Bengaluru Karaga 2025: ಶ್ರದ್ಧಾ ಭಕ್ತಿಯೊಂದಿಗೆ ಸಾಗಿದ ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಮೆರವಣಿಗೆ- ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bengaluru Karaga 2025: ಶ್ರದ್ಧಾ ಭಕ್ತಿಯೊಂದಿಗೆ ಸಾಗಿದ ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಮೆರವಣಿಗೆ- ಚಿತ್ರನೋಟ

Bengaluru Karaga 2025: ಶ್ರದ್ಧಾ ಭಕ್ತಿಯೊಂದಿಗೆ ಸಾಗಿದ ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಮೆರವಣಿಗೆ- ಚಿತ್ರನೋಟ

Hasi Karaga Photos: ವಿಶ್ವವಿಖ್ಯಾತ ಬೆಂಗಳೂರು ಕರಗದ ಹಸಿ ಕರಗ ಮೆರವಣಿಗೆ ಶುಕ್ರವಾರ ನೆರವೇರಿತು. ಸಂಪಂಗಿಕೆರೆ ಅಂಗಳದ ಶಕ್ತಿಪೀಠದಲ್ಲಿ ಹಸಿ ಕರಗ ಪೂಜೆ, ಆರತಿ, ಮೆರವಣಿಗೆ ವಿಜೃಂಭಣೆಯಿಂದ ನಡೆದವು. ಈ ಶ್ರದ್ಧಾಭಕ್ತಿ ಆಚರಣೆಯ ಆಕರ್ಷಕ ಚಿತ್ರನೋಟ ಇಲ್ಲಿದೆ.

ಐತಿಹಾಸಿಕ ‘ಬೆಂಗಳೂರು ಕರಗ’ ಚೈತ್ರ ಪೂರ್ಣಿಮೆಯ ದಿನವಾದ ಇಂದು ನಡೆಯಲಿದೆ. ಇದಕ್ಕೆ ಮುನ್ನಾ ದಿನ ಶುಕ್ರವಾರ‌ ಸಂಪಂಗಿ ಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ಪೂಜೆ, ಆರತಿ, ಮೆರವಣಿಗೆ ವಿಜೃಂಭಣೆಯಿಂದ ನಡೆದವು. ಅದರ ಆಕರ್ಷಕ ಚಿತ್ರನೋಟ ಇಲ್ಲಿದೆ.
icon

(1 / 10)

ಐತಿಹಾಸಿಕ ‘ಬೆಂಗಳೂರು ಕರಗ’ ಚೈತ್ರ ಪೂರ್ಣಿಮೆಯ ದಿನವಾದ ಇಂದು ನಡೆಯಲಿದೆ. ಇದಕ್ಕೆ ಮುನ್ನಾ ದಿನ ಶುಕ್ರವಾರ‌ ಸಂಪಂಗಿ ಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ಪೂಜೆ, ಆರತಿ, ಮೆರವಣಿಗೆ ವಿಜೃಂಭಣೆಯಿಂದ ನಡೆದವು. ಅದರ ಆಕರ್ಷಕ ಚಿತ್ರನೋಟ ಇಲ್ಲಿದೆ.
(SM)

ಸಂಪಂಗಿ ಕೆರೆಯ ಕರಗದ ಕುಂಟೆಯಲ್ಲಿರುವ ಶಕ್ತಿ ಪೀಠದಲ್ಲಿ ಗುರುವಾರ ರಾತ್ರಿಯಿಂದ ಹಸಿ ಕರಗದ ಪೂಜಾ ವಿಧಿಗಳು, ಧಾರ್ಮಿಕ ಆಚರಣೆಗಳು ನಡೆದವು. ಶುಕ್ರವಾರ ನಸುಕಿನಲ್ಲಿ ಹಸಿ ಕರಗ ಸಿದ್ಧವಾಯಿತು.
icon

(2 / 10)

ಸಂಪಂಗಿ ಕೆರೆಯ ಕರಗದ ಕುಂಟೆಯಲ್ಲಿರುವ ಶಕ್ತಿ ಪೀಠದಲ್ಲಿ ಗುರುವಾರ ರಾತ್ರಿಯಿಂದ ಹಸಿ ಕರಗದ ಪೂಜಾ ವಿಧಿಗಳು, ಧಾರ್ಮಿಕ ಆಚರಣೆಗಳು ನಡೆದವು. ಶುಕ್ರವಾರ ನಸುಕಿನಲ್ಲಿ ಹಸಿ ಕರಗ ಸಿದ್ಧವಾಯಿತು.
(SMSP)

