ಬೆಂಗಳೂರಿನ ಹಲಸೂರಿನಲ್ಲಿ ಆಪರೇಷನ್ ಅಭ್ಯಾಸ್ ಅಣಕು ಕಾರ್ಯಾಚರಣೆ: ಹೀಗಿತ್ತು ಪಡೆಗಳ ತಾಲೀಮು ಪ್ರದರ್ಶನ
ಕಾಶ್ಮೀರದಲ್ಲಿ ಉಗ್ರರ ದಾಳಿ ನಂತರ ಯುದ್ದದ ಸನ್ನಿವೇಶ ಇರುವುದಿಂದ ಭಾರತದಲ್ಲಿ ಸಾರ್ವಜನಿಕರನ್ನು ಸನ್ನದ್ದಗೊಳಿಸಲು ಬೆಂಗಳೂರಿನಲ್ಲಿ ಬುಧವಾರ ಅಣಕು ಪ್ರದರ್ಶನಗಳು ನಡೆದವು.
(1 / 7)
ಕೇಂದ್ರ ರಕ್ಷಣಾ ಇಲಾಖೆ ಹಾಗೂ ಗೃಹ ಇಲಾಖೆಯ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಹಮ್ಮಿಕೊಂಡಿದ್ದ ಅಣಕು ಕಾರ್ಯಾಚರಣೆ ಹಾಗೂ ನಾಗರಿಕರಿಗೆ ತುರ್ತು ಪರಿಸ್ಥಿತಿ ಎದುರಿಸುವ ಜಾಗೃತಿ ಕವಾಯತು 'ಆಪರೇಷನ್ ಅಭ್ಯಾಸ್' ಬೆಂಗಳೂರಿನ ಹಲಸೂರಿನಲ್ಲಿ ನಡೆಯಿತು.
(2 / 7)
ಕಾಲ್ಪನಿಕ ತುರ್ತು ಪರಿಸ್ಥಿತಿಯನ್ನು ಸೃಷ್ಟಿಸಿ ನಾಗರಿಕರ ರಕ್ಷಣೆ, ಅಗ್ನಿಶಮನ ಹಾಗೂ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡುವುದು ಸೇರಿದಂತೆ ವಿವಿಧ ಪ್ರಕಾರದ ಅಣಕು ಪ್ರದರ್ಶನ ಮಾಡಲಾಯಿತು.
(3 / 7)
ಅತಿ ದೊಡ್ಡ ಕಟ್ಟಡಗಳಲ್ಲಿ ಸಿಲುಕಿದವರನ್ನು ಕೆಳಕ್ಕೆ ಇಳಿಸಿದ ನಂತರ ಅವರನ್ನು ತುರ್ತು ಚಿಕಿತ್ಸೆಗೆ ಕರೆದುಕೊಂಡು ಹೋಗುವುದು ಹೇಗೆ ಎನ್ನುವ ಕುರಿತು ಅಗ್ನಿಶಾಮಕ ದಳದವರು ಮಾರ್ಗದರ್ಶನ ನೀಡಿದರು.
(4 / 7)
ಯುದ್ಧಗಳ ಸಂದರ್ಭದಲ್ಲಿ ಯಾವ ಊರಲ್ಲಿ ಏನಾಗುತ್ತದೆ ಎಂಬುದು ಗೊತ್ತಾಗುವುದಿಲ್ಲ. ಅಂತಹ ಸಂದರ್ಭ ಬರಬಾರದು. ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗು ಈ ಮಾಹಿತಿ ನೀಡಬೇಕಾಗುತ್ತದೆ. ಅಗ್ನಿಶಾಮಕ ಮತ್ತು ತುರ್ತುಸೇವೆ ಸಿಬ್ಬಂದಿಗಳು ಭೇಟಿ ನೀಡಿ ಅಗತ್ಯ ಜಾಗೃತಿಯನ್ನು ಮೂಡಿಸಬೇಕು ಎಂದು ತಿಳಿವಳಿಕೆ ನೀಡಲಾಯಿತು.
(5 / 7)
ದಾಳಿ ವೇಳೆ ಸಿಲುಕಿದರನ್ನು ರಕ್ಷಿಸಿ ಕೂಡಲೇ ಆಂಬುಲೆನ್ಸ್ ಮೂಲಕ ಸಾಗಿಸುವ ಕ್ರಮಗಳ ಕುರಿತು ತಿಳುವಳಿಕೆ ನೀಡಲಾಯಿತು.
(6 / 7)
ಸೈರನ್ ಮೊಳಗಿದ ಕೂಡಲೇ ನಾಗರಿಕರು ಕೈಗೊಳ್ಳಬೇಕಾದ ಎಚ್ಚರಿಕೆ ಹಾಗೂ ದುರ್ಘಟನೆಯಿಂದ ಕಟ್ಟಡಗಳಲ್ಲಿ ಸಿಲುಕಿರುವ ನಾಗರಿಕರನ್ನು ಸುಸಜ್ಜಿತವಾದ ಏರಿಯಲ್ ಲ್ಯಾಡರ್ ವಾಹನದ ಮೂಲಕ ರಕ್ಷಣೆ ಮಾಡುವುದನ್ನು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಸಿಬ್ಬಂದಿಗಳು ಪ್ರದರ್ಶಿಸಿದರು.
(7 / 7)
ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಈಗಾಗಲೇ ಸೂಚನೆ ನೀಡಿದೆ. ನಾಗರಿಕರನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಸಾರ್ವಜನಿಕರ ಜವಾಬ್ಧಾರಿಗಳೇನು, ಈ ಗೊಂದಲದ ಸಂದರ್ಭದಲ್ಲಿ ಶಾಂತಿ ಪಾಲನೆ ಮಾಡುವುದು ಹೇಗೆ? ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದರಿಂದ ಹಿಡಿದು, ಪರಿಸ್ಥಿತಿಯನ್ನು ಯಾವ ರೀತಿ ನಿಭಾಯಿಸಬೇಕು ಎಂಬುದನ್ನು 'ಆಪರೇಷನ್ ಅಭ್ಯಾಸ್' ಮೂಲಕ ಸಿವಿಲ್ ಡಿಫೆನ್ಸ್ನಲ್ಲಿ ತೊಡಗಿಸಿಕೊಂಡಿರುವವರಿಗೆ ಅರಿವು ಮೂಡಿಸುವ ಅಗತ್ಯವಿದೆ ಎನ್ನುವುದು ಗೃಹ ಸಚಿವ ಡಾ.ಪರಮೇಶ್ವರ್ ಅವರ ಸೂಚನೆ.
ಇತರ ಗ್ಯಾಲರಿಗಳು