ಸತತ ಎರಡನೇ ದಿನವೂ ಮಂಗಳೂರಿನಲ್ಲಿ ಕೃತಕ ನೆರೆ, ಹೊಳೆಯಂತಾದ ಪಂಪ್ ವೆಲ್, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ, ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸತತ ಎರಡನೇ ದಿನವೂ ಮಂಗಳೂರಿನಲ್ಲಿ ಕೃತಕ ನೆರೆ, ಹೊಳೆಯಂತಾದ ಪಂಪ್ ವೆಲ್, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ, ಚಿತ್ರನೋಟ

ಸತತ ಎರಡನೇ ದಿನವೂ ಮಂಗಳೂರಿನಲ್ಲಿ ಕೃತಕ ನೆರೆ, ಹೊಳೆಯಂತಾದ ಪಂಪ್ ವೆಲ್, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ, ಚಿತ್ರನೋಟ

ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯೂ ಮಳೆಯಿಂದಾಗಿ ತೊಂದರೆಗಳಾಗಿದ್ದು, ಕುಮಾರಧಾರಾ ನದಿ ಉಕ್ಕಿಹರಿದು, ಸುಬ್ರಹ್ಮಣ್ಯದ ಸ್ನಾನಘಟ್ಟವೂ ಮುಳುಗಿಹೋಯಿತು. ಇಲ್ಲಿದೆ ಒಂದು ಚಿತ್ರನೋಟ.

ಜೂನ್ ಆರಂಭಕ್ಕೆ ಮೊದಲೇ ಸುರಿದ ಮಳೆಯಿಂದಾಗಿ ಮುಂಗಾರುಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳದೇ ಇದ್ದ ದಕ್ಷಿಣ ಕನ್ನಡ ಆಡಳಿತಕ್ಕೀಗ ತಲೆನೋವು ತಂದಿದೆ. ಏರಿಕೆ ಕಂಡ ನೇತ್ರಾವತಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಭಾನುವಾರ 3.6 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ ಸೋಮವಾರ 4.1 ಮೀಟರ್ ಎತ್ತರಕ್ಕೆ ತಲುಪಿತ್ತು.  ಘಟ್ಟ ಪ್ರದೇಶಗಳಲ್ಲಿ ಮಳೆಯಾದರೆ, ಇನ್ನೂ ಏರಿಕೆಯಾಗುವ ನಿರೀಕ್ಷೆ ಇದೆ.
icon

(1 / 8)

ಜೂನ್ ಆರಂಭಕ್ಕೆ ಮೊದಲೇ ಸುರಿದ ಮಳೆಯಿಂದಾಗಿ ಮುಂಗಾರುಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳದೇ ಇದ್ದ ದಕ್ಷಿಣ ಕನ್ನಡ ಆಡಳಿತಕ್ಕೀಗ ತಲೆನೋವು ತಂದಿದೆ. ಏರಿಕೆ ಕಂಡ ನೇತ್ರಾವತಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಭಾನುವಾರ 3.6 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ ಸೋಮವಾರ 4.1 ಮೀಟರ್ ಎತ್ತರಕ್ಕೆ ತಲುಪಿತ್ತು. ಘಟ್ಟ ಪ್ರದೇಶಗಳಲ್ಲಿ ಮಳೆಯಾದರೆ, ಇನ್ನೂ ಏರಿಕೆಯಾಗುವ ನಿರೀಕ್ಷೆ ಇದೆ.

ಮಂಗಳೂರು ಪಂಪ್ ವೆಲ್ ಫ್ಲೈಓವರ್ ಹೊಳೆಯಂತಾಗಿದೆ.
icon

(2 / 8)

ಮಂಗಳೂರು ಪಂಪ್ ವೆಲ್ ಫ್ಲೈಓವರ್ ಹೊಳೆಯಂತಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನಲ್ಲಿ ಏರಿಕೆ ಕಂಡು ಸ್ನಾನಘಟ್ಟ ಮುಳುಗಿರುವುದು
icon

(3 / 8)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನಲ್ಲಿ ಏರಿಕೆ ಕಂಡು ಸ್ನಾನಘಟ್ಟ ಮುಳುಗಿರುವುದು

ಮಂಗಳೂರಿನ ಮಹಾಮಳೆಗೆ ನೀರು ತುಂಬಿದ ರಸ್ತೆಗಳಲ್ಲಿ ವಾಹನಗಳ ಪ್ರಯಾಸದ ಪ್ರಯಾಣ
icon

(4 / 8)

ಮಂಗಳೂರಿನ ಮಹಾಮಳೆಗೆ ನೀರು ತುಂಬಿದ ರಸ್ತೆಗಳಲ್ಲಿ ವಾಹನಗಳ ಪ್ರಯಾಸದ ಪ್ರಯಾಣ

ಬಂಟ್ವಾಳದಲ್ಲಿ 4.1 ಮೀಟರ್ ಎತ್ತರದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ
icon

(5 / 8)

ಬಂಟ್ವಾಳದಲ್ಲಿ 4.1 ಮೀಟರ್ ಎತ್ತರದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಸರುಮಿಶ್ರಿತ ಮಣ್ಣು ಹರಡಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿರುವಂತೆ ಇದೆ.
icon

(6 / 8)

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಸರುಮಿಶ್ರಿತ ಮಣ್ಣು ಹರಡಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿರುವಂತೆ ಇದೆ.

ಮಂಗಳೂರು ಕೊಡಿಯಾಲ್ ಬೈಲ್ ವಸತಿ ಬಡಾವಣೆಗಳ ಮುಂದೆ ನೀರು
icon

(7 / 8)

ಮಂಗಳೂರು ಕೊಡಿಯಾಲ್ ಬೈಲ್ ವಸತಿ ಬಡಾವಣೆಗಳ ಮುಂದೆ ನೀರು

ಮಂಗಳೂರು ಹೊರವಲಯದ ಕಣ್ಣೂರಿನ ಹೆದ್ದಾರಿಯ ಸ್ಥಿತಿ
icon

(8 / 8)

ಮಂಗಳೂರು ಹೊರವಲಯದ ಕಣ್ಣೂರಿನ ಹೆದ್ದಾರಿಯ ಸ್ಥಿತಿ

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು