ಸೋಲಿಗರ ಪ್ರೀತಿಯ ಭಾವ ಬಿಳಿಗಿರಿರಂಗನಾಥ ಸ್ವಾಮಿಗೆ ಸಡಗರದ ರಥೋತ್ಸವ: ಪುರಾಣ ಪ್ರಸಿದ್ದ ದೇಗುಲಕ್ಕೆ ಭಕ್ತರ ದಂಡು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸೋಲಿಗರ ಪ್ರೀತಿಯ ಭಾವ ಬಿಳಿಗಿರಿರಂಗನಾಥ ಸ್ವಾಮಿಗೆ ಸಡಗರದ ರಥೋತ್ಸವ: ಪುರಾಣ ಪ್ರಸಿದ್ದ ದೇಗುಲಕ್ಕೆ ಭಕ್ತರ ದಂಡು

ಸೋಲಿಗರ ಪ್ರೀತಿಯ ಭಾವ ಬಿಳಿಗಿರಿರಂಗನಾಥ ಸ್ವಾಮಿಗೆ ಸಡಗರದ ರಥೋತ್ಸವ: ಪುರಾಣ ಪ್ರಸಿದ್ದ ದೇಗುಲಕ್ಕೆ ಭಕ್ತರ ದಂಡು

ಚಾಮರಾಜನಗರ ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪರಿಸರ ಮಹತ್ವ ಉಳ್ಳ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಭವ್ಯವಾಗಿ ನೆರವೇರಿತು.

ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥ ಎಳೆಯಲಾಯಿತು. ಬ್ರಹ್ಮರಥೋತ್ಸವದ ಹಿನ್ನಲೆಯಲ್ಲಿ ದೇವಾಲಯದ ಆವರಣ, ರಥದ ಬೀದಿ, ಕಲ್ಯಾಣಿ ಕೊಳದ ಬಳಿ, ಕಮರಿ ಆವರಣ ಹಾಗೂ ದಾಸೋಹ ಆವರಣ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮತ್ತಿತ್ತರ ಜನನಿಬಿಡ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಕ್ರಮಗಳನ್ನು ಕೈಗೊಂಡಿದ್ದು, ರಥೋತ್ಸವ ಸಿದ್ದತೆಗಳ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಲಾಗಿತ್ತು.
icon

(1 / 6)

ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥ ಎಳೆಯಲಾಯಿತು. ಬ್ರಹ್ಮರಥೋತ್ಸವದ ಹಿನ್ನಲೆಯಲ್ಲಿ ದೇವಾಲಯದ ಆವರಣ, ರಥದ ಬೀದಿ, ಕಲ್ಯಾಣಿ ಕೊಳದ ಬಳಿ, ಕಮರಿ ಆವರಣ ಹಾಗೂ ದಾಸೋಹ ಆವರಣ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮತ್ತಿತ್ತರ ಜನನಿಬಿಡ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಕ್ರಮಗಳನ್ನು ಕೈಗೊಂಡಿದ್ದು, ರಥೋತ್ಸವ ಸಿದ್ದತೆಗಳ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಲಾಗಿತ್ತು.

ಬಿಳಿಗಿರಿ ರಂಗಪ್ಪನನ್ನು ಸೋಲಿಗರು ಭಾವ ಎಂದೇ ಕರೆದು ಆರಾಧಿಸುತ್ತಾರೆ. ಸೋಲಿಗರ ಯುವತಿ ಕುಸುಮಾಲೆಯನ್ನು ರಂಗಪ್ಪ ಮದುವೆಯಾಗಿದ್ದ ಎನ್ನುವ ಐತಿಹ್ಯ ಇರುವುದಿಂದ ಈ ವಿಶೇಷತೆ ಇದೆ.
icon

(2 / 6)

ಬಿಳಿಗಿರಿ ರಂಗಪ್ಪನನ್ನು ಸೋಲಿಗರು ಭಾವ ಎಂದೇ ಕರೆದು ಆರಾಧಿಸುತ್ತಾರೆ. ಸೋಲಿಗರ ಯುವತಿ ಕುಸುಮಾಲೆಯನ್ನು ರಂಗಪ್ಪ ಮದುವೆಯಾಗಿದ್ದ ಎನ್ನುವ ಐತಿಹ್ಯ ಇರುವುದಿಂದ ಈ ವಿಶೇಷತೆ ಇದೆ.

ಚಾಮರಾಜನಗರ ಮಾತ್ರವಲ್ಲದೇ ಮಂಡ್ಯ.ಮೈಸೂರು ಸೇರಿದಂತೆ ನಾನಾ ಭಾಗದಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದು ಇಲ್ಲಿನ ವಿಶೇಷ. ಸುಮಾರು 540 ಚದರ ಕಿ.ಮೀ. ವಿಸ್ತಾರವನ್ನು ಹೊಂದಿರುವ ಬಿಳಿಗಿರಿರಂಗನಬೆಟ್ಟವು ಸದಾ ಹಸಿರಿದಿಂದ ಕೂಡಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ.
icon

(3 / 6)

ಚಾಮರಾಜನಗರ ಮಾತ್ರವಲ್ಲದೇ ಮಂಡ್ಯ.ಮೈಸೂರು ಸೇರಿದಂತೆ ನಾನಾ ಭಾಗದಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದು ಇಲ್ಲಿನ ವಿಶೇಷ. ಸುಮಾರು 540 ಚದರ ಕಿ.ಮೀ. ವಿಸ್ತಾರವನ್ನು ಹೊಂದಿರುವ ಬಿಳಿಗಿರಿರಂಗನಬೆಟ್ಟವು ಸದಾ ಹಸಿರಿದಿಂದ ಕೂಡಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ.

ರಥೋತ್ಸವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಚಟುವಟಿಕೆಗಳು ಮಾರ್ಗದುದ್ದಕ್ಕೂ ನಡೆಯುತ್ತವೆ. ಈ ವೇಳೆ ರಸ್ತೆ ಇಕ್ಕೆಲಗಳಲ್ಲೂ ಭಕ್ತರು ನಿಂತು ಹಣ್ಣು ಜವನವನ್ನು ರಂಗಪ್ಪನಿಗೆ ಎಸೆಯುತ್ತಾರೆ.
icon

(4 / 6)

ರಥೋತ್ಸವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಚಟುವಟಿಕೆಗಳು ಮಾರ್ಗದುದ್ದಕ್ಕೂ ನಡೆಯುತ್ತವೆ. ಈ ವೇಳೆ ರಸ್ತೆ ಇಕ್ಕೆಲಗಳಲ್ಲೂ ಭಕ್ತರು ನಿಂತು ಹಣ್ಣು ಜವನವನ್ನು ರಂಗಪ್ಪನಿಗೆ ಎಸೆಯುತ್ತಾರೆ.

ಬಿಳಿಗಿರಿರಂಗನಾಥ ಸ್ವಾಮಿ ರಥೋತ್ಸವದ ನಂತರ ನಡೆಯುವ ಮಂಟಪೋತ್ಸವಕ್ಕೆ ಸ್ವಾಮಿಯ ಉತ್ಸವ ಮೂರ್ತಿ ಭವ್ಯ ಮೆರವಣಿಗೆಯೊಂದಿಗೆ ಕರೆದುಕೊಂಡು ಬಂದರು.  ಅದರಲ್ಲೂ ಜಾತ್ರೋತ್ಸವದ ವೇಳೆ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಇತ್ತ ಆಗಮಿಸಿ ಬಿಳಿಗಿರಿರಂಗನಾಥಸ್ವಾಮಿಯ ದರ್ಶನ ಪಡೆದು ರಥಕ್ಕೆ ಹಣ್ಣುದವನ ಎಸೆದು ಪನೀತರಾಗುತ್ತಾರೆ
icon

(5 / 6)

ಬಿಳಿಗಿರಿರಂಗನಾಥ ಸ್ವಾಮಿ ರಥೋತ್ಸವದ ನಂತರ ನಡೆಯುವ ಮಂಟಪೋತ್ಸವಕ್ಕೆ ಸ್ವಾಮಿಯ ಉತ್ಸವ ಮೂರ್ತಿ ಭವ್ಯ ಮೆರವಣಿಗೆಯೊಂದಿಗೆ ಕರೆದುಕೊಂಡು ಬಂದರು. ಅದರಲ್ಲೂ ಜಾತ್ರೋತ್ಸವದ ವೇಳೆ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಇತ್ತ ಆಗಮಿಸಿ ಬಿಳಿಗಿರಿರಂಗನಾಥಸ್ವಾಮಿಯ ದರ್ಶನ ಪಡೆದು ರಥಕ್ಕೆ ಹಣ್ಣುದವನ ಎಸೆದು ಪನೀತರಾಗುತ್ತಾರೆ

ಬಿಳಿಗಿರಿ ರಂಗನಾಥ ಸ್ವಾಮಿಯ ರಥವನ್ನು ಎಳೆಯುವ ಬೀದಿಯುದ್ದಕ್ಕೂ ಸಹಸ್ರಾರು ಸಂಖ್ಯೆಯಲ್ಲಿ  ಸೇರಿದ್ದರು.ರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ.
icon

(6 / 6)

ಬಿಳಿಗಿರಿ ರಂಗನಾಥ ಸ್ವಾಮಿಯ ರಥವನ್ನು ಎಳೆಯುವ ಬೀದಿಯುದ್ದಕ್ಕೂ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು.ರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು