ಕರ್ನಾಟಕದಲ್ಲಿ ಅರಣ್ಯ ಅಪರಾಧ ನಿಗ್ರಹಕ್ಕೆ ಬರಲಿದೆ ಗರುಡಾಕ್ಷಿ; ಆನ್‌ಲೈನ್‌ ಎಫ್ಐಆರ್ ಪದ್ದತಿ ಜಾರಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದಲ್ಲಿ ಅರಣ್ಯ ಅಪರಾಧ ನಿಗ್ರಹಕ್ಕೆ ಬರಲಿದೆ ಗರುಡಾಕ್ಷಿ; ಆನ್‌ಲೈನ್‌ ಎಫ್ಐಆರ್ ಪದ್ದತಿ ಜಾರಿ

ಕರ್ನಾಟಕದಲ್ಲಿ ಅರಣ್ಯ ಅಪರಾಧ ನಿಗ್ರಹಕ್ಕೆ ಬರಲಿದೆ ಗರುಡಾಕ್ಷಿ; ಆನ್‌ಲೈನ್‌ ಎಫ್ಐಆರ್ ಪದ್ದತಿ ಜಾರಿ

  • ಕರ್ನಾಟಕ ಅರಣ್ಯ ಇಲಾಖೆಯ ಅಪರಾಧ ದಾಖಲೀಕರಣವೂ ಇನ್ನೂ ಹೈಟೆಕ್‌ ಆಗಲಿದೆ. ಇದಕ್ಕಾಗಿ ಗರುಡಾಕ್ಷಿ ಎನ್ನುವ ಆನ್‌ಲೈನ್‌  ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ವನ್ಯಜೀವಿಗಳ ಸಂರಕ್ಷಣೆ ಚಟುವಟಿಕೆ ಹೆಚ್ಚಿದಂತೆ ವನ್ಯಜೀವಿ ಸಂಬಂಧಿತ ಅಪರಾಧ ಪ್ರಕರಣಗಳೂ ದಾಖಲಾಗುತ್ತಲೇ ಇವೆ.ಕರ್ನಾಟಕ ಅರಣ್ಯ ಇಲಾಖೆಯು ಇದಕ್ಕಾಗಿ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ.
icon

(1 / 7)

ಕರ್ನಾಟಕದಲ್ಲಿ ವನ್ಯಜೀವಿಗಳ ಸಂರಕ್ಷಣೆ ಚಟುವಟಿಕೆ ಹೆಚ್ಚಿದಂತೆ ವನ್ಯಜೀವಿ ಸಂಬಂಧಿತ ಅಪರಾಧ ಪ್ರಕರಣಗಳೂ ದಾಖಲಾಗುತ್ತಲೇ ಇವೆ.ಕರ್ನಾಟಕ ಅರಣ್ಯ ಇಲಾಖೆಯು ಇದಕ್ಕಾಗಿ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ.

ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಅಪರಾಧ ನಿಗ್ರಹಿಸಲು ಹಲವಾರು ಸುಧಾರಣಾ ಕ್ರಮಕೈಗೊಂಡಿದ್ದು,, ತಂತ್ರಜ್ಞಾನವನ್ನು ಬಳಕೆ ಮಾಡುವಲ್ಲಿ ಕರ್ನಾಟಕ ಮುಂದೆ ಇದೆ.
icon

(2 / 7)

ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಅಪರಾಧ ನಿಗ್ರಹಿಸಲು ಹಲವಾರು ಸುಧಾರಣಾ ಕ್ರಮಕೈಗೊಂಡಿದ್ದು,, ತಂತ್ರಜ್ಞಾನವನ್ನು ಬಳಕೆ ಮಾಡುವಲ್ಲಿ ಕರ್ನಾಟಕ ಮುಂದೆ ಇದೆ.

 ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ”  ಆನ್ ಲೈನ್ ಎಫ್.ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ.
icon

(3 / 7)

 ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ”  ಆನ್ ಲೈನ್ ಎಫ್.ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ.

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ.  
icon

(4 / 7)

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ.  

ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲಿ ಸಹ ಪ್ರಥಮ ವರ್ತಮಾನ ವರದಿಯನ್ನು (FIR) ಗಳನ್ನು ಆನ್‌ಲೈನ್‌ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಈಶ್ವರ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ  ವೈಲ್ಡ್‌ಲೈಫ್‌ ಟ್ರಸ್ಟ್‌ ಆಫ್‌ ಇಂಡಿಯಾ  (WTI) ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
icon

(5 / 7)

ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲಿ ಸಹ ಪ್ರಥಮ ವರ್ತಮಾನ ವರದಿಯನ್ನು (FIR) ಗಳನ್ನು ಆನ್‌ಲೈನ್‌ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಈಶ್ವರ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ  ವೈಲ್ಡ್‌ಲೈಫ್‌ ಟ್ರಸ್ಟ್‌ ಆಫ್‌ ಇಂಡಿಯಾ  (WTI) ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.

ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ
icon

(6 / 7)

ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ

ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುವುದು.ಗರುಡಾಕ್ಷಿ ಆನ್ ಲೈನ್ ಎಫ್..ಆರ್. ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬಲಿದೆ ಎನ್ನುವ ವಿಶ್ವಾಸ ಅರಣ್ಯ ಸಚಿವರದ್ದು.
icon

(7 / 7)

ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುವುದು.ಗರುಡಾಕ್ಷಿ ಆನ್ ಲೈನ್ ಎಫ್..ಆರ್. ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬಲಿದೆ ಎನ್ನುವ ವಿಶ್ವಾಸ ಅರಣ್ಯ ಸಚಿವರದ್ದು.


ಇತರ ಗ್ಯಾಲರಿಗಳು