CM Bommai breakfast with cemetery workers: ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ: ಫೋಟೋಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಜ.11, ಬುಧವಾರ) ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದಾರೆ. ಅದರ ಫೋಟೋಗಳು ಇಲ್ಲಿವೆ.
(1 / 6)
ಸಿಎಂ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.
(2 / 6)
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ ನಾಥ್ , ಚಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
(3 / 6)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಕೂಡ ಇದೇ ವೇಳೆ ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ್ದಾರೆ.
(4 / 6)
ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಪ್ರಕಟಿಸಿದ್ದಾರೆ.
ಇತರ ಗ್ಯಾಲರಿಗಳು