Budget 2025: ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ, ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಘೋಷಣೆ
- Budget 2025: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಘೋಷಣೆ ಆಗಿದ್ದು, ಇದರ ಅಡಿಯಲ್ಲಿ ಕಡಿಮೆ ಇಳುವರಿ ಹೊಂದಿರುವ 100 ಜಿಲ್ಲೆಗಳ 1.7 ಕೋಟಿ ರೈತರಿಗೆ ಅನುಕೂಲ ಆಗಲಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯೂ ಹೆಚ್ಚಳ ಮಾಡಲಾಗಿದೆ.
- Budget 2025: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಘೋಷಣೆ ಆಗಿದ್ದು, ಇದರ ಅಡಿಯಲ್ಲಿ ಕಡಿಮೆ ಇಳುವರಿ ಹೊಂದಿರುವ 100 ಜಿಲ್ಲೆಗಳ 1.7 ಕೋಟಿ ರೈತರಿಗೆ ಅನುಕೂಲ ಆಗಲಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯೂ ಹೆಚ್ಚಳ ಮಾಡಲಾಗಿದೆ.
(2 / 5)
ಸುಸ್ಥಿರ ಕೃಷಿ, ಮೂಲ ಸೌಕರ್ಯ, ಉಗ್ರಾಣ ಉನ್ನತೀಕರಣದ ಜತೆಗೆ ಉತ್ಪಾದನೆ, ಉದ್ಯೋಗ, ಎಂಎಸ್ಎಂಇಗಳು, ಗ್ರಾಮೀಣ ಪ್ರದೇಶಗಳ ಉನ್ನತಿ ಮತ್ತು ನಾವೀನ್ಯತೆಗೂ ಹೆಚ್ಚಿನ ಆದ್ಯತೆ ನೀಡಿದೆ.
(3 / 5)
ಹೆಚ್ಚಿನ ಇಳುವರಿ ನೀಡುವ ಬೀಜಗಳ ರಾಷ್ಟ್ರೀಯ ಮಿಷನ್: ಹೆಚ್ಚಿನ ಇಳುವರಿ ನೀಡುವ ಬೀಜಗಳ ಮೇಲೆ ರಾಷ್ಟ್ರೀಯ ಮಿಷನ್ ಅನ್ನು ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದರು. ಜತೆಗೆ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಹತ್ತಿ ಪ್ರಭೇದಗಳಿಗೆ ಐದು ವರ್ಷಗಳ ಮಿಷನ್ ಘೋಷಿಸಿದೆ.
(4 / 5)
ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5ಲಕ್ಷಕ್ಕೆ ಮಿತಿಯನ್ನು ಹೆಚ್ಚಿಸಲಾಗದೆ.
ಇತರ ಗ್ಯಾಲರಿಗಳು