Landslide in Charmadi: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ, ವಾಹನ ಸಂಚಾರದಲ್ಲಿ ವ್ಯತ್ಯಯ photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Landslide In Charmadi: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ, ವಾಹನ ಸಂಚಾರದಲ್ಲಿ ವ್ಯತ್ಯಯ Photos

Landslide in Charmadi: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ, ವಾಹನ ಸಂಚಾರದಲ್ಲಿ ವ್ಯತ್ಯಯ photos

  • Coastal Rain Updates ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ಅಲ್ಲಿನ ಚಿತ್ರಣ ಹೀಗಿದೆ.
  • ಚಿತ್ರ- ಮಾಹಿತಿ: ಹರೀಶ ಮಾಂಬಾಡಿ, ಮಂಗಳೂರು

ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಮರಗಳು ಬಿದ್ದು ವಾಹನ ಸಂಚಾರ ಬಂದ್‌ ಆಗಿದೆ.
icon

(1 / 6)

ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಮರಗಳು ಬಿದ್ದು ವಾಹನ ಸಂಚಾರ ಬಂದ್‌ ಆಗಿದೆ.

ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಪೊಲೀಸ್‌ ಗಸ್ತು ಹಾಕಲಾಗಿದೆ. 
icon

(2 / 6)

ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಪೊಲೀಸ್‌ ಗಸ್ತು ಹಾಕಲಾಗಿದೆ. 

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ. 
icon

(3 / 6)

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ. 

ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿರುವುದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡು ಬರುತ್ತಿದೆ. 
icon

(4 / 6)

ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿರುವುದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡು ಬರುತ್ತಿದೆ. 

ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು ವಾಹನಗಳು ಅಲ್ಲಲ್ಲಿ ಸಾಲುಗಟ್ಟಿ ನಿಂತಿರುವುದು ಸಾಮಾನ್ಯವಾಗಿದೆ.
icon

(5 / 6)

ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು ವಾಹನಗಳು ಅಲ್ಲಲ್ಲಿ ಸಾಲುಗಟ್ಟಿ ನಿಂತಿರುವುದು ಸಾಮಾನ್ಯವಾಗಿದೆ.

ದಕ್ಷಿಣ ಕನ್ನಡ ಕಡೆಯಿಂದ ಬರುವ ವಾಹನಗಳನ್ನೂ ಕೂಡ ತಡೆಯಲಾಗುತ್ತಿದೆ. ಇದರಿಂದ ಹೆದ್ದಾರಿಯ ಎರಡೂ ಕಡೆಗಳಲ್ಲೂ ಸಂಚಾರ ದಟ್ಟಣೆಯಿದೆ, ವಾಹನ ಸಂಚಾರ ಸುಗಮವಾಗಲು ಇನ್ನು ಸಮಯ ಬೇಕಾಗಬಹುದು.
icon

(6 / 6)

ದಕ್ಷಿಣ ಕನ್ನಡ ಕಡೆಯಿಂದ ಬರುವ ವಾಹನಗಳನ್ನೂ ಕೂಡ ತಡೆಯಲಾಗುತ್ತಿದೆ. ಇದರಿಂದ ಹೆದ್ದಾರಿಯ ಎರಡೂ ಕಡೆಗಳಲ್ಲೂ ಸಂಚಾರ ದಟ್ಟಣೆಯಿದೆ, ವಾಹನ ಸಂಚಾರ ಸುಗಮವಾಗಲು ಇನ್ನು ಸಮಯ ಬೇಕಾಗಬಹುದು.


ಇತರ ಗ್ಯಾಲರಿಗಳು