ಮನೆಯಲ್ಲಿ ನೆಮ್ಮದಿ ಕಡಿಮೆಯಾಗಿದೆಯೇ; ನಕಾರಾತ್ಮಕ ಶಕ್ತಿ ಓಡಿಸಲು ಈ 5 ಸರಳ ವಾಸ್ತು ಪರಿಹಾರ ಪ್ರಯತ್ನಿಸಿ ನೋಡಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮನೆಯಲ್ಲಿ ನೆಮ್ಮದಿ ಕಡಿಮೆಯಾಗಿದೆಯೇ; ನಕಾರಾತ್ಮಕ ಶಕ್ತಿ ಓಡಿಸಲು ಈ 5 ಸರಳ ವಾಸ್ತು ಪರಿಹಾರ ಪ್ರಯತ್ನಿಸಿ ನೋಡಿ

ಮನೆಯಲ್ಲಿ ನೆಮ್ಮದಿ ಕಡಿಮೆಯಾಗಿದೆಯೇ; ನಕಾರಾತ್ಮಕ ಶಕ್ತಿ ಓಡಿಸಲು ಈ 5 ಸರಳ ವಾಸ್ತು ಪರಿಹಾರ ಪ್ರಯತ್ನಿಸಿ ನೋಡಿ

  • ವಾಸ್ತು ಪ್ರಕಾರ, ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಯಿಂದಾಗಿ ಅಡೆತಡೆಗಳು, ಭಿನ್ನಾಭಿಪ್ರಾಯಗಳನ್ನು ಉಂಟಾಗುತ್ತದೆ. ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಓಡಿಸಲು, ವಾಸ್ತುಪ್ರಕಾರ ಕೆಲವೊಂದು ಸರಳ ಉಪಾಯ ಮಾಡಬಹುದು. ಇಂತಹ ವಾಸ್ತು ಪರಿಹಾರಗಳು ಇಲ್ಲಿವೆ.

ನಕಾರಾತ್ಮಕ ಶಕ್ತಿ ಓಡಿಸಲು ವಾಸ್ತು ಪರಿಹಾರ: ಮನೆಯಲ್ಲಿ ಸೌಕರ್ಯವಿದ್ದಷ್ಟು ಖುಷಿ ಹೆಚ್ಚುತ್ತದೆ. ಆದರೆ ಶಾಂತಿ ನೆಮ್ಮದಿ ಬೇಕೆಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಗೆ ಯಾವುದೇ ರೀತಿಯ ವಾಸ್ತು ದೋಷ ಇರಬಾರದು. ಮನೆಯಲ್ಲಿ ವಾಸ್ತು ದೋಷವಿದ್ದರೆ, ಅಲ್ಲಿ ಮಾನಸಿಕ, ದೈಹಿಕ ಮತ್ತು ಆರ್ಥಿಕ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ವಾಸ್ತು ಶಾಸ್ತ್ರವು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಸರಳ ಕ್ರಮಗಳನ್ನು ತಿಳಿಸುತ್ತದೆ.
icon

(1 / 6)

ನಕಾರಾತ್ಮಕ ಶಕ್ತಿ ಓಡಿಸಲು ವಾಸ್ತು ಪರಿಹಾರ: ಮನೆಯಲ್ಲಿ ಸೌಕರ್ಯವಿದ್ದಷ್ಟು ಖುಷಿ ಹೆಚ್ಚುತ್ತದೆ. ಆದರೆ ಶಾಂತಿ ನೆಮ್ಮದಿ ಬೇಕೆಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಗೆ ಯಾವುದೇ ರೀತಿಯ ವಾಸ್ತು ದೋಷ ಇರಬಾರದು. ಮನೆಯಲ್ಲಿ ವಾಸ್ತು ದೋಷವಿದ್ದರೆ, ಅಲ್ಲಿ ಮಾನಸಿಕ, ದೈಹಿಕ ಮತ್ತು ಆರ್ಥಿಕ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ವಾಸ್ತು ಶಾಸ್ತ್ರವು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಸರಳ ಕ್ರಮಗಳನ್ನು ತಿಳಿಸುತ್ತದೆ.
(Pixabay)

ಸ್ವಸ್ತಿಕ ಗುರುತು: ಹಿಂದೂ ಧರ್ಮದಲ್ಲಿ, ಸ್ವಸ್ತಿಕದ ಚಿಹ್ನೆಯನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಸ್ವಸ್ತಿಕ ಚಿಹ್ನೆಯು ಸಕಾರಾತ್ಮಕ ಶಕ್ತಿಯನ್ನು ರವಾನಿಸುತ್ತದೆ ಎಂದು ಪರಿಗಣಿಸಲಾಗಿದೆ. ಹೀಗಾಗಿ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಮತ್ತು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಮುಖ್ಯ ದ್ವಾರದ ಮೇಲೆ ಸ್ವಸ್ತಿಕ ಚಿಹ್ನೆಯನ್ನು ಹಾಕುವುದು ಶುಭ ಎಂದು ಪರಿಗಣಿಸಲಾಗಿದೆ.
icon

(2 / 6)

ಸ್ವಸ್ತಿಕ ಗುರುತು: ಹಿಂದೂ ಧರ್ಮದಲ್ಲಿ, ಸ್ವಸ್ತಿಕದ ಚಿಹ್ನೆಯನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಸ್ವಸ್ತಿಕ ಚಿಹ್ನೆಯು ಸಕಾರಾತ್ಮಕ ಶಕ್ತಿಯನ್ನು ರವಾನಿಸುತ್ತದೆ ಎಂದು ಪರಿಗಣಿಸಲಾಗಿದೆ. ಹೀಗಾಗಿ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಮತ್ತು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಮುಖ್ಯ ದ್ವಾರದ ಮೇಲೆ ಸ್ವಸ್ತಿಕ ಚಿಹ್ನೆಯನ್ನು ಹಾಕುವುದು ಶುಭ ಎಂದು ಪರಿಗಣಿಸಲಾಗಿದೆ.
(Pixabay)

ಉಪ್ಪು ನೀರು ಒರೆಸಿ: ವಾಸ್ತು ಪ್ರಕಾರ, ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು, ನೀರಿನಲ್ಲಿ ಉಪ್ಪನ್ನು ಬೆರೆಸಿ ನೆಲವನ್ನು ಒರೆಸಬೇಕು. ವಾರಕ್ಕೆ ಎರಡು ಬಾರಿ ಈ ರೀತಿ ಮಾಡುವುದರಿಂದ ವಾಸ್ತು ದೋಷ ನಿವಾರಿಸಲು ಸಹಾಯ ಮಾಡುತ್ತದೆ.
icon

(3 / 6)

ಉಪ್ಪು ನೀರು ಒರೆಸಿ: ವಾಸ್ತು ಪ್ರಕಾರ, ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು, ನೀರಿನಲ್ಲಿ ಉಪ್ಪನ್ನು ಬೆರೆಸಿ ನೆಲವನ್ನು ಒರೆಸಬೇಕು. ವಾರಕ್ಕೆ ಎರಡು ಬಾರಿ ಈ ರೀತಿ ಮಾಡುವುದರಿಂದ ವಾಸ್ತು ದೋಷ ನಿವಾರಿಸಲು ಸಹಾಯ ಮಾಡುತ್ತದೆ.
(Pixabay)

ಸಂಜೆ ಪೂಜೆ: ವಾಸ್ತು ಪ್ರಕಾರ, ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಕರ್ಪೂರ ಮತ್ತು ಧೂಪವನ್ನು ಆಗಾಗ ಸುಡಬೇಕು. ಹೀಗೆ ಮಾಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಸಂಜೆ ವೇಳೆ ಪೂಜೆ ಮಾಡುವುದು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
icon

(4 / 6)

ಸಂಜೆ ಪೂಜೆ: ವಾಸ್ತು ಪ್ರಕಾರ, ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಕರ್ಪೂರ ಮತ್ತು ಧೂಪವನ್ನು ಆಗಾಗ ಸುಡಬೇಕು. ಹೀಗೆ ಮಾಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಸಂಜೆ ವೇಳೆ ಪೂಜೆ ಮಾಡುವುದು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
(Pixabay)

ತುಳಸಿ ಗಿಡ: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಲಕ್ಷ್ಮೀ ದೇವಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಮನೆಯಿಂದ ನಕಾರಾತ್ಮಕ ಶಕ್ತಿ ಓಡಿಸುವಲ್ಲಿ ತುಳಸಿ ಗಿಡ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ತುಳಸಿ ಎಲೆಗಳನ್ನು ನಿಯಮಿತವಾಗಿ ಬಳಸುವುದರಿಂದ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
icon

(5 / 6)

ತುಳಸಿ ಗಿಡ: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಲಕ್ಷ್ಮೀ ದೇವಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಮನೆಯಿಂದ ನಕಾರಾತ್ಮಕ ಶಕ್ತಿ ಓಡಿಸುವಲ್ಲಿ ತುಳಸಿ ಗಿಡ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ತುಳಸಿ ಎಲೆಗಳನ್ನು ನಿಯಮಿತವಾಗಿ ಬಳಸುವುದರಿಂದ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
(Pixabay)

ಕೊಳಲು: ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ, ಕೊಳಲು ಶ್ರೀಕೃಷ್ಣನಿಗೆ ಅತ್ಯಂತ ಪ್ರಿಯವಾದದ್ದು. ಮನೆಯಲ್ಲಿ ಕೊಳಲನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಮನೆಯಲ್ಲಿ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ ಎಂದು ವಾಸ್ತು ಹೇಳುತ್ತದೆ.
icon

(6 / 6)

ಕೊಳಲು: ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ, ಕೊಳಲು ಶ್ರೀಕೃಷ್ಣನಿಗೆ ಅತ್ಯಂತ ಪ್ರಿಯವಾದದ್ದು. ಮನೆಯಲ್ಲಿ ಕೊಳಲನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಮನೆಯಲ್ಲಿ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ ಎಂದು ವಾಸ್ತು ಹೇಳುತ್ತದೆ.
(Pixabay)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು