರೇಂದ್ರ ಮೋದಿ ಸರ್ಕಾರದ ಮಹತ್ವದ ಘೋಷಣೆ

ಕೇಂದ್ರದಿಂದ ಜನಗಣತಿಯೊಂದಿಗೆ ಜಾತಿಗಣತಿ; ನರೇಂದ್ರ ಮೋದಿ ಸರ್ಕಾರದ ಮಹತ್ವದ ಘೋಷಣೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ವರ್ಷ ಜನಗಣತಿಯ ಜೊತೆಗೆ ಜಾತಿಗಣತಿಯನ್ನೂ ಮಾಡಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಇಂದು (ಏಪ್ರಿಲ್ 30) ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಾತಿಗಣತಿಗೆ ಕೇಂದ್ರದ ಅಸ್ತು; ಮೋದಿ ಸರ್ಕಾರದ ಮಹತ್ವದ ಘೋಷಣೆ
ಜಾತಿಗಣತಿಗೆ ಕೇಂದ್ರದ ಅಸ್ತು; ಮೋದಿ ಸರ್ಕಾರದ ಮಹತ್ವದ ಘೋಷಣೆ

ನವದೆಹಲಿ: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿಗಣತಿಯ ಸಮೀಕ್ಷೆಯನ್ನೂ ನಡೆಸಲಾಗುವುದು ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

‘ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಜನಗಣತಿಯನ್ನು ವಿರೋಧಿಸುತ್ತಲೇ ಬಂದಿವೆ. 2010ರಲ್ಲಿ ದಿವಂಗತ ಡಾ. ಮನಮೋಹನ್ ಸಿಂಗ್ ಜಾತಿ ಜನಗಣತಿಯ ವಿಷಯವನ್ನು ಸಚಿವ ಸಂಪುಟದಲ್ಲಿ ಪರಿಗಣಿಸಬೇಕೆಂದು ಹೇಳಿದ್ದರು. ಈ ವಿಷಯವನ್ನು ಪರಿಗಣಿಸಲು ಸಚಿವರ ಗುಂಪನ್ನು ರಚಿಸಲಾಯಿತು. ಹೆಚ್ಚಿನ ರಾಜಕೀಯ ಪಕ್ಷಗಳು ಜಾತಿ ಜನಗಣತಿಯನ್ನು ಶಿಫಾರಸು ಮಾಡಿವೆ. ಇದರ ಹೊರತಾಗಿಯೂ, ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ಅಥವಾ ಜಾತಿಗಣತಿ ನಡೆಸಲು ನಿರ್ಧರಿಸಿದೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಜಾತಿ ಜನಗಣತಿಯನ್ನು ಕೇವಲ ರಾಜಕೀಯ ಸಾಧನವಾಗಿ ಬಳಸಿಕೊಂಡಿವೆ ಎಂಬುದು ಇದರಿಂದ ಚೆನ್ನಾಗಿ ಅರ್ಥವಾಗುತ್ತದೆ‘ ಎಂದು ಅವರು ದೂರಿದ್ದಾರೆ.

‘ಕೆಲವು ರಾಜ್ಯಗಳು ಜಾತಿ ಸಮೀಕ್ಷೆ ನಡೆಸಿವೆ, ಅಲ್ಲದ ಜಾತಿ ಸಮೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿವೆ. ಇನ್ನೂ ಕೆಲವು ರಾಜ್ಯಗಳು ಅಂತಹ ಸಮೀಕ್ಷೆಗಳನ್ನು ರಾಜಕೀಯ ದೃಷ್ಟಿಕೋನದಿಂದ ಮಾತ್ರ ಮಾಡಲು ನಿರ್ಧಾರ ಮಾಡಿವೆ. ಅಂತಹ ಸಮೀಕ್ಷೆಗಳು ಸಮಾಜದಲ್ಲಿ ಅನುಮಾನಗಳನ್ನು ಹುಟ್ಟುಹಾಕಿದ್ದಾವು. ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಸಮೀಕ್ಷೆಗಳ ಬದಲಿಗೆ ಜಾತಿ ಎಣಿಕೆಯನ್ನು ಜನಗಣತಿಯಲ್ಲಿ ಸೇರಿಸುವ ಅವಶ್ಯವಿದೆ‘ ಎಂದು ಅವರು ಹೇಳಿದ್ದಾರೆ.

‘ಇಂದು ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಬೇಕೆಂದು ನಿರ್ಧರಿಸಿದೆ" ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಸುಮಾರು 94 ವರ್ಷಗಳ ನಂತರ ದೇಶಾದ್ಯಂತ ಜಾತಿ ಗಣತಿ ನಡೆಯಲಿದೆ. ನಮ್ಮ ದೇಶದಲ್ಲಿ 1931 ರಲ್ಲಿ ಕೊನೆಯ ಬಾರಿಗೆ ಜಾತಿಗಣತಿ ನಡೆದಿತ್ತು.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.