ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಆರ್​ಸಿಬಿ vs ಜಿಜಿ ಪಂದ್ಯ; ಕಳೆದ ವರ್ಷಕ್ಕಿಂತ ಶೇ 150ರಷ್ಟು ಹೆಚ್ಚಳ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಆರ್​ಸಿಬಿ Vs ಜಿಜಿ ಪಂದ್ಯ; ಕಳೆದ ವರ್ಷಕ್ಕಿಂತ ಶೇ 150ರಷ್ಟು ಹೆಚ್ಚಳ

ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಆರ್​ಸಿಬಿ vs ಜಿಜಿ ಪಂದ್ಯ; ಕಳೆದ ವರ್ಷಕ್ಕಿಂತ ಶೇ 150ರಷ್ಟು ಹೆಚ್ಚಳ

  • ಡಬ್ಲ್ಯುಪಿಎಲ್ ಸಾಧನೆ ಕುರಿತು ಬಿಸಿಸಿಐ ಮಾಜಿ ಕಾರ್ಯದರ್ಶಿಯೂ ಆಗಿದ್ದ ಐಸಿಸಿ ಅಧ್ಯಕ್ಷ ಜಯ್​ ಶಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಗುಜರಾತ್ ಜೈಂಟ್ಸ್ ನಡುವಿನ 3ನೇ ಆವೃತ್ತಿಯ ಡಬ್ಲ್ಯುಪಿಎಲ್​ ಉದ್ಘಾಟನಾ ಪಂದ್ಯವು ವೀಕ್ಷಣೆ ಸಂಖ್ಯೆಯಲ್ಲಿ ಎಲ್ಲಾ ದಾಖಲೆಗಳನ್ನು ಮುರಿದಿದೆ.
icon

(1 / 11)

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಗುಜರಾತ್ ಜೈಂಟ್ಸ್ ನಡುವಿನ 3ನೇ ಆವೃತ್ತಿಯ ಡಬ್ಲ್ಯುಪಿಎಲ್​ ಉದ್ಘಾಟನಾ ಪಂದ್ಯವು ವೀಕ್ಷಣೆ ಸಂಖ್ಯೆಯಲ್ಲಿ ಎಲ್ಲಾ ದಾಖಲೆಗಳನ್ನು ಮುರಿದಿದೆ.
(AFP)

ಡಬ್ಲ್ಯುಪಿಎಲ್ ಸಾಧನೆ ಕುರಿತು ಬಿಸಿಸಿಐ ಮಾಜಿ ಕಾರ್ಯದರ್ಶಿಯೂ ಆಗಿದ್ದ ಐಸಿಸಿ ಅಧ್ಯಕ್ಷ ಜಯ್​ ಶಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
icon

(2 / 11)

ಡಬ್ಲ್ಯುಪಿಎಲ್ ಸಾಧನೆ ಕುರಿತು ಬಿಸಿಸಿಐ ಮಾಜಿ ಕಾರ್ಯದರ್ಶಿಯೂ ಆಗಿದ್ದ ಐಸಿಸಿ ಅಧ್ಯಕ್ಷ ಜಯ್​ ಶಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
(PTI)

ಸುಮಾರು 30 ಮಿಲಿಯನ್ ಜನರು ಟಿವಿಯಲ್ಲಿ ಪಂದ್ಯ ವೀಕ್ಷಿಸಿರುವುದಾಗಿ ಜಯ್ ಶಾ ಅವರು ಪೋಸ್ಟ್​​ನಲ್ಲಿ ಬರೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 150 ರಷ್ಟು ಹೆಚ್ಚು.
icon

(3 / 11)

ಸುಮಾರು 30 ಮಿಲಿಯನ್ ಜನರು ಟಿವಿಯಲ್ಲಿ ಪಂದ್ಯ ವೀಕ್ಷಿಸಿರುವುದಾಗಿ ಜಯ್ ಶಾ ಅವರು ಪೋಸ್ಟ್​​ನಲ್ಲಿ ಬರೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 150 ರಷ್ಟು ಹೆಚ್ಚು.
(AFP)

