ಕರ್ನಾಟಕದ ನಾನಾ ಭಾಗಗಳಲ್ಲಿ ಸಮಾಜ ಸುಧಾರಕ ಬಸವಣ್ಣಗೆ ವಚನಗಳ ಗೌರವ: ಬಸವ ಜಯಂತಿ ಆಚರಣೆ ಸಂಭ್ರಮ ಹೀಗಿತ್ತು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದ ನಾನಾ ಭಾಗಗಳಲ್ಲಿ ಸಮಾಜ ಸುಧಾರಕ ಬಸವಣ್ಣಗೆ ವಚನಗಳ ಗೌರವ: ಬಸವ ಜಯಂತಿ ಆಚರಣೆ ಸಂಭ್ರಮ ಹೀಗಿತ್ತು

ಕರ್ನಾಟಕದ ನಾನಾ ಭಾಗಗಳಲ್ಲಿ ಸಮಾಜ ಸುಧಾರಕ ಬಸವಣ್ಣಗೆ ವಚನಗಳ ಗೌರವ: ಬಸವ ಜಯಂತಿ ಆಚರಣೆ ಸಂಭ್ರಮ ಹೀಗಿತ್ತು

ಕರ್ನಾಟಕದವರೇ ಆದ ಹನ್ನೆರಡನೇ ಶತಮಾನದ ಸಾಂಸ್ಕೃತಿಕ ನಾಯಕ ಬಸವಣ್ಣಗೆ ಇಂದು ಗೌರವ. ಬಸವಜಯಂತಿಯನ್ನು ಕರ್ನಾಟಕದ ನಾನಾ ಭಾಗಗಳಲ್ಲಿ ಆಚರಿಸಲಾಯಿತು. ಅದರ ಚಿತ್ರನೋಟ ಇಲ್ಲಿದೆ.

ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಅಂಗವಾಗಿ  ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಅವರೇ ಟ್ರಾಕ್ಟರ್‌ ಚಲಾಯಿಸಿದರು.
icon

(1 / 10)

ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಅವರೇ ಟ್ರಾಕ್ಟರ್‌ ಚಲಾಯಿಸಿದರು.

 ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನಡೆದ ಅದ್ದೂರಿ ಬಸವಜಯಂತಿ ಶೋಭಾಯಾತ್ರೆ ಗಮನ ಸೆಳೆಯಿತು.
icon

(2 / 10)

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನಡೆದ ಅದ್ದೂರಿ ಬಸವಜಯಂತಿ ಶೋಭಾಯಾತ್ರೆ ಗಮನ ಸೆಳೆಯಿತು.

ಕೂಡಲಸಂಗಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ-ಬಾಗಲಕೋಟೆ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಹಾಗೂ ಅನುಭವ ಮಂಟಪ - ಬಸವಾದಿ ಶರಣರ ವೈಭವ 2025 ಕಾರ್ಯಕ್ರಮ ಉದ್ಘಾಟನೆ ಹಾಗೂ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
icon

(3 / 10)

ಕೂಡಲಸಂಗಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ-ಬಾಗಲಕೋಟೆ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಹಾಗೂ ಅನುಭವ ಮಂಟಪ - ಬಸವಾದಿ ಶರಣರ ವೈಭವ 2025 ಕಾರ್ಯಕ್ರಮ ಉದ್ಘಾಟನೆ ಹಾಗೂ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ದೆಹಲಿಯ ಸಂಸತ್‌ ಭವನದಲ್ಲಿ ಜರುಗಿದ ಶ್ರೀ ಬಸವೇಶ್ವರರ ಜಯಂತಿ  ಕಾರ್ಯಕ್ರಮದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತತಿರರು ಭಾಗಿಯಾದರು,
icon

(4 / 10)

ದೆಹಲಿಯ ಸಂಸತ್‌ ಭವನದಲ್ಲಿ ಜರುಗಿದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತತಿರರು ಭಾಗಿಯಾದರು,

ರಾಣೆಬೆನ್ನೂರು ನಗರದ ದೊಡ್ಡಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಿಂದ  ಬಸವೇಶ್ವರ ಮೂರ್ತಿ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದೊಂದಿಗೆ ಎತ್ತಿನ ಮೆರವಣಿಗೆ ಮತ್ತು ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.
icon

(5 / 10)

ರಾಣೆಬೆನ್ನೂರು ನಗರದ ದೊಡ್ಡಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಿಂದ ಬಸವೇಶ್ವರ ಮೂರ್ತಿ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದೊಂದಿಗೆ ಎತ್ತಿನ ಮೆರವಣಿಗೆ ಮತ್ತು ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ವಿಶ್ವಗುರು ಶ್ರೀ ಮಹಾತ್ಮಾ ಬಸವೇಶ್ವರರ 75ನೇ ಜಾತ್ರಾ ಅಮೃತ ಮಹೋತ್ಸವ ಪ್ರಯುಕ್ತ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಸಮಿತಿ ವತಿಯಿಂದ ಏರ್ಪಡಿಸಿದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರಮುಖರು.
icon

(6 / 10)

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ವಿಶ್ವಗುರು ಶ್ರೀ ಮಹಾತ್ಮಾ ಬಸವೇಶ್ವರರ 75ನೇ ಜಾತ್ರಾ ಅಮೃತ ಮಹೋತ್ಸವ ಪ್ರಯುಕ್ತ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಸಮಿತಿ ವತಿಯಿಂದ ಏರ್ಪಡಿಸಿದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರಮುಖರು.

ಮೈಸೂರಿನಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಜ್ಜಿಗೆಯನ್ನು ವಿತರಿಸಿದರು.
icon

(7 / 10)

ಮೈಸೂರಿನಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಜ್ಜಿಗೆಯನ್ನು ವಿತರಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಬಸವ ಜಯಂತಿಯ ಅಂಗವಾಗಿ ವಿಶ್ವಗುರು  ಶ್ರೀ ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಭವ್ಯ ಮೆರವಣಿಗೆಯೊಂದಿಗೆ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ 892ನೇ ವಿಶ್ವಗುರು ಮಹಾತ್ಮ ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಾ.ಅಜಯಸಿಂಗ್‌ ಭಾಗಿಯಾದರು.
icon

(8 / 10)

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಬಸವ ಜಯಂತಿಯ ಅಂಗವಾಗಿ ವಿಶ್ವಗುರು ಶ್ರೀ ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಭವ್ಯ ಮೆರವಣಿಗೆಯೊಂದಿಗೆ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ 892ನೇ ವಿಶ್ವಗುರು ಮಹಾತ್ಮ ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಾ.ಅಜಯಸಿಂಗ್‌ ಭಾಗಿಯಾದರು.

ಚಾಮರಾಜನಗರ ಜಿಲ್ಲಾಡಳಿತ ಆವರಣದಲ್ಲಿರುವ ಬಸವಣ್ಣ ರವರ ಪ್ರತಿಮೆ ಪುಷ್ಪ ನಮನ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಸಂಸದ ಸುನೀಲ್‌ ಬೋಸ್‌.
icon

(9 / 10)

ಚಾಮರಾಜನಗರ ಜಿಲ್ಲಾಡಳಿತ ಆವರಣದಲ್ಲಿರುವ ಬಸವಣ್ಣ ರವರ ಪ್ರತಿಮೆ ಪುಷ್ಪ ನಮನ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಸಂಸದ ಸುನೀಲ್‌ ಬೋಸ್‌.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬಸವೇಶ್ವರರ ಮೂರ್ತಿಗೆ ಮಹಿಳೆಯರು, ಮಕ್ಕಳು ಪೂಜೆ ಸಲ್ಲಿಸಿ ಬಸವ ಜಯಂತಿ ಆಚರಿಸಿದರು.
icon

(10 / 10)

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬಸವೇಶ್ವರರ ಮೂರ್ತಿಗೆ ಮಹಿಳೆಯರು, ಮಕ್ಕಳು ಪೂಜೆ ಸಲ್ಲಿಸಿ ಬಸವ ಜಯಂತಿ ಆಚರಿಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು