ಕೊಡಗಿನಿಂದ ಮಂಗಳೂರಿಗೆ ಸಂಪರ್ಕಿಸುವ ಮೈಸೂರು ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿ; ಮೋದಿ ಚಾಲನೆ ಮಾಡಿದ 2 ವರ್ಷ ಬಳಿಕ ಶುರು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೊಡಗಿನಿಂದ ಮಂಗಳೂರಿಗೆ ಸಂಪರ್ಕಿಸುವ ಮೈಸೂರು ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿ; ಮೋದಿ ಚಾಲನೆ ಮಾಡಿದ 2 ವರ್ಷ ಬಳಿಕ ಶುರು

ಕೊಡಗಿನಿಂದ ಮಂಗಳೂರಿಗೆ ಸಂಪರ್ಕಿಸುವ ಮೈಸೂರು ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿ; ಮೋದಿ ಚಾಲನೆ ಮಾಡಿದ 2 ವರ್ಷ ಬಳಿಕ ಶುರು

ಮೈಸೂರಿನಿಂದ ಕೊಡಗು ಹಾಗೂ ಮಂಗಳೂರು ಭಾಗಕ್ಕೆ ಸಂಪರ್ಕ ಕಲ್ಪಿಸುವ ಕುಶಾಲನಗರ ಹೆದ್ದಾರಿಯ ವಿಸ್ತರಣೆ ಯೋಜನೆ ಕಾಮಗಾರಿ ಶುರುವಾಗಿದೆ. ಇದರ ನೋಟ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವ ರಿಂದ 2018ರಲ್ಲೇ ಅನುಮೋದನೆ ಪಡೆದುಕೊಂಡು 2023, ಮಾರ್ಚ್ 12ರಂದು ಚಾಲನೆ ದೊರೆತಿದ್ದು ಕುಶಾಲನಗರ ಚತುಷ್ಪಥ  ಕಾಮಗಾರಿ ಈಗ ಶುರುವಾಗಿದೆ.
icon

(1 / 7)

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವ ರಿಂದ 2018ರಲ್ಲೇ ಅನುಮೋದನೆ ಪಡೆದುಕೊಂಡು 2023, ಮಾರ್ಚ್ 12ರಂದು ಚಾಲನೆ ದೊರೆತಿದ್ದು ಕುಶಾಲನಗರ ಚತುಷ್ಪಥ ಕಾಮಗಾರಿ ಈಗ ಶುರುವಾಗಿದೆ.

ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆ ದಿನವೇ ಗೆಜ್ಜಲಗೆರೆಯಲ್ಲಿ ಪ್ರಧಾನಿ ಮೋದೀ ಅವರಿಂದ ಭೂಮಿ ಪೂಜೆ ಮಾಡಿಸಿದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಯ ಕಾಮಗಾರಿ ಇದೇ ಏಪ್ರಿಲ್ ನಲ್ಲಿ ಆರಂಭವಾಗಿದೆ
icon

(2 / 7)

ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆ ದಿನವೇ ಗೆಜ್ಜಲಗೆರೆಯಲ್ಲಿ ಪ್ರಧಾನಿ ಮೋದೀ ಅವರಿಂದ ಭೂಮಿ ಪೂಜೆ ಮಾಡಿಸಿದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಯ ಕಾಮಗಾರಿ ಇದೇ ಏಪ್ರಿಲ್ ನಲ್ಲಿ ಆರಂಭವಾಗಿದೆ

ಒಟ್ಟು 92 ಕಿಮೀ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ 4 ಪ್ಯಾಕೇಜ್ ಗಳಿದ್ದು ತ್ವರಿತಗತಿಯಲ್ಲಿ ಈ ರಸ್ತೆ ವಿಸ್ತರಣೆ ಕೆಲಸ ಮುಗಿಸುವ ನಿರೀಕ್ಷೆಯಿದೆ.
icon

(3 / 7)

ಒಟ್ಟು 92 ಕಿಮೀ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ 4 ಪ್ಯಾಕೇಜ್ ಗಳಿದ್ದು ತ್ವರಿತಗತಿಯಲ್ಲಿ ಈ ರಸ್ತೆ ವಿಸ್ತರಣೆ ಕೆಲಸ ಮುಗಿಸುವ ನಿರೀಕ್ಷೆಯಿದೆ.

ಪ್ಯಾಕೇಜ್ -5 ರಡಿ ಬಿ ಅಗ್ರಹಾರ( ಶ್ರೀರಂಗಪಟ್ಟಣ) ದಿಂದ ಯಲಚಹಳ್ಳಿ (ಮೈಸೂರು ತಾಲೂಕು) 19 ಕಿಮೀ ಮತ್ತು ಪ್ಯಾಕೇಜ್-3 ಹುಣಸೂರು ತಾಲೂಕಿನ ಬೆಳತ್ತೂರುನಿಂದ ಪಿರಿಯಾಪಟ್ಟಣ ತಾಲೂಕಿನ ಹರವೆಮಲ್ಲಿರಾಜಪಟ್ಟಣ ವರೆಗಿನ 24.10 ಕಿಮೀ) ಕಾಮಗಾರಿ ವೇಗವಾಗಿ ನಡೆಯುತ್ತಿದೆ
icon

(4 / 7)

