Karnataka Budget 2024: ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತ; ಕಂದಾಯ ಇಲಾಖೆಯಿಂದ ಬಜೆಟ್ನಲ್ಲಿ ಸಿಕ್ಕಿದ್ದೇನು?
- Karnataka Budget 2024: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದರೂ, ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಲವು ಕ್ರಮ ಕೈಗೊಂಡಿದೆ.
- Karnataka Budget 2024: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದರೂ, ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಲವು ಕ್ರಮ ಕೈಗೊಂಡಿದೆ.
(1 / 8)
2023-24 ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ರೈತರಿಗೆ ತುಸು ನೆಮ್ಮದಿ ನೀಡಲು NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ 3 ಮೆಮೊರಾಂಡಮ್ಗಳನ್ನು ಸಲ್ಲಿಸಿದೆ. ರಾಜ್ಯದ ಈ ಬೇಡಿಕೆಗೆ ಕೇಂದ್ರ ಸರ್ಕಾರವು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ. ಆದಾಗ್ಯೂ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಅದರ ವಿವರ ಇಲ್ಲಿದೆ.
(2 / 8)
• ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಬರ ಉಪಶಮನ ಕ್ರಮ
(6 / 8)
33.19 ಲಕ್ಷ ರೈತರಿಗೆ ತಲಾ 2,000 ರೂ.ಗಳವರೆಗೆ ಇನ್ಪುಟ್ ಸಬ್ಸಿಡಿ 629 ಕೋಟಿ ರೂ. ಅನುದಾನವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.
(7 / 8)
ಸಣ್ಣ ನೀರಾವರಿ ಇಲಾಖೆಯ ಮೂಲಕ 100 ಕೋಟಿ ರೂ.ಗಳ ವೆಚ್ಚದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಇತರ ಗ್ಯಾಲರಿಗಳು