ಟಿವಿ ವೀಕ್ಷಕರ ಸಂಖ್ಯೆ ಮಾತ್ರವಲ್ಲ, ಡಿಜಿಟಲ್ ವೀಕ್ಷಕರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ 70ರಷ್ಟು ಹೆಚ್ಚು ವೀಕ್ಷಣೆ ಪಡೆದಿದೆ.
icon

(4 / 11)

ಟಿವಿ ವೀಕ್ಷಕರ ಸಂಖ್ಯೆ ಮಾತ್ರವಲ್ಲ, ಡಿಜಿಟಲ್ ವೀಕ್ಷಕರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ 70ರಷ್ಟು ಹೆಚ್ಚು ವೀಕ್ಷಣೆ ಪಡೆದಿದೆ.
(AFP)

ಗುಜರಾತ್-ಆರ್​ಸಿಬಿ ಪಂದ್ಯವು ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಗುಜರಾತ್ ವಿರುದ್ಧ 202 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ಅತಿ ಹೆಚ್ಚು ರನ್ ಚೇಸ್ ಮಾಡಿ ಗೆದ್ದ ಸಾಧನೆ ಮಾಡಿತು.
icon

(5 / 11)

ಗುಜರಾತ್-ಆರ್​ಸಿಬಿ ಪಂದ್ಯವು ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಗುಜರಾತ್ ವಿರುದ್ಧ 202 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ಅತಿ ಹೆಚ್ಚು ರನ್ ಚೇಸ್ ಮಾಡಿ ಗೆದ್ದ ಸಾಧನೆ ಮಾಡಿತು.
(AFP)

ಮೊದಲ ಆವೃತ್ತಿಯಲ್ಲಿ ಹರ್ಮನ್​ಪ್ರೀತ್ ಕೌರ್​ ನಾಯಕತ್ವದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. 2ನೇ ಆವೃತ್ತಿಯಲ್ಲಿ ಸ್ಮೃತಿ ಮಂದಾನ ನಾಯಕತ್ವದ ಆರ್​ಸಿಬಿ ಪ್ರಶಸ್ತಿ ಗೆದ್ದಿತ್ತು.
icon

(6 / 11)

ಮೊದಲ ಆವೃತ್ತಿಯಲ್ಲಿ ಹರ್ಮನ್​ಪ್ರೀತ್ ಕೌರ್​ ನಾಯಕತ್ವದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. 2ನೇ ಆವೃತ್ತಿಯಲ್ಲಿ ಸ್ಮೃತಿ ಮಂದಾನ ನಾಯಕತ್ವದ ಆರ್​ಸಿಬಿ ಪ್ರಶಸ್ತಿ ಗೆದ್ದಿತ್ತು.
(AFP)

ಆದರೆ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಎರಡು ಆವೃತ್ತಿಗಳಲ್ಲೂ ಫೈನಲ್ ಪ್ರವೇಶಿಸಿ ರನ್ನರ್​ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 
icon

(7 / 11)

ಆದರೆ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಎರಡು ಆವೃತ್ತಿಗಳಲ್ಲೂ ಫೈನಲ್ ಪ್ರವೇಶಿಸಿ ರನ್ನರ್​ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 
(HT_PRINT)

ಪ್ರಸ್ತುತ 3ನೇ ಆವೃತ್ತಿಯ ಮೊದಲ ಚರಣದ ಅಂತ್ಯಕ್ಕೆ ಆರ್​ಸಿಬಿ ಆಡಿದ 2 ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಮೂರು ಪಂದ್ಯಗಳಲ್ಲಿ 2ರಲ್ಲಿ ಗೆದ್ದು 2ನೇ ಸ್ಥಾನದಲ್ಲಿದೆ.
icon

(8 / 11)

ಪ್ರಸ್ತುತ 3ನೇ ಆವೃತ್ತಿಯ ಮೊದಲ ಚರಣದ ಅಂತ್ಯಕ್ಕೆ ಆರ್​ಸಿಬಿ ಆಡಿದ 2 ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಮೂರು ಪಂದ್ಯಗಳಲ್ಲಿ 2ರಲ್ಲಿ ಗೆದ್ದು 2ನೇ ಸ್ಥಾನದಲ್ಲಿದೆ.
(HT_PRINT)

ಮುಂಬೈ ಮತ್ತು ಗುಜರಾತ್ ತಲಾ ಒಂದು ಪಂದ್ಯ ಗೆದ್ದಿದ್ದು, ಕ್ರಮವಾಗಿ ಮೂರು ಮತ್ತು 4ನೇ ಸ್ಥಾನ ಪಡೆದಿವೆ. ಯುಪಿ ವಾರಿಯರ್ಸ್ ಒಂದು ಪಂದ್ಯ ಗೆಲ್ಲದೆ ಕೊನೆಯ ಸ್ಥಾನದಲ್ಲಿದೆ.
icon

(9 / 11)

ಮುಂಬೈ ಮತ್ತು ಗುಜರಾತ್ ತಲಾ ಒಂದು ಪಂದ್ಯ ಗೆದ್ದಿದ್ದು, ಕ್ರಮವಾಗಿ ಮೂರು ಮತ್ತು 4ನೇ ಸ್ಥಾನ ಪಡೆದಿವೆ. ಯುಪಿ ವಾರಿಯರ್ಸ್ ಒಂದು ಪಂದ್ಯ ಗೆಲ್ಲದೆ ಕೊನೆಯ ಸ್ಥಾನದಲ್ಲಿದೆ.
(REUTERS)

ಈ ಬಗ್ಗೆ ಟ್ವೀಟ್ ಮಾಡಿರುವ ಜಯ್ ಶಾ, "ಡಬ್ಲ್ಯುಪಿಎಲ್​ನ 2ನೇ ಹಂತವು ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು, ಸ್ಪರ್ಧೆಯ ಆರಂಭಿಕ ಪಂದ್ಯವನ್ನು ಟಿವಿಯಲ್ಲಿ ಸುಮಾರು 30 ಮಿಲಿಯನ್ ಜನರು ವೀಕ್ಷಿಸಿದ್ದಾರೆ ಎಂದು ಬರೆದಿದ್ದಾರೆ.
icon

(10 / 11)

ಈ ಬಗ್ಗೆ ಟ್ವೀಟ್ ಮಾಡಿರುವ ಜಯ್ ಶಾ, "ಡಬ್ಲ್ಯುಪಿಎಲ್​ನ 2ನೇ ಹಂತವು ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು, ಸ್ಪರ್ಧೆಯ ಆರಂಭಿಕ ಪಂದ್ಯವನ್ನು ಟಿವಿಯಲ್ಲಿ ಸುಮಾರು 30 ಮಿಲಿಯನ್ ಜನರು ವೀಕ್ಷಿಸಿದ್ದಾರೆ ಎಂದು ಬರೆದಿದ್ದಾರೆ.
(AFP)

ಲೀಗ್ ಹಂತದ ಪಂದ್ಯಗಳಲ್ಲಿ ಇಷ್ಟು ವೀಕ್ಷಣೆ ಪಡೆಯುವ ಮೂಲಕ ದಾಖಲೆ ಬರೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಟಿವಿ ರೇಟಿಂಗ್​ಗಳು ಶೇಕಡಾ 150 ರಷ್ಟು ಮತ್ತು ಡಿಜಿಟಲ್ ವೀಕ್ಷಣೆ ಶೇಕಡಾ 70 ರಷ್ಟು ಹೆಚ್ಚಾಗಿದೆ. ಇದು ನಿಜಕ್ಕೂ ಸಂತಸದ ಸುದ್ದಿ ಎಂದಿದ್ದಾರೆ.
icon

(11 / 11)

ಲೀಗ್ ಹಂತದ ಪಂದ್ಯಗಳಲ್ಲಿ ಇಷ್ಟು ವೀಕ್ಷಣೆ ಪಡೆಯುವ ಮೂಲಕ ದಾಖಲೆ ಬರೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಟಿವಿ ರೇಟಿಂಗ್​ಗಳು ಶೇಕಡಾ 150 ರಷ್ಟು ಮತ್ತು ಡಿಜಿಟಲ್ ವೀಕ್ಷಣೆ ಶೇಕಡಾ 70 ರಷ್ಟು ಹೆಚ್ಚಾಗಿದೆ. ಇದು ನಿಜಕ್ಕೂ ಸಂತಸದ ಸುದ್ದಿ ಎಂದಿದ್ದಾರೆ.
(PTI)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು