ಎಲ್ಲೆಡೆ ಇಂದು ಚಂಪಾ ಷಷ್ಠಿ ಆಚರಣೆ; ಮೈಸೂರಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಎಲ್ಲೆಡೆ ಇಂದು ಚಂಪಾ ಷಷ್ಠಿ ಆಚರಣೆ; ಮೈಸೂರಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

ಎಲ್ಲೆಡೆ ಇಂದು ಚಂಪಾ ಷಷ್ಠಿ ಆಚರಣೆ; ಮೈಸೂರಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

  • ನಾಡಿನೆಲ್ಲೆಡೆ ಇಂದು ಶ್ರದ್ದಾ ಭಕ್ತಿಗಳ ನಡುವೆ ಚಂಪಾ ಷಷ್ಠಿ ಆಚರಣೆ: ಮೈಸೂರಿನ ಹೊರ ವಲಯದ ಸಿದ್ದಲಿಂಗಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿತು.

ಮೈಸೂರು-ಬೆಂಗಳೂರು ಮುಖ್ಯ ರಸ್ತೆಯ ಸಿದ್ದಲಿಂಗಪುರ ಗ್ರಾಮದ ಬಳಿಯಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿಯ ದೇಗುಲ. ಸುಮಾರು 250. ವರ್ಷಗಳ ಇತಿಹಾಸ ಹೊಂದಿರುವ ದೇಗುಲ.
icon

(1 / 10)

ಮೈಸೂರು-ಬೆಂಗಳೂರು ಮುಖ್ಯ ರಸ್ತೆಯ ಸಿದ್ದಲಿಂಗಪುರ ಗ್ರಾಮದ ಬಳಿಯಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿಯ ದೇಗುಲ. ಸುಮಾರು 250. ವರ್ಷಗಳ ಇತಿಹಾಸ ಹೊಂದಿರುವ ದೇಗುಲ.

ಚಂಪಾ ಷಷ್ಠಿ ಅಂಗವಾಗಿ ಇಂದು ಮೂಲ ದೇವರಿಗೆ ಬೆಳ್ಳಿಯ ನಾಗಾಭರಣ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸುಬ್ರಹ್ಮಣ್ಯಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ಮಾಡಿ ಪೂಜೆ ಮಾಡಿದ್ದಾರೆ.
icon

(2 / 10)

ಚಂಪಾ ಷಷ್ಠಿ ಅಂಗವಾಗಿ ಇಂದು ಮೂಲ ದೇವರಿಗೆ ಬೆಳ್ಳಿಯ ನಾಗಾಭರಣ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸುಬ್ರಹ್ಮಣ್ಯಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ಮಾಡಿ ಪೂಜೆ ಮಾಡಿದ್ದಾರೆ.

ದೇಗುಲದ ಗರ್ಭಗುಡಿಯಲ್ಲಿರುವ ಮೂಲ ದೇವರು ಹುತ್ತಕ್ಕೆ ವಿಶೇಷ ಅಲಂಕಾರ ಮಾಡಿ ಬೆಳ್ಳಿಯ ನಾಗಾಭರಣ ಧಾರಣೆ ಮಾಡಲಾಗಿದೆ. ಅಂದಿನ ಆಳರಸ ಜಯಚಾಮರಾಜೇಂದ್ರ ಒಡೆಯರ್ ಅವರು ಉಡುಗೊರೆಯಾಗಿ ನೀಡಿರುವ ಬೆಳ್ಳಿಯ ನಾಗಾಭರಣ ಇದಾಗಿದೆ.
icon

(3 / 10)

ದೇಗುಲದ ಗರ್ಭಗುಡಿಯಲ್ಲಿರುವ ಮೂಲ ದೇವರು ಹುತ್ತಕ್ಕೆ ವಿಶೇಷ ಅಲಂಕಾರ ಮಾಡಿ ಬೆಳ್ಳಿಯ ನಾಗಾಭರಣ ಧಾರಣೆ ಮಾಡಲಾಗಿದೆ. ಅಂದಿನ ಆಳರಸ ಜಯಚಾಮರಾಜೇಂದ್ರ ಒಡೆಯರ್ ಅವರು ಉಡುಗೊರೆಯಾಗಿ ನೀಡಿರುವ ಬೆಳ್ಳಿಯ ನಾಗಾಭರಣ ಇದಾಗಿದೆ.

ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅನಾರೋಗ್ಯ ಪೀಡಿತರಾದಾಗ ಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ಹರಕೆ ಮಾಡಿಕೊಂಡಿದ್ದ ಜಯಚಾಮರಾಜೇಂದ್ರ ಒಡೆಯರ್ ಈ ಆಭರಣವನ್ನು ಹರಕೆ ರೂಪದಲ್ಲಿ ನೀಡಿದ್ದಾರೆ.
icon

(4 / 10)

ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅನಾರೋಗ್ಯ ಪೀಡಿತರಾದಾಗ ಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ಹರಕೆ ಮಾಡಿಕೊಂಡಿದ್ದ ಜಯಚಾಮರಾಜೇಂದ್ರ ಒಡೆಯರ್ ಈ ಆಭರಣವನ್ನು ಹರಕೆ ರೂಪದಲ್ಲಿ ನೀಡಿದ್ದಾರೆ.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಗುಣಮುಖವಾದ ಬಳಿಕ ಬೆಳ್ಳಿಯ ನಾಗಾಭರಣವನ್ನು ನೀಡಿ ಹರಕೆ‌ ತೀರಿಸಿದ್ದ ಜಯಚಾಮರಾಜೇಂದ್ರ ಒಡೆಯರ್. ಪ್ರತಿ ವರ್ಷವೂ ಷಷ್ಠಿಯ ದಿನ ಮಾತ್ರ ಮೂಲದೇವರಿಗೆ ಇದೇ ಬೆಳ್ಳಿಯ ನಾಗಾಭರಣವನ್ನು ಧಾರಣೆ ಮಾಡಿ ಪೂಜೆ ಸಲ್ಲಿಸುವುದು ವಾಡಿಕೆ ಇದೆ.
icon

(5 / 10)

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಗುಣಮುಖವಾದ ಬಳಿಕ ಬೆಳ್ಳಿಯ ನಾಗಾಭರಣವನ್ನು ನೀಡಿ ಹರಕೆ‌ ತೀರಿಸಿದ್ದ ಜಯಚಾಮರಾಜೇಂದ್ರ ಒಡೆಯರ್. ಪ್ರತಿ ವರ್ಷವೂ ಷಷ್ಠಿಯ ದಿನ ಮಾತ್ರ ಮೂಲದೇವರಿಗೆ ಇದೇ ಬೆಳ್ಳಿಯ ನಾಗಾಭರಣವನ್ನು ಧಾರಣೆ ಮಾಡಿ ಪೂಜೆ ಸಲ್ಲಿಸುವುದು ವಾಡಿಕೆ ಇದೆ.

 ಮೊದಲೆರಡು ವರ್ಷ ಕೊರೊನಾ ಹಿನ್ನೆಲೆಯಲ್ಲಿ ಮೂಲ ದೇವರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಕಳೆದೆರಡು ವರ್ಷಗಳಿಂದ ದೇಗುಲದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೂಲ ದೇವರ ದರ್ಶನ ಪಡೆಯಲು ಭಕ್ತರಿಗೆ ಸಾಧ್ಯವಾಗಿರಲಿಲ್ಲ.
icon

(6 / 10)

 ಮೊದಲೆರಡು ವರ್ಷ ಕೊರೊನಾ ಹಿನ್ನೆಲೆಯಲ್ಲಿ ಮೂಲ ದೇವರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಕಳೆದೆರಡು ವರ್ಷಗಳಿಂದ ದೇಗುಲದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೂಲ ದೇವರ ದರ್ಶನ ಪಡೆಯಲು ಭಕ್ತರಿಗೆ ಸಾಧ್ಯವಾಗಿರಲಿಲ್ಲ.

ನಾಲ್ಕು ವರ್ಷಗಳ ಬಳಿಕ ಇಂದು ಮೂಲ ದೇವರ ದರ್ಶನ ಪಡೆಯಲು ಲಕ್ಷಾಂತರ ಮಂದಿ  ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಭಕ್ತರು ಪುನೀತರಾದರು.
icon

(7 / 10)

ನಾಲ್ಕು ವರ್ಷಗಳ ಬಳಿಕ ಇಂದು ಮೂಲ ದೇವರ ದರ್ಶನ ಪಡೆಯಲು ಲಕ್ಷಾಂತರ ಮಂದಿ  ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಭಕ್ತರು ಪುನೀತರಾದರು.

ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು. ಎಲ್ಲಿಯೂ ನೂಕುನುಗ್ಗಲು ಉಂಟಾಗದಂತೆ ಮುನ್ನೆಚ್ಚರಿಕೆ, ಬಿಗಿಯಾದ ಪೊಲೀಸ್ ಬಂದೋ‌ಬಸ್ತ್ ಮಾಡಿದ್ದರು.
icon

(8 / 10)

ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು. ಎಲ್ಲಿಯೂ ನೂಕುನುಗ್ಗಲು ಉಂಟಾಗದಂತೆ ಮುನ್ನೆಚ್ಚರಿಕೆ, ಬಿಗಿಯಾದ ಪೊಲೀಸ್ ಬಂದೋ‌ಬಸ್ತ್ ಮಾಡಿದ್ದರು.

ಇದೇ ವೇಳೆ ದೇಗುಲದ ಆಸುಪಾಸಿನಲ್ಲಿರುವ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದ ಆಸ್ತಿಕರು. ಈ ಕುರಿತು ಸುಬ್ರಹ್ಮಣ್ಯೇಶ್ವರಸ್ವಾಮಿ‌ ದೇಗುಲದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.
icon

(9 / 10)

ಇದೇ ವೇಳೆ ದೇಗುಲದ ಆಸುಪಾಸಿನಲ್ಲಿರುವ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದ ಆಸ್ತಿಕರು. ಈ ಕುರಿತು ಸುಬ್ರಹ್ಮಣ್ಯೇಶ್ವರಸ್ವಾಮಿ‌ ದೇಗುಲದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

ಸಾಕಷ್ಟು ಜನರು ದೇವಸ್ಥಾನಕ್ಕೆ ಬಂದು ಆಶಿರ್ವಾದ ಪಡೆದರು (ವರದಿ: ರಂಗಸ್ವಾಮಿ)
icon

(10 / 10)

ಸಾಕಷ್ಟು ಜನರು ದೇವಸ್ಥಾನಕ್ಕೆ ಬಂದು ಆಶಿರ್ವಾದ ಪಡೆದರು (ವರದಿ: ರಂಗಸ್ವಾಮಿ)


ಇತರ ಗ್ಯಾಲರಿಗಳು