Karnataka Budget 2023: ಬಜೆಟ್ ಪ್ರತಿ ಪಡೆದ ಸಿಎಂ ಬೊಮ್ಮಾಯಿ; ಬಜೆಟ್ ಮಂಡನೆಗೆ ಮುನ್ನ ದೇಗುಲ ದರ್ಶನ- ಫೋಟೋಸ್ ಇಲ್ಲಿವೆ
Karnataka Budget 2023: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ 2023-24ರ ಪ್ರತಿಯನ್ನು ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅದರ ಸಚಿತ್ರ ವರದಿ ಇಲ್ಲಿದೆ.
(1 / 5)
ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
(2 / 5)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24 ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಬೆಂಗಳೂರಿನ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
(4 / 5)
ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನದಲ್ಲಿ ಶ್ರೀಕಂಠ ದೇವರಿಗೆ ವಿಶೇಷ ಪೂಜೆ ಮಾಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇತರ ಗ್ಯಾಲರಿಗಳು