Mangaluru Auto Blast: ಶಾರೀಕ್ ಭೇಟಿ ಮಾಡಿದ ಕುಟುಂಬ ಸದಸ್ಯರ ವಿಚಾರಣೆ?: ಮಂಗಳೂರು ಪೊಲೀಸ್ ಆಯುಕ್ತರು ಹೇಳಿದ್ದೇನು?
- ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾವೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಾರೀಕ್ಗೆ ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕವಿದೆ ಎಂಬ ಪೊಲೀಸರ ಮಾಹಿತಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಮಧ್ಯೆ ಆರೋಪಿ ಶಾರೀಕ್ನ ಕುಟುಂಬ ವರ್ಗ ಆತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ..
- ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾವೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಾರೀಕ್ಗೆ ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕವಿದೆ ಎಂಬ ಪೊಲೀಸರ ಮಾಹಿತಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಮಧ್ಯೆ ಆರೋಪಿ ಶಾರೀಕ್ನ ಕುಟುಂಬ ವರ್ಗ ಆತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ..
(1 / 5)
ಮಂಗಳೂರಿನ ಆಟೋರಿಕ್ಷಾ ಬಾಂಬ್ ಸ್ಫೋಟದ ಆರೋಪಿ ಶಾರೀಕ್ನ ಕುಟುಂಬ ವರ್ಗ, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ನನ್ನು ಭೇಟಿ ಮಾಡಿತು.(ANI)
(2 / 5)
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮನಿಸಿದ ಶಾರೀಕ್ ಕುಟುಂಬ, ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ನ ಆರೋಗ್ಯ ವಿಚಾರಿಸಿತು.(ANI)
(3 / 5)
ಈ ಕುರಿತು ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಾವು ಅನುಮಾನಿಸುತ್ತಿರುವ ವ್ಯಕ್ತಿ ಇದೇ ಎಂದು ಅವರು ಖಚಿತಪಡಿಸಿದರೆ, ಕುಟುಂಬ ಸದಸ್ಯರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.(ANI)
(4 / 5)
ಕುಟುಂಬದ ಓರ್ವ ಪುರುಷ ಮತ್ತು ಮೂವರು ಮಹಿಳೆ ಶಾರೀಕ್ನನ್ನು ಭೇಟಿ ಮಾಡಿದ್ದಾರೆ. ಇವರು ಶಾರೀಕ್ನ ಗುರುತು ಪತ್ತೆ ಮಾಡಿದರೆ, ಅವರನ್ನೂ ವಿಚಾರಣೆಗೆ ಗುರಿಪಡಿಸಲಾಗುವುದು ಎಂದು ಎನ್. ಶಶಿಕುಮಾರ್ ತಿಳಿಸಿದ್ದಾರೆ.(ANI)
ಇತರ ಗ್ಯಾಲರಿಗಳು