Odisha Train Accident: ಕೋರಮಂಡಲ ಬೋಗಿಗಳಿಗೆ ಯಶವಂತಪುರ ಹೌರಾ ಎಕ್ಸ್ಪ್ರೆಸ್ ಡಿಕ್ಕಿ; 300ರ ಗಡಿ ದಾಟಿದ ಸಾವಿನ ಸಂಖ್ಯೆ ಶಂಕೆ
Odisha Train Accident: ಅತ್ಯಂತ ಭೀಕರ ರೈಲ್ವೆ ಅಪಘಾತದಲ್ಲಿ ಒಂದು ಗೂಡ್ಸ್ ಮತ್ತು ಎರಡು ಎಕ್ಸ್ಪ್ರೆಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಅನೇಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.
ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಯುಪಿ ಶಾಲಿಮಾರ್- ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿದ್ದು, ಹಲವು ಬೋಗಿಗಳು ಹಳಿ ತಪ್ಪಿದ್ದವು. ಈ ಬೋಗಿಗಳಿಗೆ ಯಶವಂತಪುರ ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದು, ಇನ್ನಷ್ಟು ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ 300ರ ಗಡಿ ದಾಟುವ ಆತಂಕ ವ್ಯಕ್ತವಾಗಿದೆ.
ಟ್ರೆಂಡಿಂಗ್ ಸುದ್ದಿ
ಅತ್ಯಂತ ಭೀಕರ ರೈಲ್ವೆ ಅಪಘಾತದಲ್ಲಿ ಒಂದು ಗೂಡ್ಸ್ ಮತ್ತು ಎರಡು ಎಕ್ಸ್ಪ್ರೆಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಅನೇಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.
ಕೋರಮಂಡಲ್ ಎಕ್ಸ್ಪ್ರೆಸ್ನ ಹದಿನೈದು ಬೋಗಿಗಳು ಹಳಿ ತಪ್ಪಿವೆ. ಇದಲ್ಲದೆ, ಇತರ ಎರಡು ರೈಲುಗಳು ಹಳಿತಪ್ಪಿವೆ.
ಇಂದು (ಜೂ.2) ಸಂಜೆ 7 ಗಂಟೆಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿತಪ್ಪಿದವು ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳಿದರು.
ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಡುವ ಈ ಎಕ್ಸ್ಪ್ರೆಸ್ ರೈಲು ಚೆನ್ನೈನ ಪುರಟ್ಚಿ ತಲೈವರ್ ಡಾ. ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಬೇಕಾಗಿತ್ತು. ಅಪರಾಹ್ನ 3.30 ಕ್ಕೆ ಹೊರಡುವ ರೈಲು ಮುಸ್ಸಂಜೆ 6.30 ಕ್ಕೆ ಬಾಲಸೋರ್ ನಿಲ್ದಾಣವನ್ನು ತಲುಪಿತ್ತು. ನಾಳೆ ( ಜೂನ್ 3) ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು. ಆದರೆ ಬಾಲಸೋರ್ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಬಹನಾಗಾ ರೈಲು ನಿಲ್ದಾಣದ ಬಳಿ ಈ ರೈಲು ಭೀಕರ ಅಪಘಾತಕ್ಕೀಡಾಗಿದೆ.
ಒಡಿಶಾ ರೈಲು ಅಪಘಾತದಲ್ಲಿ ಈವರೆಗೆ 50 ಮಂದಿ ಸಾವನ್ನಪ್ಪಿದ್ದು, 132 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ದಾಖಲಿಸಲಾಗುತ್ತಿದೆ. ಸುಮಾರು 50 ಆ್ಯಂಬುಲೆನ್ಸ್ಗಳು ಸ್ಥಳಕ್ಕೆ ದೌಡಾಯಿಸಿದೆ. ಗಾಯಾಳುಗಳ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.