ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ; 500ಕ್ಕೂ ಹೆಚ್ಚು ಮಂದಿ ಭಾಗಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ; 500ಕ್ಕೂ ಹೆಚ್ಚು ಮಂದಿ ಭಾಗಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ; 500ಕ್ಕೂ ಹೆಚ್ಚು ಮಂದಿ ಭಾಗಿ

  • ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.

ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ 4.30ಕ್ಕೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ ಒಟ್ಟು 3 ಆವೃತ್ತಿಗಳಲ್ಲಿ 108 ಸುತ್ತು ಸೂರ್ಯ ನಮಸ್ಕಾರ ಸ್ತೋತ್ರ ಪಠಣದೊಂದಿಗೆ ನಡೆದು 6.30ಕ್ಕೆ ಕಾರ್ಯಕ್ರಮ ಸಮಾಪನಗೊಂಡಿತು.
icon

(1 / 8)

ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ 4.30ಕ್ಕೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ ಒಟ್ಟು 3 ಆವೃತ್ತಿಗಳಲ್ಲಿ 108 ಸುತ್ತು ಸೂರ್ಯ ನಮಸ್ಕಾರ ಸ್ತೋತ್ರ ಪಠಣದೊಂದಿಗೆ ನಡೆದು 6.30ಕ್ಕೆ ಕಾರ್ಯಕ್ರಮ ಸಮಾಪನಗೊಂಡಿತು.

ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಿ.ಎಸ್.‌ ಭಟ್‌, ಕಾರ್ಯಕ್ರಮ ಸಂಚಾಲಕ ಭಾಸ್ಕರ್‌, ತಾಲೂಕು ಸಂಚಾಲಕರಾದ ಕೃಷ್ಣಾನಂದ, ಸಹಸಂಚಾಲಕಿ ಶ್ರೀಮತಿ ವೀಣಾ ಪದ್ಮನಾಭ್‌, ಪ್ರಮುಖರುಗಳಾದ ಪುಷ್ಪರಾಜ್, ಹರಿಪ್ರಸಾದ, ಸುದೇಶರವರು ಜತೆಯಾಗಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. 
icon

(2 / 8)

ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಿ.ಎಸ್.‌ ಭಟ್‌, ಕಾರ್ಯಕ್ರಮ ಸಂಚಾಲಕ ಭಾಸ್ಕರ್‌, ತಾಲೂಕು ಸಂಚಾಲಕರಾದ ಕೃಷ್ಣಾನಂದ, ಸಹಸಂಚಾಲಕಿ ಶ್ರೀಮತಿ ವೀಣಾ ಪದ್ಮನಾಭ್‌, ಪ್ರಮುಖರುಗಳಾದ ಪುಷ್ಪರಾಜ್, ಹರಿಪ್ರಸಾದ, ಸುದೇಶರವರು ಜತೆಯಾಗಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. 

ಕಾರ್ಯಕ್ರಮದಲ್ಲಿ ರಥಸಪ್ತಮಿಯ ಮಹತ್ವವನ್ನು ಬನ್ನೂರು ಶಾಖೆಯ ಕಾವ್ಯ ಬೌದ್ಧಿಕ್‌ ನೀಡಿದರು
icon

(3 / 8)

ಕಾರ್ಯಕ್ರಮದಲ್ಲಿ ರಥಸಪ್ತಮಿಯ ಮಹತ್ವವನ್ನು ಬನ್ನೂರು ಶಾಖೆಯ ಕಾವ್ಯ ಬೌದ್ಧಿಕ್‌ ನೀಡಿದರು

ಸುಮಾರು 500ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸುಳ್ಯ, ಬೆಳಿಯೂರುಕಟ್ಟೆ ಹಾಗೂ ಪುತ್ತೂರು ತಾಲೂಕಿನ ಯೋಗಬಂಧುಗಳು ಭಾಗವಹಿಸಿದ್ದರು. ದೇವಸ್ಥಾನದ ರಥಬೀದಿಯಲ್ಲಿ ಶಿಸ್ತುಬದ್ಧವಾಗಿ ಸೂರ್ಯನಮಸ್ಕಾರ ಮಾಡಲಾಯಿತು.
icon

(4 / 8)

ಸುಮಾರು 500ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸುಳ್ಯ, ಬೆಳಿಯೂರುಕಟ್ಟೆ ಹಾಗೂ ಪುತ್ತೂರು ತಾಲೂಕಿನ ಯೋಗಬಂಧುಗಳು ಭಾಗವಹಿಸಿದ್ದರು. ದೇವಸ್ಥಾನದ ರಥಬೀದಿಯಲ್ಲಿ ಶಿಸ್ತುಬದ್ಧವಾಗಿ ಸೂರ್ಯನಮಸ್ಕಾರ ಮಾಡಲಾಯಿತು.