ಸಂಪಂಗಿ ಕೆರೆ ಶಕ್ತಿಪೀಠದಲ್ಲಿ ವಿಶೇಷ ಪೂಜೆಯ ನಂತರ, ಹೂವಿನ ವೇಷಭೂಷಣದೊಂದಿಗೆ ಸಿದ್ಧರಾದ ಅರ್ಚಕ ಎ. ಜ್ಞಾನೇಶ್‌ ಒಂದು ಕೈಯಲ್ಲಿ ಕತ್ತಿ ಹಿಡಿದು, ಸೊಂಟದಲ್ಲಿ ಹಸಿ ಕರಗವನ್ನು ಹೊತ್ತು ಸಾಗಿದರು.
icon

(3 / 10)

ಸಂಪಂಗಿ ಕೆರೆ ಶಕ್ತಿಪೀಠದಲ್ಲಿ ವಿಶೇಷ ಪೂಜೆಯ ನಂತರ, ಹೂವಿನ ವೇಷಭೂಷಣದೊಂದಿಗೆ ಸಿದ್ಧರಾದ ಅರ್ಚಕ ಎ. ಜ್ಞಾನೇಶ್‌ ಒಂದು ಕೈಯಲ್ಲಿ ಕತ್ತಿ ಹಿಡಿದು, ಸೊಂಟದಲ್ಲಿ ಹಸಿ ಕರಗವನ್ನು ಹೊತ್ತು ಸಾಗಿದರು.

ಸಂಪಂಗಿ ಕೆರೆ ಶಕ್ತಿಪೀಠದಿಂದ ಹಡ್ಸನ್‌ ವೃತ್ತದತ್ತ ಸಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಹಸಿ ಕರಗದ ಪೂಜೆ ನಡೆಯಿತು.
icon

(4 / 10)

ಸಂಪಂಗಿ ಕೆರೆ ಶಕ್ತಿಪೀಠದಿಂದ ಹಡ್ಸನ್‌ ವೃತ್ತದತ್ತ ಸಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಹಸಿ ಕರಗದ ಪೂಜೆ ನಡೆಯಿತು.

ಮೆರವಣಿಗೆಯುದ್ಧಕ್ಕೂ ನೂರಾರು ವೀರಕುಮಾರರು ಸಾಗಿದರು. ಧರ್ಮರಾಯಸ್ವಾಮಿ ದೇವಸ್ಥಾನದ ಅಂಗಳದಲ್ಲಿ ವೀರಕುಮಾರರು ಧಾರ್ಮಿಕ ಸಂಪ್ರದಾಯಗಳನ್ನು ನೆರವೇರಿಸಿದರು.
icon

(5 / 10)

ಮೆರವಣಿಗೆಯುದ್ಧಕ್ಕೂ ನೂರಾರು ವೀರಕುಮಾರರು ಸಾಗಿದರು. ಧರ್ಮರಾಯಸ್ವಾಮಿ ದೇವಸ್ಥಾನದ ಅಂಗಳದಲ್ಲಿ ವೀರಕುಮಾರರು ಧಾರ್ಮಿಕ ಸಂಪ್ರದಾಯಗಳನ್ನು ನೆರವೇರಿಸಿದರು.

ವಿಶೇಷ ಪೂಜೆ ನಂತರ ಶುಕ್ರವಾರ ಮುಂಜಾನೆ, ಧರ್ಮರಾಯಸ್ವಾಮಿ ದೇವಸ್ಥಾನದ ಒಳಭಾಗವನ್ನು ಹಸಿ ಕರಗ ತಲುಪಿತು.
icon

(6 / 10)

ವಿಶೇಷ ಪೂಜೆ ನಂತರ ಶುಕ್ರವಾರ ಮುಂಜಾನೆ, ಧರ್ಮರಾಯಸ್ವಾಮಿ ದೇವಸ್ಥಾನದ ಒಳಭಾಗವನ್ನು ಹಸಿ ಕರಗ ತಲುಪಿತು.

ಪ್ರಸಿದ್ಧ ದ್ರೌಪದಿದೇವಿ ಕರಗ ಶಕ್ತೋತ್ಸವ (ಬೆಂಗಳೂರು ಕರಗ) ಚೈತ್ರ ಪೌರ್ಣಿಮೆಯಾದ ಏಪ್ರಿಲ್‌ 12ರ ಶನಿವಾರ ನಡೆಯಲಿದೆ. ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಜೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
icon

(7 / 10)

ಪ್ರಸಿದ್ಧ ದ್ರೌಪದಿದೇವಿ ಕರಗ ಶಕ್ತೋತ್ಸವ (ಬೆಂಗಳೂರು ಕರಗ) ಚೈತ್ರ ಪೌರ್ಣಿಮೆಯಾದ ಏಪ್ರಿಲ್‌ 12ರ ಶನಿವಾರ ನಡೆಯಲಿದೆ. ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಜೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

 ಪ್ರಸಿದ್ಧ ದ್ರೌಪದಿದೇವಿ ಕರಗ ಶಕ್ತೋತ್ಸವ  ಪೂಜಾ ವಿಧಿಗಳನ್ನು ಪೂರೈಸಿದ ನಂತರ ಜ್ಞಾನೇಂದ್ರ ಅವರು ಶನಿವಾರ ತಡರಾತ್ರಿ ಕರಗ ಹೊತ್ತು ಸಾಗಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಕರಗವನ್ನು ಹೊರಲಿದ್ದಾರೆ.
icon

(8 / 10)

ಪ್ರಸಿದ್ಧ ದ್ರೌಪದಿದೇವಿ ಕರಗ ಶಕ್ತೋತ್ಸವ ಪೂಜಾ ವಿಧಿಗಳನ್ನು ಪೂರೈಸಿದ ನಂತರ ಜ್ಞಾನೇಂದ್ರ ಅವರು ಶನಿವಾರ ತಡರಾತ್ರಿ ಕರಗ ಹೊತ್ತು ಸಾಗಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಕರಗವನ್ನು ಹೊರಲಿದ್ದಾರೆ.

ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಬರುವ ಕರಗ, ಗಣಪತಿ ಮತ್ತು ಮುತ್ಯಾಲಮ್ಮ ದೇವಾಲಯ, ಹಲಸೂರು ಪೇಟೆಯ ಆಂಜನೇಯ ಸ್ವಾಮಿ, ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡ ಪೇಟೆಯಿಂದ ಕೆ.ಆರ್. ಮಾರುಕಟ್ಟೆ ತಲುಪಲಿದೆ.
icon

(9 / 10)

ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಬರುವ ಕರಗ, ಗಣಪತಿ ಮತ್ತು ಮುತ್ಯಾಲಮ್ಮ ದೇವಾಲಯ, ಹಲಸೂರು ಪೇಟೆಯ ಆಂಜನೇಯ ಸ್ವಾಮಿ, ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡ ಪೇಟೆಯಿಂದ ಕೆ.ಆರ್. ಮಾರುಕಟ್ಟೆ ತಲುಪಲಿದೆ.

ಮಸ್ತಾನ್ ಸಾಬ್‌ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿಂದ ಬಳೇಪೇಟೆ ಹಳೇಗರಡಿ, ಅಣ್ಣಮ್ಮನ ದೇವಾಲಯ, ಕಿಲಾರಿ ರಸ್ತೆ, ಯಲಹಂಕ ಗೇಟ್, ಅವೆನ್ಯೂ ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರ ಪೇಟೆ ಮೂಲಕ ಸಾಗಲಿದೆ. ಭಾನುವಾರ ಸೂರ್ಯೋದಯದ ಮುನ್ನ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಕರಗ ಹಿಂದಿರುಗಲಿದೆ. ಕರಗ ಹೊರಟ ಬಳಿಕ ಧರ್ಮರಾಯ ಸ್ವಾಮಿ ಮಹಾರಥೋತ್ಸವ ನಡೆಯಲಿದೆ.
icon

(10 / 10)

ಮಸ್ತಾನ್ ಸಾಬ್‌ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿಂದ ಬಳೇಪೇಟೆ ಹಳೇಗರಡಿ, ಅಣ್ಣಮ್ಮನ ದೇವಾಲಯ, ಕಿಲಾರಿ ರಸ್ತೆ, ಯಲಹಂಕ ಗೇಟ್, ಅವೆನ್ಯೂ ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರ ಪೇಟೆ ಮೂಲಕ ಸಾಗಲಿದೆ. ಭಾನುವಾರ ಸೂರ್ಯೋದಯದ ಮುನ್ನ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಕರಗ ಹಿಂದಿರುಗಲಿದೆ. ಕರಗ ಹೊರಟ ಬಳಿಕ ಧರ್ಮರಾಯ ಸ್ವಾಮಿ ಮಹಾರಥೋತ್ಸವ ನಡೆಯಲಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು