2012ರ ಬಳಿಕ ಐಪಿಎಲ್‌ನಲ್ಲಿ ಮೊದಲ ಪಂದ್ಯ ಗೆದ್ದಿಲ್ಲ ಮುಂಬೈ ಇಂಡಿಯನ್ಸ್; ಸತತ 13 ಪಂದ್ಯ ಸೋತ 5 ಬಾರಿಯ ಚಾಂಪಿಯನ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  2012ರ ಬಳಿಕ ಐಪಿಎಲ್‌ನಲ್ಲಿ ಮೊದಲ ಪಂದ್ಯ ಗೆದ್ದಿಲ್ಲ ಮುಂಬೈ ಇಂಡಿಯನ್ಸ್; ಸತತ 13 ಪಂದ್ಯ ಸೋತ 5 ಬಾರಿಯ ಚಾಂಪಿಯನ್

2012ರ ಬಳಿಕ ಐಪಿಎಲ್‌ನಲ್ಲಿ ಮೊದಲ ಪಂದ್ಯ ಗೆದ್ದಿಲ್ಲ ಮುಂಬೈ ಇಂಡಿಯನ್ಸ್; ಸತತ 13 ಪಂದ್ಯ ಸೋತ 5 ಬಾರಿಯ ಚಾಂಪಿಯನ್

  • ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಮೊದಲ ಪಂದ್ಯದಲ್ಲಿ ಸೋಲುವ ಅಭ್ಯಾಸ ಮುಂದುವರೆಸಿದೆ. 2012ರಲ್ಲಿ ಕೊನೆಯ ಬಾರಿಗೆ ಎಂಐ ಮೊದಲ ಪಂದ್ಯ ಗೆದ್ದಿತ್ತು. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತ್ತು. ಆ ನಂತರ 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಬಳಿಕ ಮುಂಬೈ ತಂಡ ಐಪಿಎಲ್‌ನಲ್ಲಿ ಆಡುತ್ತಿರುವ ಮೊದಲ ಪಂದ್ಯ ಗೆದ್ದಿಲ್ಲ.

ಮುಂಬೈ ಇಂಡಿಯನ್ಸ್ ತಂಡ ಕಳೆದ 13 ವರ್ಷಗಳಿಂದ ಇದೇ ಪ್ರವೃತ್ತಿಯನ್ನು ಕಾಯ್ದುಕೊಳ್ಳುತ್ತಿದೆ. ಐಪಿಎಲ್‌ನಲ್ಲಿ ತಮ್ಮ ಆರಂಭಿಕ ಪಂದ್ಯವನ್ನು ಸೋಲುತ್ತಾ ಬಂದಿದೆ. ಈ ಪ್ರವೃತ್ತಿ 2025ರ ಋತುವಿನಲ್ಲಿಯೂ ಬದಲಾಗಲಿಲ್ಲ. 2012ರಲ್ಲಿ ಮುಂಬೈ ಕೊನೆಯ ಬಾರಿ ಐಪಿಎಲ್ ಗೆದ್ದಿತ್ತು. 2013ರ ಲೀಗ್ ಬಳಿಕ ಮುಂಬೈ ತಂಡ ಐಪಿಎಲ್‌ನಲ್ಲಿ ತಾನು ಆಡಿದ ಮೊದಲ ಪಂದ್ಯವನ್ನು ಗೆದ್ದಿಲ್ಲ. ಚಿತ್ರ: ಎಎನ್ಐ
icon

(1 / 6)

ಮುಂಬೈ ಇಂಡಿಯನ್ಸ್ ತಂಡ ಕಳೆದ 13 ವರ್ಷಗಳಿಂದ ಇದೇ ಪ್ರವೃತ್ತಿಯನ್ನು ಕಾಯ್ದುಕೊಳ್ಳುತ್ತಿದೆ. ಐಪಿಎಲ್‌ನಲ್ಲಿ ತಮ್ಮ ಆರಂಭಿಕ ಪಂದ್ಯವನ್ನು ಸೋಲುತ್ತಾ ಬಂದಿದೆ. ಈ ಪ್ರವೃತ್ತಿ 2025ರ ಋತುವಿನಲ್ಲಿಯೂ ಬದಲಾಗಲಿಲ್ಲ. 2012ರಲ್ಲಿ ಮುಂಬೈ ಕೊನೆಯ ಬಾರಿ ಐಪಿಎಲ್ ಗೆದ್ದಿತ್ತು. 2013ರ ಲೀಗ್ ಬಳಿಕ ಮುಂಬೈ ತಂಡ ಐಪಿಎಲ್‌ನಲ್ಲಿ ತಾನು ಆಡಿದ ಮೊದಲ ಪಂದ್ಯವನ್ನು ಗೆದ್ದಿಲ್ಲ. ಚಿತ್ರ: ಎಎನ್ಐ

ಐಪಿಎಲ್ 2025ರ ಎರಡನೇ ದಿನದ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಬಾರಿ ಸಿಎಸ್‌ಕೆ ವಿರುದ್ಧ ಮುಂಬೈ 4 ವಿಕೆಟ್‌ಗಳಿಂದ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ, 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಚೆನ್ನೈ 5 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಗಳ ಜಯ ಸಾಧಿಸಿತು. ಫೋಟೋ: ಪಿಟಿಐ
icon

(2 / 6)

ಐಪಿಎಲ್ 2025ರ ಎರಡನೇ ದಿನದ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಬಾರಿ ಸಿಎಸ್‌ಕೆ ವಿರುದ್ಧ ಮುಂಬೈ 4 ವಿಕೆಟ್‌ಗಳಿಂದ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ, 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಚೆನ್ನೈ 5 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಗಳ ಜಯ ಸಾಧಿಸಿತು. ಫೋಟೋ: ಪಿಟಿಐ

ಐಪಿಎಲ್‌ನಲ್ಲಿ ಎರಡು ಅತ್ಯಂತ ಯಶಸ್ವಿ ತಂಡಗಳ ನಡುವಿನ ಹೋರಾಟ ಪ್ರತಿಬಾರಿಯೂ ರೋಚಕವಾಗಿರುತ್ತದೆ. ಮುಂಬೈ ಪರ ಡೆತ್‌ ಓವರ್‌ಗಳಲ್ಲಿ ದೀಪಕ್ ಚಹರ್ 15 ಎಸೆತಗಳಲ್ಲಿ 28 ರನ್ ಗಳಿಸಿ ತಂಡದ ಮೊತ್ತ ಹೆಚಚಿಸಿದ್ದರು. ಮುಂಬೈ ಪರ ತಿಲಕ್ ವರ್ಮಾ ಗರಿಷ್ಠ ಸ್ಕೋರ್ ಗಳಿಸಿದರು. ಅವರು 25 ಎಸೆತಗಳಲ್ಲಿ 31 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 29 ರನ್ ಸಿಡಿಸಿ ಔಟಾದರು. ಫೋಟೋ: ಪಿಟಿಐ
icon

(3 / 6)

ಐಪಿಎಲ್‌ನಲ್ಲಿ ಎರಡು ಅತ್ಯಂತ ಯಶಸ್ವಿ ತಂಡಗಳ ನಡುವಿನ ಹೋರಾಟ ಪ್ರತಿಬಾರಿಯೂ ರೋಚಕವಾಗಿರುತ್ತದೆ. ಮುಂಬೈ ಪರ ಡೆತ್‌ ಓವರ್‌ಗಳಲ್ಲಿ ದೀಪಕ್ ಚಹರ್ 15 ಎಸೆತಗಳಲ್ಲಿ 28 ರನ್ ಗಳಿಸಿ ತಂಡದ ಮೊತ್ತ ಹೆಚಚಿಸಿದ್ದರು. ಮುಂಬೈ ಪರ ತಿಲಕ್ ವರ್ಮಾ ಗರಿಷ್ಠ ಸ್ಕೋರ್ ಗಳಿಸಿದರು. ಅವರು 25 ಎಸೆತಗಳಲ್ಲಿ 31 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 29 ರನ್ ಸಿಡಿಸಿ ಔಟಾದರು. ಫೋಟೋ: ಪಿಟಿಐ

ವಾಸ್ತವವಾಗಿ, ಚೆಪಾಕ್ ಪಿಚ್ ಯಾವಾಗಲೂ ಸ್ಪಿನ್ನರ್‌ಗಳ ಸ್ವರ್ಗವಾಗಿದೆ. ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ನೂರ್ ಅಹ್ಮದ್ ಮತ್ತು ರಚಿನ್ ರವೀಂದ್ರ ಅವರಂತಹ ನಾಲ್ವರು ಸ್ಪಿನ್ನರ್‌ಗಳು ಎದುರಾಳಿ ತಂಡದ ಮೇಲೆ ಒತ್ತಡ ಹೇರಿದರು. ಫೋಟೋ: ರಾಯಿಟರ್ಸ್
icon

(4 / 6)

ವಾಸ್ತವವಾಗಿ, ಚೆಪಾಕ್ ಪಿಚ್ ಯಾವಾಗಲೂ ಸ್ಪಿನ್ನರ್‌ಗಳ ಸ್ವರ್ಗವಾಗಿದೆ. ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ನೂರ್ ಅಹ್ಮದ್ ಮತ್ತು ರಚಿನ್ ರವೀಂದ್ರ ಅವರಂತಹ ನಾಲ್ವರು ಸ್ಪಿನ್ನರ್‌ಗಳು ಎದುರಾಳಿ ತಂಡದ ಮೇಲೆ ಒತ್ತಡ ಹೇರಿದರು. ಫೋಟೋ: ರಾಯಿಟರ್ಸ್

ಚೆನ್ನೈ ತಂಡ 19.1 ಓವರ್‌ಗಳಲ್ಲಿ ಮುಂಬೈ ನೀಡಿದ ಗುರಿ ತಲುಪಿತು. ರಚಿನ್ ರವೀಂದ್ರ 45 ಎಸೆತಗಳಲ್ಲಿ 65 ರನ್ ಗಳಿಸಿ ಔಟಾಗದೆ ಉಳಿದರು. ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಕೂಡ ಅರ್ಧಶತಕ ಬಾರಿಸಿದರು. ಚೆನ್ನೈ ಈ ಪಂದ್ಯವನ್ನು 4 ವಿಕೆಟ್ ಗಳಿಂದ ಗೆದ್ದುಕೊಂಡಿತು. ಇದರೊಂದಿಗೆ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಮುಂಬೈ ಸೋಲಿನ ದಾಖಲೆ ಮುಂದುವರೆದಿದೆ. ಫೋಟೋ: ಪಿಟಿಐ
icon

(5 / 6)

ಚೆನ್ನೈ ತಂಡ 19.1 ಓವರ್‌ಗಳಲ್ಲಿ ಮುಂಬೈ ನೀಡಿದ ಗುರಿ ತಲುಪಿತು. ರಚಿನ್ ರವೀಂದ್ರ 45 ಎಸೆತಗಳಲ್ಲಿ 65 ರನ್ ಗಳಿಸಿ ಔಟಾಗದೆ ಉಳಿದರು. ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಕೂಡ ಅರ್ಧಶತಕ ಬಾರಿಸಿದರು. ಚೆನ್ನೈ ಈ ಪಂದ್ಯವನ್ನು 4 ವಿಕೆಟ್ ಗಳಿಂದ ಗೆದ್ದುಕೊಂಡಿತು. ಇದರೊಂದಿಗೆ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಮುಂಬೈ ಸೋಲಿನ ದಾಖಲೆ ಮುಂದುವರೆದಿದೆ. ಫೋಟೋ: ಪಿಟಿಐ

ಮುಂಬೈ ತಂಡ 2024ರಲ್ಲಿ ಗುಜರಾತ್ ಟೈಟಾನ್ಸ್‌ ವಿರುದ್ಧ  ಆರು ರನ್‌ಗಳ ಸೋಲು ಕಂಡಿತ್ತು. 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಟು ವಿಕೆಟ್‌ಗಳ ಸೋಲುಂಡಿತ್ತು. 2022ರಲ್ಲಿಯೂ ದೆಹಲಿ ಕ್ಯಾಪಿಟಲ್ಸ್‌ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲು ಕಂಡರೆ, 2021ರಲ್ಲಿ ಆರ್‌ಸಿಬಿ ವಿರುದ್ಧ ಎರಡು ವಿಕೆಟ್‌ಗಳ ಸೋಲು ಕಂಡಿತ್ತು.
icon

(6 / 6)

ಮುಂಬೈ ತಂಡ 2024ರಲ್ಲಿ ಗುಜರಾತ್ ಟೈಟಾನ್ಸ್‌ ವಿರುದ್ಧ ಆರು ರನ್‌ಗಳ ಸೋಲು ಕಂಡಿತ್ತು. 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಟು ವಿಕೆಟ್‌ಗಳ ಸೋಲುಂಡಿತ್ತು. 2022ರಲ್ಲಿಯೂ ದೆಹಲಿ ಕ್ಯಾಪಿಟಲ್ಸ್‌ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲು ಕಂಡರೆ, 2021ರಲ್ಲಿ ಆರ್‌ಸಿಬಿ ವಿರುದ್ಧ ಎರಡು ವಿಕೆಟ್‌ಗಳ ಸೋಲು ಕಂಡಿತ್ತು.
(PTI)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು