Voting Awareness: ಲಾಲ್ಬಾಗ್ ಉದ್ಯಾನವನದಲ್ಲಿ ಮತದಾನ ಜಾಗೃತಿ ಕುರಿತು ಜಾಥ, ಬೀದಿ ನಾಟಕ
- ವಿಧಾನಸಭಾ ಚುನಾವಣೆಯ (Karnataka Assembly Elections) ಅಂಗವಾಗಿ ಲಾಲ್ಬಾಗ್ ಉದ್ಯಾನವನದಲ್ಲಿ ಮತದಾನ ಜಾಗೃತಿ (Voting Awareness) ಕುರಿತು ಜಾಥ, ಬೀದಿ ನಾಟಕ ಹಮ್ಮಿಕೊಳ್ಳಲಾಗಿದ್ದು, ಮೇ 10 ರಂದು ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸಲಾಯಿತು.
- ವಿಧಾನಸಭಾ ಚುನಾವಣೆಯ (Karnataka Assembly Elections) ಅಂಗವಾಗಿ ಲಾಲ್ಬಾಗ್ ಉದ್ಯಾನವನದಲ್ಲಿ ಮತದಾನ ಜಾಗೃತಿ (Voting Awareness) ಕುರಿತು ಜಾಥ, ಬೀದಿ ನಾಟಕ ಹಮ್ಮಿಕೊಳ್ಳಲಾಗಿದ್ದು, ಮೇ 10 ರಂದು ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸಲಾಯಿತು.
(1 / 5)
ವಿಧಾನಸಭಾ ಚುನಾವಣೆಯ ಅಂಗವಾಗಿ ದಕ್ಷಿಣ ವಲಯದ ಲಾಲ್ಬಾಗ್ ಪೂರ್ವ ದ್ವಾರದ ಬಳಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥ ಕಾರ್ಯಕ್ರಮಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹಾಗೂ ವಲಯ ಆಯುಕ್ತ ಜಯರಾಮ್ ರಾಯಪುರ ಚಾಲನೆ ನೀಡಿದರು.
(2 / 5)
ಲಾಲ್ಬಾಗ್ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಬಂದಂತಹ ನಾಗರಿಕರಲ್ಲಿ ಮತದಾನದ ದಿನವಾದ ಮೇ 10 ರಂದು ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸಲಾಯಿತು. ಜೊತೆಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿಲಾಯಿತು.
(3 / 5)
ಈ ವೇಳೆ ವಲಯ ಜಂಟಿ ಆಯುಕ್ತ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ಜಗದೀಶ್ ಕೆ. ನಾಯಕ್, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಉಪ ಆಯುಕ್ತೆ ಲಕ್ಷ್ಮೀ ದೇವಿ, ಕಂದಾಯ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
(4 / 5)
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಾಸ್ಯ ನಟರಾದ ರಮಾನಂದರವರ ಗೆಜ್ಜೆ ಹೆಜ್ಜೆ ರಂಗತಂಡದಿಂದ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಇತರ ಗ್ಯಾಲರಿಗಳು