ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ Photos

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

  • ಲೋಕಸಭೆಗೆ ನಡೆಲಿರುವ ಚುನಾವಣೆಯಲ್ಲಿ ಕರ್ನಾಟಕದ ಮೊದಲ14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ. ಹೇಗಿದೆ ಕಣ ಚಿತ್ರಣ. ಇಲ್ಲಿದೆ ವಿವರ.  

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ  ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ. 
icon

(1 / 14)

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ  ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ. 

ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ, ಚಿಕ್ಕಮಗಳೂರು-ಉಡುಪಿ ಸಂಸದೆ, ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ದ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ಎಂ.ವಿ.ರಾಜೀವ್‌ಗೌಡ ನಡುವೆ ಸ್ಪರ್ಧೆಯಿದೆ.
icon

(2 / 14)

ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ, ಚಿಕ್ಕಮಗಳೂರು-ಉಡುಪಿ ಸಂಸದೆ, ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ದ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ಎಂ.ವಿ.ರಾಜೀವ್‌ಗೌಡ ನಡುವೆ ಸ್ಪರ್ಧೆಯಿದೆ.

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿರುವ ಬಿಜೆಪಿಯ ಪಿ.ಸಿ.ಮೋಹನ್‌ ಹಾಗೂ ಕಾಂಗ್ರೆಸ್‌ನಿಂದ ಕೇಂದ್ರದ ಮಾಜಿ ಸಚಿವ ರೆಹಮಾನ್‌ ಖಾನ್‌ ಅವರ ಪುತ್ರ ಮನ್ಸೂರ್‌ ಆಲಿ ಖಾನ್‌ ಅವರ ನಡುವೆ ಜಿದ್ದಾಜಿದ್ದಿನ ಕಣ ಜೋರಾಗಿದೆ. 
icon

(3 / 14)

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿರುವ ಬಿಜೆಪಿಯ ಪಿ.ಸಿ.ಮೋಹನ್‌ ಹಾಗೂ ಕಾಂಗ್ರೆಸ್‌ನಿಂದ ಕೇಂದ್ರದ ಮಾಜಿ ಸಚಿವ ರೆಹಮಾನ್‌ ಖಾನ್‌ ಅವರ ಪುತ್ರ ಮನ್ಸೂರ್‌ ಆಲಿ ಖಾನ್‌ ಅವರ ನಡುವೆ ಜಿದ್ದಾಜಿದ್ದಿನ ಕಣ ಜೋರಾಗಿದೆ. 

ಸಾಕಷ್ಟು ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದ ಹಾಗೂ ಕಾಂಗ್ರೆಸ್‌ ನ ಡಿ.ಕೆ.ಸುರೇಶ್‌ ಹಾಗೂ ಹೃದ್ರೋಗ ತಜ್ಞ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರ ನಡುವೆಯೇ ಸ್ಪರ್ಧೆಯಿದೆ.
icon

(4 / 14)

ಸಾಕಷ್ಟು ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದ ಹಾಗೂ ಕಾಂಗ್ರೆಸ್‌ ನ ಡಿ.ಕೆ.ಸುರೇಶ್‌ ಹಾಗೂ ಹೃದ್ರೋಗ ತಜ್ಞ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರ ನಡುವೆಯೇ ಸ್ಪರ್ಧೆಯಿದೆ.

ಮೈಸೂರು- ಕೊಡಗು ಕ್ಷೇತ್ರದಲ್ಲಿ ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಹಾಗೂ ಕಾಂಗ್ರೆಸ್‌ ವಕ್ತಾರ, ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಡುವೆಯೇ ಸ್ಪರ್ಧೆಯಿದೆ.
icon

(5 / 14)

ಮೈಸೂರು- ಕೊಡಗು ಕ್ಷೇತ್ರದಲ್ಲಿ ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಹಾಗೂ ಕಾಂಗ್ರೆಸ್‌ ವಕ್ತಾರ, ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಡುವೆಯೇ ಸ್ಪರ್ಧೆಯಿದೆ.

ಮಂಡ್ಯದಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ವೆಂಕಟರಮಣೇಗೌಡ ಅವರ ಮಧ್ಯೆ ಕದನ ಕುತೂಹಲವಿದೆ.
icon

(6 / 14)

ಮಂಡ್ಯದಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ವೆಂಕಟರಮಣೇಗೌಡ ಅವರ ಮಧ್ಯೆ ಕದನ ಕುತೂಹಲವಿದೆ.

ಚಾಮರಾಜನಗರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರ ಮಧ್ಯೆ ನೇರ ಹಣಾಹಣಿಯೇ ಇದೆ.
icon

(7 / 14)

ಚಾಮರಾಜನಗರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರ ಮಧ್ಯೆ ನೇರ ಹಣಾಹಣಿಯೇ ಇದೆ.

ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಹಾಗೂ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಕಾಂಗ್ರೆಸ್‌ನಿಂದ ಮಾಜಿ ಸಚಿವ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ.
icon

(8 / 14)

ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಹಾಗೂ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಕಾಂಗ್ರೆಸ್‌ನಿಂದ ಮಾಜಿ ಸಚಿವ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ ಬಿಜೆಪಿಯ ಬ್ರಿಜೇಶ್‌ ಚೌಟಾ ಹಾಗೂ ಕಾಂಗ್ರೆಸ್‌ನಿಂದ ಪದ್ಮರಾಜ್‌ ಅವರ ನಡುವೆಯೂ ಕದನ ಕುತೂಹಲ ಜೋರಾಗಿದೆ.
icon

(9 / 14)

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ ಬಿಜೆಪಿಯ ಬ್ರಿಜೇಶ್‌ ಚೌಟಾ ಹಾಗೂ ಕಾಂಗ್ರೆಸ್‌ನಿಂದ ಪದ್ಮರಾಜ್‌ ಅವರ ನಡುವೆಯೂ ಕದನ ಕುತೂಹಲ ಜೋರಾಗಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸಪೂಜಾರಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ನಡುವೆಯೇ ಸ್ಪರ್ಧೆ ಕಂಡು ಬಂದಿದೆ. 
icon

(10 / 14)

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸಪೂಜಾರಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ನಡುವೆಯೇ ಸ್ಪರ್ಧೆ ಕಂಡು ಬಂದಿದೆ. 

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ನ ಅಭ್ಯರ್ಥಿ ಮಲ್ಲೇಶ್‌ ಬಾಬು  ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ, 
icon

(11 / 14)

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ನ ಅಭ್ಯರ್ಥಿ ಮಲ್ಲೇಶ್‌ ಬಾಬು  ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ, 

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮತ್ತು ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ, ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ನಡುವೆಯೇ ಹಣಾಹಣಿಯಿದೆ.
icon

(12 / 14)

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮತ್ತು ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ, ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ನಡುವೆಯೇ ಹಣಾಹಣಿಯಿದೆ.

ತುಮಕೂರಿನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಮಾಜಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರ ನಡುವೆಯೇ ಸ್ಪರ್ಧೆ ಇದೆ.
icon

(13 / 14)

ತುಮಕೂರಿನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಮಾಜಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರ ನಡುವೆಯೇ ಸ್ಪರ್ಧೆ ಇದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಮಾಜಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್,ಚಂದ್ರಪ್ಪ ನಡುವೆಯೇ ನೇರ ಹಣಾಹಣಿಯಿದೆ.
icon

(14 / 14)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಮಾಜಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್,ಚಂದ್ರಪ್ಪ ನಡುವೆಯೇ ನೇರ ಹಣಾಹಣಿಯಿದೆ.


IPL_Entry_Point

ಇತರ ಗ್ಯಾಲರಿಗಳು