ಜಮ್ಮು: ಸಾಂಬಾ ಸೆಕ್ಟರ್‌ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಜೈಶ್ ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಜಮ್ಮು: ಸಾಂಬಾ ಸೆಕ್ಟರ್‌ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಜೈಶ್ ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು: ಸಾಂಬಾ ಸೆಕ್ಟರ್‌ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಜೈಶ್ ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್

ಸಾಂಬಾ ಸೆಕ್ಟರ್‌ನಲ್ಲಿ 7 ಜೆಇಎಂ ನುಸುಳುಕೋರರನ್ನು ಹೊಡೆದುರುಳಿಸಿದ ಬಿಎಸ್ಎಫ್, ಒಳನುಸುಳುವಿಕೆ ಪ್ರಯತ್ನಕ್ಕೆ ಅನುಕೂಲವಾಗಿದ್ದ ಪಾಕಿಸ್ತಾನ ಪೋಸ್ಟ್ ಧಂಧರ್‌ಗೆ ವ್ಯಾಪಕ ಹಾನಿಯನ್ನುಂಟು ಮಾಡಿದೆ.

ಸಾಂಬಾ ಸೆಕ್ಟರ್‌ನಲ್ಲಿ 7 ಜೆಇಎಂ ನುಸುಳುಕೋರರನ್ನು ಹೊಡೆದುರುಳಿಸಿದ ಬಿಎಸ್ಎಫ್
ಸಾಂಬಾ ಸೆಕ್ಟರ್‌ನಲ್ಲಿ 7 ಜೆಇಎಂ ನುಸುಳುಕೋರರನ್ನು ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು: ಜಮ್ಮುವಿನ ಸಾಂಬಾ ಸೆಕ್ಟರ್ ಮೂಲಕ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ನಿಷೇಧಿತ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಏಳು ಜನ ನುಸುಳುಕೋರರನ್ನು ಗಡಿ ಭದ್ರತಾ ಪಡೆ ಗುರುವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆಗೈದಿದೆ. ಕಾರ್ಯಾಚರಣೆಯ ಸಮಯದಲ್ಲಿ, ಬಿಎಸ್ಎಫ್ ಪಾಕಿಸ್ತಾನ ರೇಂಜರ್ಸ್ ಗಡಿ ಹೊರಠಾಣೆಗೆ ವ್ಯಾಪಕ ಹಾನಿಯನ್ನುಂಟು ಮಾಡಿದೆ. ಅದರ ಮೂಲಕ ಪಾಕಿಸ್ತಾನ, ಒಳನುಸುಳುವವರನ್ನು ಬೆಂಬಲಿಸುತ್ತಿತ್ತು ಮತ್ತು ಅವರಿಗೆ ಸುಲಭ ಪ್ರವೇಶಕ್ಕೆ ಅನುವು ಮಾಡಿಕೊಡುತ್ತಿತ್ತು.

ಜಮ್ಮು ಫ್ರಾಂಟಿಯರ್ ಬಿಎಸ್ಎಫ್‌ನ ಸಾಂಬಾ ಸೆಕ್ಟರ್‌ನಲ್ಲಿ, 2025 ರ ಮೇ 8 ಮತ್ತು 9 ರ ಮಧ್ಯರಾತ್ರಿಯಲ್ಲಿ, ಭಯೋತ್ಪಾದಕರ ದೊಡ್ಡ ಗುಂಪಿನ ಒಳನುಸುಳುವಿಕೆ ಪ್ರಯತ್ನವನ್ನು ತಡೆಹಿಡಿಯಲಾಗಿದೆ, ಉಗ್ರರ ಕೃತ್ಯವನ್ನು ಕಣ್ಗಾವಲು ಗ್ರಿಡ್ ಪತ್ತೆ ಮಾಡಿದೆ. ಈ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್ಎಫ್‌ನ ಜಾಗೃತ ಪಡೆಗಳು ತಡೆದಿದ್ದು, ಕನಿಷ್ಠ 7 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಮತ್ತು ಉಗ್ರರಿಗೆ ಬೆಂಬಲ ನೀಡುತ್ತಿದ್ದ ಪಾಕ್ ರೇಂಜರ್ಸ್ ಪೋಸ್ಟ್ ಧಂಧರ್‌ಗೆ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಆಪರೇಷನ್ ಸಿಂದೂರ್ ಭಾಗವಾಗಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಜೈಶ್ ಮೊಹಮ್ಮದ್ ತರಬೇತಿ ಮೈದಾನ ಮತ್ತು ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದವು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ ಸಂಘಟಿತ ದಾಳಿ ನಡೆಸಿತ್ತು.

ಪಾಕಿಸ್ತಾನ ರೇಂಜರ್‌ಗಳ ಬೆಂಬಲದೊಂದಿಗೆ ಜೈಶ್ ಭಯೋತ್ಪಾದಕರು ಭಾರತದ ಗಡಿಯೊಳಕ್ಕೆ ಒಳನುಸುಳಲು ಅನುಕೂಲ ಕಲ್ಪಿಸಿತ್ತು. ಇದರಿಂದಾಗಿ ಜಮ್ಮು, ಪಠಾಣ್‌ಕೋಟ್ ಮತ್ತು ಜೈಸಲ್ಮೇರ್‌ನ ಅನೇಕ ಸ್ಥಳಗಳಲ್ಲಿ ಉಗ್ರ ದಾಳಿ ಸಂಭವಿಸಿತ್ತು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಪಡೆಗಳು ಹಲವಾರು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅವರ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುವ ಮೂಲಕ ಉಗ್ರರ ಯತ್ನವನ್ನು ವಿಫಲಗೊಳಿಸಿದೆ. ಹತಾಶ ಪಾಕಿಸ್ತಾನ ಈಗ ರೇಂಜರ್‌ಗಳ ಸಹಾಯದಿಂದ ಉಗ್ರರನ್ನು ಗಡಿಯೊಳಕ್ಕೆ ಕಳುಹಿಸುವ ಪ್ರಯತ್ನ ಮಾಡುತ್ತಿದೆ ಎಂದು ವರದಿ ತಿಳಿಸಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.