Dr Rajkumar Birth day: ಕರ್ನಾಟಕದಲ್ಲಿ ಡಾ.ರಾಜಕುಮಾರಗೆ ಗೌರವ, ಕನ್ನಡದ ವರನಟನ ಸಿನೆಮಾ ನಂಟು ನೆನೆದ ಜನ
ಕನ್ನಡದ ವರನಟ ಡಾ.ರಾಜಕುಮಾರ್ ಅವರ 97 ನೇ ಜನ್ಮದಿನಾಚರಣೆಯನ್ನು ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಡಾ.ರಾಜ್ ಅವರ ಸರಳತೆ, ಜೀವನ ಪ್ರೀತಿ, ಅವರ ಬದುಕಿನ ಕುರಿತು ಹಲವರು ಮಾತನಾಡಿದರು.
(1 / 6)
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ಮಡಿಕೇರಿ ಗಾಂಧಿ ಭವನದಲ್ಲಿ ಗುರುವಾರ ನಡೆದ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಚಾಲನೆ ನೀಡಿದರು.
(2 / 6)
ಬಳ್ಳಾರಿಯ ಡಾ.ರಾಜ್ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಅಧಿಕಾರಿ ವೃಂದದವರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮತ್ತಿತರರು ಹಾಜರಿದ್ದರು.
(3 / 6)
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜ್ ಕುಮಾರ್ ಅವರ 97 ನೇ ಜನ್ಮದಿನಾಚರಣೆಯನ್ನು ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಡಿಸಿ ಡಾ.ಕುಮಾರ, ವಾರ್ತಾಧಿಕಾರಿ ನಿರ್ಮಲ ಮತ್ತಿತರರು ಹಾಜರಿದ್ದರು.
(4 / 6)
ಬೆಳಗಾವಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪುಷ್ಪಾರ್ಚನೆ ಮಾಡಿದರು.
(5 / 6)
ಹೇಳಿದರು.ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ನಟಸಾರ್ವಭೌಮ ಡಾ.ರಾಜ್ಕುಮಾರ್ರವರ 97ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಪುಷ್ಪನಮನ ಸಲ್ಲಿಸಿದರು.
ಇತರ ಗ್ಯಾಲರಿಗಳು