ತಾಲೂಕು ಶಿಕ್ಷಣ ಪ್ರಮುಖರಾದ ವಸಂತ ಹಾಗೂ ಸತೀಶ್‌ ಸೂರ್ಯನಮಸ್ಕಾರದ ಮಾರ್ಗದರ್ಶನ ನೀಡಿದರು. ಪುತ್ತೂರಿನ  ವಿವಿಧ ಶಾಖೆಯ ಬಂಧುಗಳು ವೇದಿಕೆಯಲ್ಲಿ ಪ್ರಾತ್ಯಕ್ಷಿಕೆಯಲ್ಲಿ ಜೋಡಿಸಿಕೊಂಡರು.
icon

(5 / 8)

ತಾಲೂಕು ಶಿಕ್ಷಣ ಪ್ರಮುಖರಾದ ವಸಂತ ಹಾಗೂ ಸತೀಶ್‌ ಸೂರ್ಯನಮಸ್ಕಾರದ ಮಾರ್ಗದರ್ಶನ ನೀಡಿದರು. ಪುತ್ತೂರಿನ  ವಿವಿಧ ಶಾಖೆಯ ಬಂಧುಗಳು ವೇದಿಕೆಯಲ್ಲಿ ಪ್ರಾತ್ಯಕ್ಷಿಕೆಯಲ್ಲಿ ಜೋಡಿಸಿಕೊಂಡರು.

ಸಂಪ್ಯ ಶಾಖೆಯ ಶಿಲ್ಪಾ ಕಾರ್ಯಕ್ರಮ ನಿರೂಪಣೆಗೈದು, ಮಹಾಲಿಂಗೇಶ್ವರ ಶಾಖೆಯ ಪ್ರಸನ್ನ ಸ್ವಾಗತಿಸಿ, ಕಾರ್ಯಕ್ರಮ ಸಂಚಾಲಕ ಭಾಸ್ಕರ್‌ ವಂದನಾರ್ಪಣೆಗೈದರು.
icon

(6 / 8)

ಸಂಪ್ಯ ಶಾಖೆಯ ಶಿಲ್ಪಾ ಕಾರ್ಯಕ್ರಮ ನಿರೂಪಣೆಗೈದು, ಮಹಾಲಿಂಗೇಶ್ವರ ಶಾಖೆಯ ಪ್ರಸನ್ನ ಸ್ವಾಗತಿಸಿ, ಕಾರ್ಯಕ್ರಮ ಸಂಚಾಲಕ ಭಾಸ್ಕರ್‌ ವಂದನಾರ್ಪಣೆಗೈದರು.

ಪ್ರಾಂತ್ಯ ಸಂಘಟನಾ ಪ್ರಮುಖರಾದ ಹರೀಶ್‌ ಕೋಟ್ಯಾನ್‌, ಜಿಲ್ಲಾ ಸಂಚಾಲಕ ನಾರಾಯಣ ಪಾವಂಜೆ, ಪ್ರಾಂತ ಪ್ರಮುಖರು ಶಿವಾನಂದ ರೈ, ಜಿಲ್ಲಾ ಪ್ರಮುಖರಾದ ಸುಬ್ರಹ್ಮಣ್ಯ ಭಟ್‌ ಮತ್ತಿತರ ಜಿಲ್ಲಾ ಪ್ರಮುಖರು ಭಾಗವಹಿಸಿದ್ದರು.
icon

(7 / 8)

ಪ್ರಾಂತ್ಯ ಸಂಘಟನಾ ಪ್ರಮುಖರಾದ ಹರೀಶ್‌ ಕೋಟ್ಯಾನ್‌, ಜಿಲ್ಲಾ ಸಂಚಾಲಕ ನಾರಾಯಣ ಪಾವಂಜೆ, ಪ್ರಾಂತ ಪ್ರಮುಖರು ಶಿವಾನಂದ ರೈ, ಜಿಲ್ಲಾ ಪ್ರಮುಖರಾದ ಸುಬ್ರಹ್ಮಣ್ಯ ಭಟ್‌ ಮತ್ತಿತರ ಜಿಲ್ಲಾ ಪ್ರಮುಖರು ಭಾಗವಹಿಸಿದ್ದರು.

ಯೋಗ ವೀಕ್ಷಿಸಲೆಂದು ಸ್ಥಳೀಯ ಯೋಗಾಸಕ್ತರು ಸಹ ಪಾಲ್ಗೊಂಡಿದ್ದರು.
icon

(8 / 8)

ಯೋಗ ವೀಕ್ಷಿಸಲೆಂದು ಸ್ಥಳೀಯ ಯೋಗಾಸಕ್ತರು ಸಹ ಪಾಲ್ಗೊಂಡಿದ್ದರು.


ಇತರ ಗ್ಯಾಲರಿಗಳು