ಬೆಲೆ ಏರಿಕೆ ವಿರುದ್ದ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್‌ ಭಾರೀ ಪ್ರತಿಭಟನೆ, ಸಿಲೆಂಡರ್‌ ಹೊತ್ತ ಡಿಕೆಶಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬೆಲೆ ಏರಿಕೆ ವಿರುದ್ದ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್‌ ಭಾರೀ ಪ್ರತಿಭಟನೆ, ಸಿಲೆಂಡರ್‌ ಹೊತ್ತ ಡಿಕೆಶಿ

ಬೆಲೆ ಏರಿಕೆ ವಿರುದ್ದ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್‌ ಭಾರೀ ಪ್ರತಿಭಟನೆ, ಸಿಲೆಂಡರ್‌ ಹೊತ್ತ ಡಿಕೆಶಿ

  • ಕೇಂದ್ರ ಸರ್ಕಾರ ಸಿಲೆಂಡರ್‌ ದರ ಏರಿಸಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್‌ನಿಂದ ಪ್ರತಿಭಟನಾ ಸಭೆ ನಡೆಯಿತು. ಸಿಎಂ, ಡಿಸಿಎಂ, ಸಚಿವರ ಸಹಿತ ಪ್ರಮುಖರು ಭಾಗಿಯಾದರು.

ಕೇಂದ್ರ ಸರ್ಕಾರದ ಬೆಲೆ‌ ಏರಿಕೆ ನೀತಿ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್‌ ಸಿಲೆಂಡರ್‌ ಹೊತ್ತು ಗಮನಸೆಳೆದರು.
icon

(1 / 6)

ಕೇಂದ್ರ ಸರ್ಕಾರದ ಬೆಲೆ‌ ಏರಿಕೆ ನೀತಿ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್‌ ಸಿಲೆಂಡರ್‌ ಹೊತ್ತು ಗಮನಸೆಳೆದರು.

ಎನ್‌ಡಿಎ ಕೂಟದ ಆಂತರಿಕ ಜಗಳ, ನಾಯಕತ್ವದ ಕೊರತೆಯನ್ನು ಮುಚ್ಚಿಡಲು ಅವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ. ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎನ್ನುವ ಘೋಷಣೆಯನ್ನು ಕೂಗಲಾಯಿತು.
icon

(2 / 6)

ಎನ್‌ಡಿಎ ಕೂಟದ ಆಂತರಿಕ ಜಗಳ, ನಾಯಕತ್ವದ ಕೊರತೆಯನ್ನು ಮುಚ್ಚಿಡಲು ಅವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ. ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎನ್ನುವ ಘೋಷಣೆಯನ್ನು ಕೂಗಲಾಯಿತು.

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದರು,
icon

(3 / 6)

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದರು,

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆ.‌ ಸಿಮೆಂಟ್, ಕಬ್ಬಿಣ, ಎಣ್ಣೆ, ಟೂಥ್‌ಪೇಸ್ಟ್‌‌‌, ಮೊಟ್ಟೆ ಹೀಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಬಿಜೆಪಿ. ಚಿನ್ನದ ಬೆಲೆ 90,000 ರೂ. ಗಡಿ ದಾಟಿದ್ದು, ಕಳೆದ 11 ವರ್ಷಗಳಿಂದ ಮಧ್ಯಮ ವರ್ಗದ ಹೆಣ್ಣುಮಕ್ಕಳು ಚಿನ್ನ ಧರಿಸಲಾಗುತ್ತಿಲ್ಲ. ಹೀಗಾಗಿ ಜನಾಕ್ರೋಶ ಬಿಜೆಪಿ ಸರ್ಕಾರದ ವಿರುದ್ಧವೇ ಆಗಬೇಕಿದೆ ಎಂದವರು ಡಿಕೆ ಶಿವಕುಮಾರ್‌.
icon

(4 / 6)

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆ.‌ ಸಿಮೆಂಟ್, ಕಬ್ಬಿಣ, ಎಣ್ಣೆ, ಟೂಥ್‌ಪೇಸ್ಟ್‌‌‌, ಮೊಟ್ಟೆ ಹೀಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಬಿಜೆಪಿ. ಚಿನ್ನದ ಬೆಲೆ 90,000 ರೂ. ಗಡಿ ದಾಟಿದ್ದು, ಕಳೆದ 11 ವರ್ಷಗಳಿಂದ ಮಧ್ಯಮ ವರ್ಗದ ಹೆಣ್ಣುಮಕ್ಕಳು ಚಿನ್ನ ಧರಿಸಲಾಗುತ್ತಿಲ್ಲ. ಹೀಗಾಗಿ ಜನಾಕ್ರೋಶ ಬಿಜೆಪಿ ಸರ್ಕಾರದ ವಿರುದ್ಧವೇ ಆಗಬೇಕಿದೆ ಎಂದವರು ಡಿಕೆ ಶಿವಕುಮಾರ್‌.

