ಮತ್ತೆ ಉದಯಿಸಿದ ಕಾಂಗ್ರೆಸ್, ಕುಮಾರಸ್ವಾಮಿ ಬಾಯಿಗೆ ಸಕ್ಕರೆ ಹಾಕಿದ ಮಂಡ್ಯ; ಮೈಸೂರು ಭಾಗದಲ್ಲಿ ಸೋಲು-ಗೆಲುವು ಯಾರಿಗೆ?
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮತ್ತೆ ಉದಯಿಸಿದ ಕಾಂಗ್ರೆಸ್, ಕುಮಾರಸ್ವಾಮಿ ಬಾಯಿಗೆ ಸಕ್ಕರೆ ಹಾಕಿದ ಮಂಡ್ಯ; ಮೈಸೂರು ಭಾಗದಲ್ಲಿ ಸೋಲು-ಗೆಲುವು ಯಾರಿಗೆ?

ಮತ್ತೆ ಉದಯಿಸಿದ ಕಾಂಗ್ರೆಸ್, ಕುಮಾರಸ್ವಾಮಿ ಬಾಯಿಗೆ ಸಕ್ಕರೆ ಹಾಕಿದ ಮಂಡ್ಯ; ಮೈಸೂರು ಭಾಗದಲ್ಲಿ ಸೋಲು-ಗೆಲುವು ಯಾರಿಗೆ?

  • Lok Sabha Election 2024 Result : ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತೆ ಉದಯಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಒಂದೂ ಕ್ಷೇತ್ರವನ್ನೂ ಗೆದ್ದಿರಲಿಲ್ಲ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ನ ಅಭ್ಯರ್ಥಿ ಬಿಎನ್​ ಚಂದ್ರಪ್ಪ ಅವರು ಸೋಲು ಕಂಡಿದ್ದಾರೆ.
icon

(1 / 7)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ನ ಅಭ್ಯರ್ಥಿ ಬಿಎನ್​ ಚಂದ್ರಪ್ಪ ಅವರು ಸೋಲು ಕಂಡಿದ್ದಾರೆ.

ಕಳೆದ ಬಾರಿ ಬಿಜೆಪಿ ಜಯಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ಸಚಿವನ ಪುತ್ರ ಸುನಿಲ್ ಬೋಸ್ ಅವರು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ವಿರುದ್ಧ ಗೆದ್ದು ಬೀಗಿದ್ದಾರೆ.
icon

(2 / 7)

ಕಳೆದ ಬಾರಿ ಬಿಜೆಪಿ ಜಯಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ಸಚಿವನ ಪುತ್ರ ಸುನಿಲ್ ಬೋಸ್ ಅವರು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ವಿರುದ್ಧ ಗೆದ್ದು ಬೀಗಿದ್ದಾರೆ.

ಎರಡು ದಶಕಗಳ ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​​ 20 ವರ್ಷಗಳ ನಂತರ ಸೋಲು ಕಂಡಿದೆ. ಪೆನ್​ಡ್ರೈವ್​ ಕೇಸ್​ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ ಶ್ರೇಯಸ್ ಪಟೇಲ್ ಎದುರು ಸೋತಿದ್ದಾರೆ.
icon

(3 / 7)

ಎರಡು ದಶಕಗಳ ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​​ 20 ವರ್ಷಗಳ ನಂತರ ಸೋಲು ಕಂಡಿದೆ. ಪೆನ್​ಡ್ರೈವ್​ ಕೇಸ್​ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ ಶ್ರೇಯಸ್ ಪಟೇಲ್ ಎದುರು ಸೋತಿದ್ದಾರೆ.

ದಾವಣೆಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದಿದ್ದಾರೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಿಎಂ ಸಿದ್ಧೇಶ್ವರ ಅವರು ಗೆದ್ದಿದ್ದರು. ಈ ಬಾರಿ ಅವರ ಪತ್ನಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಗಾಯತ್ರಿ ಸಿದ್ಧೇಶ್ವರ ಅವರು ಗೆಲ್ಲಲು ವಿಫಲರಾದರು.
icon

(4 / 7)

ದಾವಣೆಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದಿದ್ದಾರೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಿಎಂ ಸಿದ್ಧೇಶ್ವರ ಅವರು ಗೆದ್ದಿದ್ದರು. ಈ ಬಾರಿ ಅವರ ಪತ್ನಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಗಾಯತ್ರಿ ಸಿದ್ಧೇಶ್ವರ ಅವರು ಗೆಲ್ಲಲು ವಿಫಲರಾದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದ ಪ್ರತಾಪ್ ಸಿಂಹ ಅವರನ್ನು ಕೈಬಿಟ್ಟು ರಾಜವಂಶಸ್ಥ ಯದುವೀರ್​ ಒಡೆಯರ್​​ಗೆ ಟಿಕೆಟ್ ನೀಡಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಮತ್ತು ಯದುವೀರ್​​ ನಡುವಿನ ಗೆಲುವಿನ ಸಾಧ್ಯತೆ 50-50 ಇತ್ತು.ಕೊನೆಗೆ ಯಧುವೀರ್​​ ಗೆದ್ದು ಬೀಗುವಲ್ಲಿ ಯಶಸ್ವಿಯಾಗಿದ್ದಾರೆ.
icon

(5 / 7)

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದ ಪ್ರತಾಪ್ ಸಿಂಹ ಅವರನ್ನು ಕೈಬಿಟ್ಟು ರಾಜವಂಶಸ್ಥ ಯದುವೀರ್​ ಒಡೆಯರ್​​ಗೆ ಟಿಕೆಟ್ ನೀಡಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಮತ್ತು ಯದುವೀರ್​​ ನಡುವಿನ ಗೆಲುವಿನ ಸಾಧ್ಯತೆ 50-50 ಇತ್ತು.ಕೊನೆಗೆ ಯಧುವೀರ್​​ ಗೆದ್ದು ಬೀಗುವಲ್ಲಿ ಯಶಸ್ವಿಯಾಗಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ವಿ ಸೋಮಣ್ಣ, ವಲಸೆ ಹೋಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್​ಪಿ ಮುದ್ದಹನುಮೇಗೌಡ ಅವರನ್ನು ಮಣಿಸಿದ್ದಾರೆ.
icon

(6 / 7)

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ವಿ ಸೋಮಣ್ಣ, ವಲಸೆ ಹೋಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್​ಪಿ ಮುದ್ದಹನುಮೇಗೌಡ ಅವರನ್ನು ಮಣಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸಿ ಜಯಿಸಿದ್ದ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯನ್ನೂ ಕಣಕ್ಕಿಳಿದು ಗೆದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ನಿಖಿಲ್ ಬೇಡವೆಂದು ಸೂಚಿಸಿತ್ತು.
icon

(7 / 7)

ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸಿ ಜಯಿಸಿದ್ದ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯನ್ನೂ ಕಣಕ್ಕಿಳಿದು ಗೆದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ನಿಖಿಲ್ ಬೇಡವೆಂದು ಸೂಚಿಸಿತ್ತು.


ಇತರ ಗ್ಯಾಲರಿಗಳು