Udupi Sri Krishna Math: ಇನ್ನು ಮುಂದೆ ಉಡುಪಿ ಶ್ರೀಕೃಷ್ಣ ಮಠದ ಸುತ್ತಲೂ ಮದುವೆ ಹಾಗೂ ಮದುವೆಗೆ ಮುನ್ನ ಜೋಡಿ ಫೋಟೋಶೂಟ್‌ಗಿಲ್ಲ ಅನುಮತಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Udupi Sri Krishna Math: ಇನ್ನು ಮುಂದೆ ಉಡುಪಿ ಶ್ರೀಕೃಷ್ಣ ಮಠದ ಸುತ್ತಲೂ ಮದುವೆ ಹಾಗೂ ಮದುವೆಗೆ ಮುನ್ನ ಜೋಡಿ ಫೋಟೋಶೂಟ್‌ಗಿಲ್ಲ ಅನುಮತಿ

Udupi Sri Krishna Math: ಇನ್ನು ಮುಂದೆ ಉಡುಪಿ ಶ್ರೀಕೃಷ್ಣ ಮಠದ ಸುತ್ತಲೂ ಮದುವೆ ಹಾಗೂ ಮದುವೆಗೆ ಮುನ್ನ ಜೋಡಿ ಫೋಟೋಶೂಟ್‌ಗಿಲ್ಲ ಅನುಮತಿ

  • ಉಡುಪಿ ಶ್ರೀ ಕೃಷ್ಣ ಮಠವು ಧಾರ್ಮಿಕ ವಾತಾವರಣದಲ್ಲಿ ಕೆಲವರ ಅನುಚಿತ ನಡವಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇನ್ನು ಮುಂದಿನ ದಿನಗಳಲ್ಲಿ ದೇವಸ್ಥಾನ ಸುತ್ತ ಮದುವೆ ಹಾಗೂ ಮದುವೆಗೆ ಮುನ್ನ ಜೋಡಿ ಫೋಟೋಶೂಟ್‌ ನಿರ್ಭಂದಿಸಿದೆ.

ಉಡುಪಿ ಶ್ರೀ ಕೃಷ್ಣ ಮಠವು ಧಾರ್ಮಿಕ ವಾತಾವರಣದಲ್ಲಿ ಕೆಲವರ ಅನುಚಿತ ನಡವಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಜೋಡಿ ಫೋಟೋಶೂಟ್‌ ಮಾಡುವಂತಿಲ್ಲ ಎಂಬ ಸೂಚನೆ ನೀಡಿದೆ.
icon

(1 / 6)

ಉಡುಪಿ ಶ್ರೀ ಕೃಷ್ಣ ಮಠವು ಧಾರ್ಮಿಕ ವಾತಾವರಣದಲ್ಲಿ ಕೆಲವರ ಅನುಚಿತ ನಡವಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಜೋಡಿ ಫೋಟೋಶೂಟ್‌ ಮಾಡುವಂತಿಲ್ಲ ಎಂಬ ಸೂಚನೆ ನೀಡಿದೆ.
(Canva)

ಅದರಲ್ಲೂ ಮುಖ್ಯವಾಗಿ ಉಡುಪಿ ರಥಬೀದಿಯಲ್ಲಿ ನಿಷೇಧ ಜಾರಿಯಾಗಿದೆ. ಶ್ರೀಕೃಷ್ಣ ಮಠ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ.
icon

(2 / 6)

ಅದರಲ್ಲೂ ಮುಖ್ಯವಾಗಿ ಉಡುಪಿ ರಥಬೀದಿಯಲ್ಲಿ ನಿಷೇಧ ಜಾರಿಯಾಗಿದೆ. ಶ್ರೀಕೃಷ್ಣ ಮಠ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಶ್ರೀಕೃಷ್ಣಮಠ ಪಾರಂಪರಿಕ ಕಟ್ಟಡಗಳಿರುವ ತಾಣವಾಗಿರುವ ಕಾರಣ ಸಾಕಷ್ಟು ಜನ ಬಂದು ಈ ಸುಂದರ ತಾಣದಲ್ಲೇ ಫೋಟೋ ತೆಗೆಸಿಕೊಳ್ಳಬೇಕೆಂಬ ಬಯಕೆ ಹೊಂದಿರುತ್ತಾರೆ.
icon

(3 / 6)

ಶ್ರೀಕೃಷ್ಣಮಠ ಪಾರಂಪರಿಕ ಕಟ್ಟಡಗಳಿರುವ ತಾಣವಾಗಿರುವ ಕಾರಣ ಸಾಕಷ್ಟು ಜನ ಬಂದು ಈ ಸುಂದರ ತಾಣದಲ್ಲೇ ಫೋಟೋ ತೆಗೆಸಿಕೊಳ್ಳಬೇಕೆಂಬ ಬಯಕೆ ಹೊಂದಿರುತ್ತಾರೆ.

ಸ್ವಾಮೀಜಿಗಳ ಓಡಾಟಕ್ಕೆ ಮತ್ತು ಅಲ್ಲಿನ ಸಾರ್ವಜನಿಕರಿಗೆ ಮುಜುಗರ ಉಂಟಾಗುತ್ತಿದ್ದ ಕಾರಣಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ.
icon

(4 / 6)

ಸ್ವಾಮೀಜಿಗಳ ಓಡಾಟಕ್ಕೆ ಮತ್ತು ಅಲ್ಲಿನ ಸಾರ್ವಜನಿಕರಿಗೆ ಮುಜುಗರ ಉಂಟಾಗುತ್ತಿದ್ದ ಕಾರಣಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ.
(Canva)

ಅಷ್ಟ ಮಠಾಧೀಶರು ಓಡಾಡುವ ರಥಬೀದಿ. ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡುವ ಪವಿತ್ರ ಜಾಗ. ಇದಕ್ಕೆ ಪಾವಿತ್ರ್ಯತೆ ಇದೆ. ಪ್ರತಿದಿನ ರಥಬೀದಿಯಲ್ಲಿ ದೇವರ ಉತ್ಸವ ನಡೆಯುತ್ತಿದೆ. ಇಂತಹ ಪವಿತ್ರ ಸ್ಥಳಗಳಲ್ಲಿ ಫೋಟೋಶೂಟ್, ಜೋಡಿಗಳ ಸರಸ ಸರಿಯಲ್ಲ. ಮುಜುಗರದ ಸನ್ನಿವೇಶ ತಪ್ಪಿಸಲು ಮಠ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದೆ.
icon

(5 / 6)

ಅಷ್ಟ ಮಠಾಧೀಶರು ಓಡಾಡುವ ರಥಬೀದಿ. ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡುವ ಪವಿತ್ರ ಜಾಗ. ಇದಕ್ಕೆ ಪಾವಿತ್ರ್ಯತೆ ಇದೆ. ಪ್ರತಿದಿನ ರಥಬೀದಿಯಲ್ಲಿ ದೇವರ ಉತ್ಸವ ನಡೆಯುತ್ತಿದೆ. ಇಂತಹ ಪವಿತ್ರ ಸ್ಥಳಗಳಲ್ಲಿ ಫೋಟೋಶೂಟ್, ಜೋಡಿಗಳ ಸರಸ ಸರಿಯಲ್ಲ. ಮುಜುಗರದ ಸನ್ನಿವೇಶ ತಪ್ಪಿಸಲು ಮಠ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದೆ.

.ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕಗೋಪುರ, ಅಷ್ಟಮಠಗಳ ಎದುರು, ಪವಿತ್ರ ರಥದ ಬಳಿ ಹೀಗೆ ರಥಬೀದಿ ಸುತ್ತಲೂ ಬೆಳ್ಳಂಬೆಳಗ್ಗೆ ಮದುವೆಯಾಗುವ ಜೋಡಿಗಳು ಹಾಜರಾಗ್ತಾರೆ. ಅಷ್ಟಾದರೆ ಸಮಸ್ಯೆ ಇಲ್ಲ, ಕೈ ಕೈ ಹಿಡಿದು ಎತ್ತಿಕೊಂಡು ಮುದ್ದಾಡುವ ದೃಶ್ಯಗಳು ಕಾಣಿಸುತ್ತವೆ. ಇದು ಸರಿಯಲ್ಲ ಎಂದು ಈ ನಿರ್ಧಾರಕ್ಕೆ ಬರಲಾಗಿದೆ.
icon

(6 / 6)

.ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕಗೋಪುರ, ಅಷ್ಟಮಠಗಳ ಎದುರು, ಪವಿತ್ರ ರಥದ ಬಳಿ ಹೀಗೆ ರಥಬೀದಿ ಸುತ್ತಲೂ ಬೆಳ್ಳಂಬೆಳಗ್ಗೆ ಮದುವೆಯಾಗುವ ಜೋಡಿಗಳು ಹಾಜರಾಗ್ತಾರೆ. ಅಷ್ಟಾದರೆ ಸಮಸ್ಯೆ ಇಲ್ಲ, ಕೈ ಕೈ ಹಿಡಿದು ಎತ್ತಿಕೊಂಡು ಮುದ್ದಾಡುವ ದೃಶ್ಯಗಳು ಕಾಣಿಸುತ್ತವೆ. ಇದು ಸರಿಯಲ್ಲ ಎಂದು ಈ ನಿರ್ಧಾರಕ್ಕೆ ಬರಲಾಗಿದೆ.

Suma Gaonkar

eMail

ಇತರ ಗ್ಯಾಲರಿಗಳು