ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dodda Ganesh: 493 ವಿಕೆಟ್​ ಕಿತ್ತು ಮೈದಾನದಲ್ಲಿ ಆರ್ಭಟಿಸಿದ್ದ ಕರ್ನಾಟಕದ ಖ್ಯಾತ ಕ್ರಿಕೆಟಿಗ ಬಿಜೆಪಿ ಸೇರ್ಪಡೆ!

Dodda Ganesh: 493 ವಿಕೆಟ್​ ಕಿತ್ತು ಮೈದಾನದಲ್ಲಿ ಆರ್ಭಟಿಸಿದ್ದ ಕರ್ನಾಟಕದ ಖ್ಯಾತ ಕ್ರಿಕೆಟಿಗ ಬಿಜೆಪಿ ಸೇರ್ಪಡೆ!

  • Dodda Ganesh : ನೇರ ಮಾತುಗಳಿಂದಲೇ ಹೆಸರುವಾಸಿಯಾಗಿರುವ ಭಾರತ ಮತ್ತು ಕರ್ನಾಟಕದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.

ಲೋಕಸಭಾ ಚುನಾವಣೆ ಸಮೀಸುತ್ತಿರುವ ಈ ಹೊತ್ತಿನಲ್ಲಿ ಕರ್ನಾಟಕದ ಖ್ಯಾತ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ (ದೊಡ್ಡ ನರಸಯ್ಯ ಗಣೇಶ್) ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
icon

(1 / 7)

ಲೋಕಸಭಾ ಚುನಾವಣೆ ಸಮೀಸುತ್ತಿರುವ ಈ ಹೊತ್ತಿನಲ್ಲಿ ಕರ್ನಾಟಕದ ಖ್ಯಾತ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ (ದೊಡ್ಡ ನರಸಯ್ಯ ಗಣೇಶ್) ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಏಪ್ರಿಲ್ 5ರಂದು ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಈ ಕುರಿತು ತನ್ನ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
icon

(2 / 7)

ಏಪ್ರಿಲ್ 5ರಂದು ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಈ ಕುರಿತು ತನ್ನ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ತಮ್ಮ ನೇರ ಮಾತುಗಳಿಂದಲೇ ಹೆಸರು ಮಾಡಿರುವ ದೊಡ್ಡ ಗಣೇಶ್ ಅವರು ರಾಜಕೀಯ ಸೇರುವ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಆ ಮೂಲಕ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಿದ್ದಾರೆ.
icon

(3 / 7)

ತಮ್ಮ ನೇರ ಮಾತುಗಳಿಂದಲೇ ಹೆಸರು ಮಾಡಿರುವ ದೊಡ್ಡ ಗಣೇಶ್ ಅವರು ರಾಜಕೀಯ ಸೇರುವ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಆ ಮೂಲಕ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಿದ್ದಾರೆ.

ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೇ ಇರಲಿ ಎಂದು ಬಯಸುತ್ತೇನೆ ಎಂದು ಪೋಸ್ಟ್​​ನಲ್ಲಿ ಬರೆದಿದ್ದಾರೆ.
icon

(4 / 7)

ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೇ ಇರಲಿ ಎಂದು ಬಯಸುತ್ತೇನೆ ಎಂದು ಪೋಸ್ಟ್​​ನಲ್ಲಿ ಬರೆದಿದ್ದಾರೆ.

ಭಾರತದ ಪರ 1 ಏಕದಿನ, 5 ಟೆಸ್ಟ್​ ಆಡಿರುವ ದೊಡ್ಡ ಗಣೇಶ್, 6 ವಿಕೆಟ್ ಪಡೆದಿದ್ದಾರೆ. ಇನ್ನು ದೇಶೀಯ ಕ್ರಿಕೆಟ್​ನಲ್ಲಿ 104 ಫಸ್ಟ್​ ಕ್ಲಾಸ್ ಪಂದ್ಯಗಳಲ್ಲಿ 365 ವಿಕೆಟ್, 89 ಲೀಸ್ಟ್​ ಎ ಪಂದ್ಯಗಳಲ್ಲಿ 128 ವಿಕೆಟ್ ಉರುಳಿಸಿದ್ದಾರೆ. ಫಸ್ಟ್​ ಕ್ಲಾಸ್​ನಲ್ಲಿ 2023 ರನ್ ಗಳಿಸಿದ್ದಾರೆ.
icon

(5 / 7)

ಭಾರತದ ಪರ 1 ಏಕದಿನ, 5 ಟೆಸ್ಟ್​ ಆಡಿರುವ ದೊಡ್ಡ ಗಣೇಶ್, 6 ವಿಕೆಟ್ ಪಡೆದಿದ್ದಾರೆ. ಇನ್ನು ದೇಶೀಯ ಕ್ರಿಕೆಟ್​ನಲ್ಲಿ 104 ಫಸ್ಟ್​ ಕ್ಲಾಸ್ ಪಂದ್ಯಗಳಲ್ಲಿ 365 ವಿಕೆಟ್, 89 ಲೀಸ್ಟ್​ ಎ ಪಂದ್ಯಗಳಲ್ಲಿ 128 ವಿಕೆಟ್ ಉರುಳಿಸಿದ್ದಾರೆ. ಫಸ್ಟ್​ ಕ್ಲಾಸ್​ನಲ್ಲಿ 2023 ರನ್ ಗಳಿಸಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ಅವರ ಜೊತೆಗೆ ಮಾಜಿ ಆಟಗಾರ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಕೂಡ ಕಮಲ ಹಿಡಿದರು. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ.
icon

(6 / 7)

ಸಂಸದೆ ಸುಮಲತಾ ಅಂಬರೀಶ್ ಅವರ ಜೊತೆಗೆ ಮಾಜಿ ಆಟಗಾರ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಕೂಡ ಕಮಲ ಹಿಡಿದರು. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ.

ಪಕ್ಷ ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
icon

(7 / 7)

ಪಕ್ಷ ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.


IPL_Entry_Point

ಇತರ ಗ್ಯಾಲರಿಗಳು