ಕನ್ನಡ ಸುದ್ದಿ  /  Photo Gallery  /  No One Should Be Spared If Found Guilty Says Amit Shah On Adani Row

Amit Shah: ಅದಾನಿ ಹಗರಣ: ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

  • ಅದಾನಿ-ಹಿಂಡೆನ್‌ಬರ್ಗ್ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಲು ಪ್ರತಿಪಕ್ಷಗಳು ಮುಂದಾಗಿವೆ. ಕಳೆದ ಹಲವು ದಿನಗಳಿಂದ ಸಂಸತ್ತಿನಲ್ಲಿ ಈ ವಿಚಾರವಾಗಿ ಕೋಲಾಹಲ ಉಂಟಾಗಿದೆ. ಈ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಒಂದು ವೇಳೆ ಈ ಹಗರಣದಲ್ಲಿ ಯಾರಾದರೂ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕ್ರಮ ಖಚಿತ ಎಂದು ಅಮಿತ್‌ ಶಾ ಹೇಳಿದ್ದಾರೆ.

ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಹಿಂಡನ್‌ಬರ್ಗ್‌ ವರದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈಗಾಗಲೇ ವಿಷಯದ ಅರಿವನ್ನು ಪಡೆದುಕೊಂಡಿದೆ. ಈ ಕುರಿತು ತನಿಖಾ ಸಮಿತಿಯನ್ನು ರಚಿಸಲಾಗಿದೆ. ಅಕ್ರಮ ನಡೆದಿರುವುದು ನಿಜವಾದರೆ, ಇದರಲ್ಲಿ ಭಾಗಿಯಾದವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಮಿತ್‌ ಶಾ ಭರವಸೆ ನೀಡಿದರು. (ಸಂಗ್ರಹ ಚಿತ್ರ)
icon

(1 / 5)

ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಹಿಂಡನ್‌ಬರ್ಗ್‌ ವರದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈಗಾಗಲೇ ವಿಷಯದ ಅರಿವನ್ನು ಪಡೆದುಕೊಂಡಿದೆ. ಈ ಕುರಿತು ತನಿಖಾ ಸಮಿತಿಯನ್ನು ರಚಿಸಲಾಗಿದೆ. ಅಕ್ರಮ ನಡೆದಿರುವುದು ನಿಜವಾದರೆ, ಇದರಲ್ಲಿ ಭಾಗಿಯಾದವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಮಿತ್‌ ಶಾ ಭರವಸೆ ನೀಡಿದರು. (ಸಂಗ್ರಹ ಚಿತ್ರ)(PTI)

ಅದಾನಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪ್ರತಿಪಕ್ಷಗಳ ಬಳಿ ಯಾವುದೇ ಪುರಾವೆ ಇದ್ದರೆ ಅದನ್ನು  ಈ ಸಮಿತಿಗೆ ಸಲ್ಲಿಸಲಿ. ಭ್ರಷ್ಟಾಚಾರ ಮಾಡಿದರೆ ಯಾರಿಗೂ ವಿನಾಯಿತಿ ನೀಡುವುದಿಲ್ಲ. ಎಲ್ಲರಿಗೂ ನ್ಯಾಯಾಂಗದ ಮೇಲೆ ನಂಬಿಕೆ ಇರಬೇಕು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ಅಮಿತ್‌ ಶಾ ಹೇಳಿದರು. (ಸಂಗ್ರಹ ಚಿತ್ರ)
icon

(2 / 5)

ಅದಾನಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪ್ರತಿಪಕ್ಷಗಳ ಬಳಿ ಯಾವುದೇ ಪುರಾವೆ ಇದ್ದರೆ ಅದನ್ನು  ಈ ಸಮಿತಿಗೆ ಸಲ್ಲಿಸಲಿ. ಭ್ರಷ್ಟಾಚಾರ ಮಾಡಿದರೆ ಯಾರಿಗೂ ವಿನಾಯಿತಿ ನೀಡುವುದಿಲ್ಲ. ಎಲ್ಲರಿಗೂ ನ್ಯಾಯಾಂಗದ ಮೇಲೆ ನಂಬಿಕೆ ಇರಬೇಕು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ಅಮಿತ್‌ ಶಾ ಹೇಳಿದರು. (ಸಂಗ್ರಹ ಚಿತ್ರ)(PTI)

ಏತನ್ಮಧ್ಯೆ, ಕೇಂದ್ರ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆಯಲ್