ಬಹಳಷ್ಟು ಪ್ರಶ್ನೆಗಳಿವೆ, ಆದರೆ ಉತ್ತರಿಸಲು ಸ್ವಲ್ಪ ಸಮಯ ಬೇಕು; ಹಾರ್ದಿಕ್ ಪಾಂಡ್ಯ ನೋವಿನ ಮಾತು
- Hardik Pandya : ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸೋಲಿಗೆ ಕಾರಣ ಏನೆಂಬುದನ್ನು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಬಹಿರಂಗಪಡಿಸಿದ್ದಾರೆ.
- Hardik Pandya : ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸೋಲಿಗೆ ಕಾರಣ ಏನೆಂಬುದನ್ನು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಬಹಿರಂಗಪಡಿಸಿದ್ದಾರೆ.
(1 / 8)
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 51ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 24 ರನ್ಗಳಿಂದ ಹೀನಾಯ ಸೋಲಿಗೆ ಶರಣಾಯಿತು. ಇದರೊಂದಿಗೆ ಪ್ಲೇಆಫ್ ರೇಸ್ನಿಂದ ಬಹುತೇಕ ಹೊರಬಿದ್ದಿತು. ಆದರೂ ಸಾಸಿವೆ ಕಾಳಿನಷ್ಟು ಅವಕಾಶ ಇದೆ.
(AFP)(2 / 8)
ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕೆಕೆಆರ್, 20 ಓವರ್ಗಳಲ್ಲಿ 169 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಮುಂಬೈ, 18.5 ಓವರ್ಗಳಲ್ಲಿ 145 ರನ್ಗಳಿಗೆ ಆಲೌಟ್ ಆಯಿತು. 2012ರ ಈ ಮೈದಾನದಲ್ಲಿ ಎಂಐ ವಿರುದ್ಧ ಎಂಐ ಗೆದ್ದು ಬೀಗಿತು.
(AFP)(3 / 8)
ಕೆಕೆಆರ್ ವಿರುದ್ಧ ಪಂದ್ಯದ ಸೋಲಿಗೆ ಕಾರಣ ಏನೆಂಬುದನ್ನು ನಾಯಕ ಹಾರ್ದಿಕ್ ಪಾಂಡ್ಯ ವಿವರಿಸಿದ್ದಾರೆ. ರನ್ಚೇಸ್ನಲ್ಲಿ ಸರಿಯಾದ ಜೊತೆಯಾಟ ಬರದಿರುವುದೇ ಸೋಲಿಗೆ ಪ್ರಮುಖ ಕಾರಣವಾಗಿದೆ ಎಂದು ಹಾರ್ದಿಕ್ ಹೇಳಿದ್ದಾರೆ.
(AFP)(4 / 8)
ಬ್ಯಾಟಿಂಗ್ ಇನ್ನಿಂಗ್ಸ್ನಲ್ಲಿ ನಮ್ಮಿಂದ ಸರಿಯಾದ ಜೊತೆಯಾಟ ರೂಪಿಸಲು ಸಾಧ್ಯವಾಗಲಿಲ್ಲ. ವಿಕೆಟ್ಗಳನ್ನು ಕಳೆದುಕೊಳ್ಳುತ್ತಲೇ ಇದ್ದೆವು. ಟಿ20ಗಳಲ್ಲಿ ಜೊತೆಯಾಟ ರೂಪಿಸದಿದ್ದರೆ, ಅದು ತೀವ್ರ ಹಿನ್ನಡೆ ತಂದುಕೊಡುತ್ತದೆ ಎಂದು ಹೇಳಿದ್ದಾರೆ.
(AFP)(5 / 8)
ನನ್ನಲ್ಲಿ ಬಹಳಷ್ಟು ಪ್ರಶ್ನೆಗಳಿವೆ, ಅವುಗಳಿಗೆ ಉತ್ತರಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಸದ್ಯಕ್ಕೆ ಬೇರೇನು ಹೇಳಲು ಸಾಧ್ಯವಿಲ್ಲ ಎಂದು ಸೋಲು ಮತ್ತು ಪ್ಲೇಆಫ್ನಿಂದ ಬಹುತೇಕ ಹೊರಬಿದ್ದಿದ್ದಕ್ಕೆ ಹಾರ್ದಿಕ್ ಪಾಂಡ್ಯ, ಬೇಸರ ವ್ಯಕ್ತಪಡಿಸಿದ್ದಾರೆ.
(AFP)(6 / 8)
ಸೋಲಿಗೆ ಬ್ಯಾಟಿಂಗ್ ವಿಭಾಗವನ್ನು ದೂರಿದ ಹಾರ್ದಿಕ್ ಪಾಂಡ್ಯ, ಬೌಲರ್ಗಳ ಸೇವೆಯನ್ನು ಶ್ಲಾಘಿಸಿದ್ದಾರೆ. ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದರು. ಮೊದಲ ಇನ್ನಿಂಗ್ಸ್ ನಂತರ ವಿಕೆಟ್ ಉತ್ತಮವಾಗಿತ್ತು. ಆದರೆ ಹೋರಾಟದ ಮನೋಭಾವ ತೋರಬೇಕು ಎಂದು ಹೇಳಿದ್ದಾರೆ.
(PTI)(7 / 8)
ನಾನು ಹಿಂದಿನಿಂದಲೂ ಹೇಳುತ್ತಿದ್ದೇನೆ. ಯುದ್ಧ ಭೂಮಿಯಲ್ಲಿ ಹೋರಾಡಬೇಕು. ಕಠಿಣ ದಿನಗಳಂತೆ ಒಳ್ಳೆಯ ದಿನಗಳು ಕೂಡ ಬರುತ್ತವೆ. ಆದರೆ ಎದುರಾಗುವ ಸವಾಲುಗಳು ನಿಮ್ಮನ್ನು ಉತ್ತಮಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ.
(PTI)ಇತರ ಗ್ಯಾಲರಿಗಳು