ಭ್ರಷ್ಟ ಬಿಜೆಪಿ ವಿರುದ್ಧ ಹೋರಾಟವನ್ನು ಮಾಡಿ, 2028ರಲ್ಲಿ ಮತ್ತೆ 'ನಿಮ್ಮ ಸರ್ಕಾರ' ಅಧಿಕಾರಕ್ಕೆ ಬರಲಿದೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾ ಸಭೆಯಲ್ಲಿ ಘೋಷಿಸಿದರು.
icon

(5 / 6)

ಭ್ರಷ್ಟ ಬಿಜೆಪಿ ವಿರುದ್ಧ ಹೋರಾಟವನ್ನು ಮಾಡಿ, 2028ರಲ್ಲಿ ಮತ್ತೆ 'ನಿಮ್ಮ ಸರ್ಕಾರ' ಅಧಿಕಾರಕ್ಕೆ ಬರಲಿದೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾ ಸಭೆಯಲ್ಲಿ ಘೋಷಿಸಿದರು.

ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಉತ್ತಮ ಆಡಳಿತವನ್ನು ನೀಡುತ್ತಿದೆ.‌ ನಮ್ಮದು ರೈತ ಪರ, ಕಾರ್ಮಿಕ ಪರ, ಎಲ್ಲಾ ವರ್ಗದ ಜನರ ಪರ ಇರುವ ಸರ್ಕಾರ. ಕಾಮಾಲೆ ಕಣ್ಣಲ್ಲಿ ನೋಡುವುದು ಬಿಟ್ಟು, ಆತ್ಮಸಾಕ್ಷಿಯ ಒಳಗಣ್ಣನ್ನು ತೆರೆದು ನೋಡಿ; ನಮ್ಮ ಸರ್ಕಾರದ ಪ್ರತಿಯೊಂದು ಕೆಲಸಗಳೂ ಅಭಿವೃದ್ಧಿ ಪರವಾಗಿದೆ. ಬಿಜೆಪಿಯ ಬೆಲೆ ಏರಿಕೆ ನೀತಿಯನ್ನು ತಡೆದು, ಜನರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗುತ್ತಿವೆ ಎಂದು ಬಿಜೆಪಿ ವಿರುದ್ದ ಟೀಕಾ ಪ್ರಹಾರವನ್ನು ನಡೆಸಿದರು.
icon

(6 / 6)

ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಉತ್ತಮ ಆಡಳಿತವನ್ನು ನೀಡುತ್ತಿದೆ.‌ ನಮ್ಮದು ರೈತ ಪರ, ಕಾರ್ಮಿಕ ಪರ, ಎಲ್ಲಾ ವರ್ಗದ ಜನರ ಪರ ಇರುವ ಸರ್ಕಾರ. ಕಾಮಾಲೆ ಕಣ್ಣಲ್ಲಿ ನೋಡುವುದು ಬಿಟ್ಟು, ಆತ್ಮಸಾಕ್ಷಿಯ ಒಳಗಣ್ಣನ್ನು ತೆರೆದು ನೋಡಿ; ನಮ್ಮ ಸರ್ಕಾರದ ಪ್ರತಿಯೊಂದು ಕೆಲಸಗಳೂ ಅಭಿವೃದ್ಧಿ ಪರವಾಗಿದೆ. ಬಿಜೆಪಿಯ ಬೆಲೆ ಏರಿಕೆ ನೀತಿಯನ್ನು ತಡೆದು, ಜನರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗುತ್ತಿವೆ ಎಂದು ಬಿಜೆಪಿ ವಿರುದ್ದ ಟೀಕಾ ಪ್ರಹಾರವನ್ನು ನಡೆಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು