ರಾಮನವಮಿ ನಿಮಿತ್ತ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಮನೆಯಲ್ಲಿ ಸಿಹಿ ಕಹಿ ಚಂದ್ರು ಬೊಂಬಾಟ್ ಭೋಜನ
- Bombat Bhojana: ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆ ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಿದೆ. ಅಯೋಧ್ಯೆಯ ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಮನೆಗೆ ಸಿಹಿ ಕಹಿ ಚಂದ್ರು ಭೇಟಿ ನೀಡಿ, ಬಗೆಬಗೆ ಖಾದ್ಯ ಸವಿದಿದ್ದಾರೆ.
- Bombat Bhojana: ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆ ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಿದೆ. ಅಯೋಧ್ಯೆಯ ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಮನೆಗೆ ಸಿಹಿ ಕಹಿ ಚಂದ್ರು ಭೇಟಿ ನೀಡಿ, ಬಗೆಬಗೆ ಖಾದ್ಯ ಸವಿದಿದ್ದಾರೆ.
(1 / 6)
ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ.
(2 / 6)
ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ಪರಿಚಯಿಸಿದ್ದಾರೆ ಸಿಹಿ ಕಹಿ ಚಂದ್ರು.
(3 / 6)
ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ಸಂಚಿಕೆಯಲ್ಲಿ ಸಿಹಿ ಕಹಿ ಚಂದ್ರು ಅವರ ಜತೆ ಅರುಣ್, ಎಳೆಎಳೆಯಾಗಿ ಹೇಳಿಕೊಂಡಿದ್ದಾರೆ.
(4 / 6)
ಈ ವಿಶೇಷ ಸಂಚಿಕೆಯಲ್ಲಿ ಸಿಂಗರ್ ಚಿನ್ಮಯಿ ಅತ್ರೇಯಸ್ ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿದ್ದಾರೆ.
ಇತರ ಗ್ಯಾಲರಿಗಳು