Assembly Election: ಮತದಾರರಿಗೆ ಕುಕ್ಕರ್ ಹಂಚುತ್ತಿರುವ ಅರವಿಂದ್ ಲಿಂಬಾವಳಿ, ರಾಮಲಿಂಗಾ ರೆಡ್ಡಿ.. PHOTOS
- ರಾಜ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಧಿಕಾರಕ್ಕೆ ಬರಲು ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹರಸಾಹಸ ಪಡುತ್ತಿವೆ. ಇತ್ತ ಮತದಾರರನ್ನು ಸೆಳೆಯಲು ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಕುಕ್ಕರ್ ಹಂಚುತ್ತಿರುವುದು ಬೆಳಕಿಗೆ ಬಂದಿದೆ.
- ರಾಜ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಧಿಕಾರಕ್ಕೆ ಬರಲು ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹರಸಾಹಸ ಪಡುತ್ತಿವೆ. ಇತ್ತ ಮತದಾರರನ್ನು ಸೆಳೆಯಲು ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಕುಕ್ಕರ್ ಹಂಚುತ್ತಿರುವುದು ಬೆಳಕಿಗೆ ಬಂದಿದೆ.
(1 / 5)
ತಮ್ಮ ಕ್ಷೇತ್ರದ ಮತದಾರರಿಗೆ ಮಹದೇವಪುರ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಕುಕ್ಕರ್ ಹಂಚುತ್ತಿರುವ ಫೋಟೋಗಳನ್ನು ಸುದ್ದಿಸಂಸ್ಥೆ ಎಎನ್ಐ ಟ್ವಿಟರ್ನಲ್ಲಿ ಶೇರ್ ಮಾಡಿದೆ.
(2 / 5)
2018ರಲ್ಲಿ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ನ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಕ್ಕರ್ ಹಂಚಿದ್ದಕ್ಕೆ ಕಿಡಿ ಕಾರಿದ್ದ ಅರವಿಂದ್ ಲಿಂಬಾವಳಿ, ಕುಕ್ಕರ್ ತೊಗೊಳಿ ವೊಟ್ ಮಾಡಿ! ಕುಕ್ಕರ್ ಹಂಚಿದ ಲಕ್ಷ್ಮೀ ಹೆಬ್ಬಾಳಕರ್ ಸಿಎಮ್ಮು ಇಡೀ ಕರ್ನಾಟಕದ ಜನತೆಯನ್ನು ಪ್ರೆಶರ್ ಕುಕ್ಕರ್ ನಲ್ಲಿ ಇಟ್ಟು ಹಿಂಸಿಸುತಿದ್ದರೆ,ಈ ಮೇಡಮ್ಮು ಮತದಾರರಿಗೆ ಕುಕ್ಕರ್ ಹಂಚುತ್ತಾರೆ !ನಾಡಿನ ಜನತೆಗೆ ಕಾಂಗ್ರೆಸ್ ಪ್ರೆಷರ್ ತಪ್ಪುವ ಕಾಲ ಸನ್ನಿಹಿತವಾಗಿದೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಅವರೇ ಕುಕ್ಕರ್ ಹಂಚುತ್ತಿದ್ದಾರೆ.
ಇತರ ಗ್ಯಾಲರಿಗಳು