ಮಲೈ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ, ಬಹುತೇಕ ಸಚಿವರು ಭಾಗಿ
ಬೆಂಗಳೂರಿನಿಂದ ಹೊರಗೆ ಸಚಿವ ಸಂಪುಟ ವಿಶೇಷ ಸಭೆಯು ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿತು.
(1 / 7)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಲೈ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಸಚಿವ ಸಂಪುಟ ವಿಶೇಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗಿಯಾದರು.
(2 / 7)
ಈ ಹಿಂದೆ ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯು ನಡೆದಿತ್ತು. ಈ ಬಾರಿ ಮಲೈಮಹದೇಶ್ವರ ಬೆಟ್ಟದಲ್ಲಿ ಸಭೆ ಆಯೋಜಿಸಿರುವುದು ವಿಶೇಷ.
(3 / 7)
ಕಲಬುರಗಿಯಲ್ಲಿ ಕಳೆದ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು. ಈ ಬಾರಿ ಕರ್ನಾಟಕದ ಹಲವು ವಿಷಯಗಳ ಕುರಿತು ಸಚಿವ ಸಂಪುಟ ಸಭೆಯು ತೀರ್ಮಾನ ಕೈಗೊಳ್ಳಲಿದೆ.
(4 / 7)
ವಿಶೇಷವಾಗಿ ಚಾಮರಾಜನಗರ ಭಾಗದ ಬಹುದಿನದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆ ಕೈಗೊಳ್ಳುವ ನಿರೀಕ್ಷಯಿದೆ.
(5 / 7)
ಪ್ರಮುಖ ಪ್ರವಾಸಿ ತಾಣವೂ ಆಗಿರುವ ಧಾರ್ಮಿ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಅಭಿವೃದ್ದಿಗೆ ಸಂಬಂಧಿಸಿಯೂ ಬೇಡಿಕೆಗಳಿವೆ.
(6 / 7)
ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಮೈಸೂರು ಜಿಲ್ಲೆಯ ಎಚ್ಡಿಕೋಟೆ ತಾಲ್ಲೂಕಿನ ವಿವೇಕಾನಂದ ಗಿರಿಜನ ಶಿಕ್ಷಣ ಸಂಸ್ಥೆಯಲ್ಲೂ ಇದೇ ರೀತಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು.
ಇತರ ಗ್ಯಾಲರಿಗಳು