ಪ್ಯಾಕೇಜ್ -5 ರಡಿ ಬಿ ಅಗ್ರಹಾರ( ಶ್ರೀರಂಗಪಟ್ಟಣ) ದಿಂದ ಯಲಚಹಳ್ಳಿ (ಮೈಸೂರು ತಾಲೂಕು) 19 ಕಿಮೀ ಮತ್ತು ಪ್ಯಾಕೇಜ್-3 ಹುಣಸೂರು ತಾಲೂಕಿನ ಬೆಳತ್ತೂರುನಿಂದ ಪಿರಿಯಾಪಟ್ಟಣ ತಾಲೂಕಿನ ಹರವೆಮಲ್ಲಿರಾಜಪಟ್ಟಣ ವರೆಗಿನ 24.10 ಕಿಮೀ) ಕಾಮಗಾರಿ ವೇಗವಾಗಿ ನಡೆಯುತ್ತಿದೆ

ಪ್ಯಾಕೇಜ್-4 ಸದ್ಯದಲ್ಲೇ ಆರಂಭವಾಗಲಿದ್ದು, ಪ್ಯಾಕೇಜ್-2 ಅರಣ್ಯ ಇಲಾಖೆಯ ಅನುಮತಿಗಾಗಿ ಕಾದಿದೆ. ಇದಕ್ಕೂ ಶೀಘ್ರವೇ ಅನುಮತಿ ಸಿಗುವ ನಿರೀಕ್ಷೆಯನ್ನು ಹೆದ್ದಾರಿ ಪ್ರಾಧಿಕಾರ ಇಟ್ಟುಕೊಂಡಿದೆ.
icon

(5 / 7)

ಪ್ಯಾಕೇಜ್-4 ಸದ್ಯದಲ್ಲೇ ಆರಂಭವಾಗಲಿದ್ದು, ಪ್ಯಾಕೇಜ್-2 ಅರಣ್ಯ ಇಲಾಖೆಯ ಅನುಮತಿಗಾಗಿ ಕಾದಿದೆ. ಇದಕ್ಕೂ ಶೀಘ್ರವೇ ಅನುಮತಿ ಸಿಗುವ ನಿರೀಕ್ಷೆಯನ್ನು ಹೆದ್ದಾರಿ ಪ್ರಾಧಿಕಾರ ಇಟ್ಟುಕೊಂಡಿದೆ.

ಕುಶಾಲನಗರದಿಂದ ಮಡಿಕೇರಿ ಕಡೆಗೆ ಆರಂಭವಾಗಬೇಕಿರುವ 22 ಕಿಮೀ ಉದ್ಧದ ಪ್ಯಾಕೇಜ್-1 ಅನ್ನು ಪರಿಸರವಾದಿಗಳ ತಕರಾರು ಮತ್ತು ಹೈಕೋರ್ಟ್ ಕೇಸಿನಿಂದಾಗಿ ಕೈಬಿಟ್ಟು ಕುಶಾಲನಗರದವರೆಗೂ ಮಾತ್ರ ಯೋಜನೆ ಕೈಗೆತ್ತಿಕೊಂಡಿದ್ದೆವು. ಎಂದು ಮೈಸೂರು- ಕೊಡಗು ಮಾಜಿ ಸಂಸದ ಪ್ರತಾಪಸಿಂಹ ಪೋಸ್ಟ್‌ ಮಾಡಿದ್ದಾರೆ.
icon

(6 / 7)

ಕುಶಾಲನಗರದಿಂದ ಮಡಿಕೇರಿ ಕಡೆಗೆ ಆರಂಭವಾಗಬೇಕಿರುವ 22 ಕಿಮೀ ಉದ್ಧದ ಪ್ಯಾಕೇಜ್-1 ಅನ್ನು ಪರಿಸರವಾದಿಗಳ ತಕರಾರು ಮತ್ತು ಹೈಕೋರ್ಟ್ ಕೇಸಿನಿಂದಾಗಿ ಕೈಬಿಟ್ಟು ಕುಶಾಲನಗರದವರೆಗೂ ಮಾತ್ರ ಯೋಜನೆ ಕೈಗೆತ್ತಿಕೊಂಡಿದ್ದೆವು. ಎಂದು ಮೈಸೂರು- ಕೊಡಗು ಮಾಜಿ ಸಂಸದ ಪ್ರತಾಪಸಿಂಹ ಪೋಸ್ಟ್‌ ಮಾಡಿದ್ದಾರೆ.

ಈ ರಸ್ತೆಯ ವಿಸ್ತರಣೆ ದಶಕಗಳ ಬೇಡಿಕೆಯಾಗಿತ್ತು. ಇದರಿಂದ ಕೊಡಗು ಹಾಗೂ ಮಂಗಳೂರು ಭಾಗದಲ್ಲಿ ಸಂಚರಿಸುವವರಿಗೆ ಪ್ರಯಾಣ ಸುಲಭವಾಗಲಿದೆ.
icon

(7 / 7)

ಈ ರಸ್ತೆಯ ವಿಸ್ತರಣೆ ದಶಕಗಳ ಬೇಡಿಕೆಯಾಗಿತ್ತು. ಇದರಿಂದ ಕೊಡಗು ಹಾಗೂ ಮಂಗಳೂರು ಭಾಗದಲ್ಲಿ ಸಂಚರಿಸುವವರಿಗೆ ಪ್ರಯಾಣ ಸುಲಭವಾಗಲಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು