ಕನ್ನಡ ಸುದ್ದಿ  /  Photo Gallery  /  Happy Birthday Devaraj Usire Usire Movie Team Released Devaraj New Look

Usire Usire Movie Look: ನಟ ದೇವರಾಜ್‌ ಇದೀಗ ಡಿಸೋಜಾ; ವೇಷದ ಜತೆ ಧರ್ಮ ಬದಲಿಸಿದ ಡೈನಾಮಿಕ್‌ ಹೀರೋ

  • ಸ್ಯಾಂಡಲ್‌ವುಡ್‌ ಡೈನಾಮಿಕ್‌ ಸ್ಟಾರ್‌ ದೇವರಾಜ್‌ ಅವರ ಬರ್ತ್‌ಡೇ (ಸೆ. 20) ಪ್ರಯುಕ್ತ ಅವರ ಹೊಸ ಅವತಾರವನ್ನು "ಉಸಿರೇ ಉಸಿರೇ" ಸಿನಿಮಾತಂಡ ಬಿಡುಗಡೆ ಮಾಡಿದೆ. ದೇವರಾಜ್‌ ಇದೀಗ ಡಿಸೋಜಾ ಆಗಿ ಬದಲಾಗಿದ್ದಾರೆ. ಅವರ ಆ ಹೊಸ ಅವತಾರ ಇಲ್ಲಿದೆ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ "ಉಸಿರೇ ಉಸಿರೇ" ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಡಿಸೋಜಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.
icon

(1 / 6)

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ "ಉಸಿರೇ ಉಸಿರೇ" ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಡಿಸೋಜಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ದೇವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ "ಉಸಿರೇ ಉಸಿರೇ" ಚಿತ್ರತಂಡದಿಂದ ಚಿತ್ರದಲ್ಲಿನ ಅವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ.
icon

(2 / 6)

ದೇವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ "ಉಸಿರೇ ಉಸಿರೇ" ಚಿತ್ರತಂಡದಿಂದ ಚಿತ್ರದಲ್ಲಿನ ಅವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಈ ಚಿತ್ರದಲ್ಲಿ ಸಾಧುಕೋಕಿಲ ಅವರದ್ದು ವಿಶೇಷ ಪಾತ್ರ. ಇಲ್ಲಿಯವರೆಗೂ ಹಾಸ್ಯ ಪಾತ್ರದ ಮೂಲಕವೇ ಗಮನ ಸೆಳೆದಿದ್ದ ಅವರು, ಈ ಸಿನಿಮಾದಲ್ಲಿ ನಗಿಸುವುದನ್ನು ಬದಿಗಿಟ್ಟು, ಗಂಭೀರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
icon

(3 / 6)

ಈ ಚಿತ್ರದಲ್ಲಿ ಸಾಧುಕೋಕಿಲ ಅವರದ್ದು ವಿಶೇಷ ಪಾತ್ರ. ಇಲ್ಲಿಯವರೆಗೂ ಹಾಸ್ಯ ಪಾತ್ರದ ಮೂಲಕವೇ ಗಮನ ಸೆಳೆದಿದ್ದ ಅವರು, ಈ ಸಿನಿಮಾದಲ್ಲಿ ನಗಿಸುವುದನ್ನು ಬದಿಗಿಟ್ಟು, ಗಂಭೀರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಒಂದು ಹಾಡನ್ನು ಕೂಡ ವಿಜಯ್ ಅವರೆ ಬರೆದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನವಿದೆ.
icon

(4 / 6)

ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಒಂದು ಹಾಡನ್ನು ಕೂಡ ವಿಜಯ್ ಅವರೆ ಬರೆದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನವಿದೆ.

"ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ತಾರಾಬಳಗದಲ್ಲಿದ್ದಾರೆ. ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿದ್ದಾರೆ.
icon

(5 / 6)

"ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ತಾರಾಬಳಗದಲ್ಲಿದ್ದಾರೆ. ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿದ್ದಾರೆ.

ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ.
icon

(6 / 6)

ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ.


IPL_Entry_Point

ಇತರ ಗ್ಯಾಲರಿಗಳು