ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ, ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ, ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ್

ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ, ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ್

ಆಪರೇಷನ್ ಸಿಂದೂರ್: ಪಹಲ್ಗಾಮ್‌ ದಾಳಿಯ ಸಂದರ್ಭದಲ್ಲಿ (ಏಪ್ರಿಲ್ 22) ಭಾರತೀಯ ಮಹಿಳೆಯರ ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂಬ ಸಂದೇಶ ನೀಡಿದವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದಾರೆ. ಭಾರತ ಸರ್ಕಾರ ಆಪರೇಷನ್ ಸಿಂದೂರ ನಡೆಸಿದ್ದು, ಪ್ರಧಾನಿ ಮೋದಿಯ ನಿಗಾದಲ್ಲೇ ಇದು ನಡೆದಿರುವುದಾಗಿ ವರದಿ ಹೇಳಿದೆ.

ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ ನೀಡಿದ್ದು, ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯಿತು.
ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ ನೀಡಿದ್ದು, ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯಿತು.

ಆಪರೇಷನ್ ಸಿಂಧೂರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವೇಳೆ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಭಾರತ ಸರ್ಕಾರ ಬುಧವಾರ (ಮೇ 7) ನಸುಕಿನ ವೇಳೆ ತಕ್ಕ ಪ್ರತ್ಯುತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನಿಗಾದಲ್ಲೇ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದ ನಿಶ್ಚಿತ 9 ಉಗ್ರ ನೆಲೆ (ಉಗ್ರ ತಾಣ)ಗಳ ಮೇಲೆ ಭಾರತ ದಾಳಿ ನಡೆಸಿದೆ. ಈ ಕಾರ್ಯಾಚರಣೆಗೆ ಭಾರತ ಆಪರೇಷನ್ ಸಿಂಧೂರ ಎಂಬ ಹೆಸರನ್ನೂ ಇಟ್ಟಿದೆ. ಭಾರತ ನಡೆಸಿದ ದಾಳಿಯು ನಿಶ್ಚಿತವಾದ ಅಂದರೆ ಕೇಂದ್ರೀಕೃತ ಹಾಗೂ ಅಳೆದು ತೂಗಿದ ಪ್ರಚೋದನಕಾರಿಯಲ್ಲದ ಭಯೋತ್ಪಾದನಾ ನೆಲೆಗಳ ಮೇಲಿನ ದಾಳಿ ಎಂಬುದನ್ನು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.

ಸಿಂದೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಪ್ರಧಾನಿ ಮೋದಿ ಪ್ರತ್ಯುತ್ತರ

ಜಮ್ಮು - ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ಅಮಾಯಕ ಭಾರತೀಯ ಮಹಿಳೆಯರ ಪತಿಯಂದಿರನ್ನು ಹತ್ಯೆ ಮಾಡಿದ ಉಗ್ರರು, ಮೋದಿಗೆ ಹೋಗಿ ಹೇಳು ಎಂಬ ಸಂದೇಶ ನೀಡಿದ್ದರು. ಮಹಿಳೆಯರು ಅಳುತ್ತ ಈ ವಿಚಾರವನ್ನು ಹೇಳಿಕೊಂಡಿದ್ದರು. ಉಗ್ರರ ಸವಾಲನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ, ಸ್ವತಃ ಆಪರೇಷನ್ ಸಿಂದೂರ ಕಾರ್ಯಾಚರಣೆ ಮೇಲೆ ನಿಗಾವಹಿಸಿದ್ದರು. ಪಹಲ್ಗಾಮ್ ದಾಳಿಯನ್ನು ಸಂಭ್ರಮಿಸಿದ ಪಾಕಿಸ್ತಾನ, ಪಿಒಕೆಯ ಉಗ್ರ ನೆಲೆಗಳನ್ನು ಟಾರ್ಗೆಟ್ ಮಾಡಿ ಭಾರತ ದಾಳಿ ನಡೆಸಿತು. ಪಾಕಿಸ್ತಾನ ಮತ್ತು ಪಾಕಿಸ್ತಾನದ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಗುರಿಗಳಿಗೆ ನಿಖರ ದಾಳಿ ನಡೆಸಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಪೂರ್ಣಗೊಳಿಸಿದೆ. ಈ ಉಗ್ರ ನೆಲೆಗಳಲ್ಲಿ ನಿಷೇಧಿತ ಜೈಷ್‌ ಏ ಮೊಹಮ್ಮದ್ ಸಂಘಟನೆಯ ಕೇಂದ್ರ ಸ್ಥಾನ ಬಹವಾಲ್ಪುರ ಕೂಡ ಸೇರಿಕೊಂಡಿದೆ.

ಪಾಕ್‌, ಪಿಒಕೆ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ

ಪಹಲ್ಗಾಮ್‌ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪದೇಪದೆ ಎಚ್ಚರಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಉಗ್ರರಿಗೆ ಹಾಗೂ ಉಗ್ರವಾದ ಪೋಷಕರಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಹೇಳಿ ರಾಜತಾಂತ್ರಿಕ ನಡೆಗಳನ್ನು ಅನುಸರಿಸಿದ್ದರು. ಬುಧವಾರ (ಮೇ 7) ಮಾಕ್‌ ಡ್ರಿಲ್ ಅಥವಾ ಅಣಕು ಯುದ್ಧ ತಾಲೀಮು ನಡೆಸುವಂತೆ ಭಾರತ ಸರ್ಕಾರ ಸೋಮವಾರ ಆದೇಶ ನೀಡಿತ್ತು. ಎಲ್ಲರ ಗಮನ ಅದರ ಮೇಲೆ ಇದ್ದಾಗ ಇಂದು (ಮೇ 7) ನಸುಕಿನ ವೇಳೆ ಆಪರೇಷನ್ ಸಿಂದೂರ್ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ.

ಆಪರೇಷನ್ ಸಿಂದೂರ ಕಾರ್ಯಾಚರಣೆ ಶುರುವಾಗುತ್ತಿದ್ದಂತೆಯೇ, ಭಾರತದ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದ್ದು, ಭಾರತದ ಸಶಸ್ತ್ರ ಪಡೆಗಳು ಕೆಲ ಹೊತ್ತಿನ ಮೊದಲು ಆಪರೇಷನ್ ಸಿಂದೂರ ಕಾರ್ಯಾಚರಣೆ ಶುರುಮಾಡಿವೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದ ಉಗ್ರ ನೆಲೆಗಳನ್ನು ಟಾರ್ಗೆಟ್ ಮಾಡಿ ಈ ದಾಳಿ ಕಾರ್ಯಾಚರಣೆ ನಡೆದಿದೆ. ಭಾರತದಲ್ಲಿ ಉಗ್ರ ಕೃತ್ಯಗಳ ಸಂಚು ರೂಪಿಸಲ್ಪಡುವ ಹಾಗೂ ದಾಳಿಗೆ ನಿರ್ದೇಶನ ನೀಡಲ್ಪಡುವ ಕೇಂದ್ರಗಳನ್ನೇ ಟಾರ್ಗೆಟ್ ಮಾಡಿ ಈ ದಾಳಿ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿತು.

ಆಪರೇಷನ್ ಸಿಂದೂರದಲ್ಲಿ 9 ಉಗ್ರ ನೆಲೆಗಳು ಟಾರ್ಗೆಟ್

ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯ 9 ಉಗ್ರ ನೆಲೆಗಳನ್ನು ಟಾರ್ಗೆಟ್ ಮಾಡಲಾಗಿತ್ತು. ಪಾಕಿಸ್ತಾನ ಸೇನೆಯ ನೆಲೆಗಳನ್ನು ಟಾರ್ಗೆಟ್ ಮಾಡಿಲ್ಲ. ಭಾರತ ನಡೆಸಿದ ದಾಳಿಯು ನಿಶ್ಚಿತವಾದ ಅಂದರೆ ಕೇಂದ್ರೀಕೃತ ಹಾಗೂ ಅಳೆದು ತೂಗಿದ ಪ್ರಚೋದನಕಾರಿಯಲ್ಲದ ಭಯೋತ್ಪಾದನಾ ನೆಲೆಗಳ ಮೇಲಿನ ದಾಳಿ ಎಂದು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.

9 ದಾಳಿ ಸ್ಥಳಗಳ ಪೈಕಿ ಬಹವಾಲ್ಪುರದಲ್ಲಿರುವ ಜೈಷ್ ಏ ಮೊಹಮ್ಮದ್ (ಜೆಇಎಂ) ಸಂಘಟನೆಯ ಕೇಂದ್ರ ಕಚೇರಿ, ಮುರಿಡ್ಕೆಯಲ್ಲಿರುವ ಲಷ್ಕರ್ ಏ ತೊಯ್ಬಾ (ಎಲ್‌ಇಟಿ) ಸಂಘಟನೆ ಕೇಂದ್ರ ಕಚೇರಿಗಳು ನಾಶವಾಗಿವೆ.

ಈ ದಾಳಿ ಬಳಿಕ ಭಾರತೀಯ ಸೇನೆ ಜಸ್ಟೀಸ್ ಈ ಸರ್ವ್ಡ್‌ ಎಂದೂ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತ್ ಮಾತಾ ಕೀ ಜೈ ಎಂದೂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಪಹಲ್ಗಾಮ್ ದಾಳಿ ಸಂತ್ರಸ್ತ ಮಹಿಳೆಯರು ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಹೇಳತೊಡಗಿದ್ದಾರೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.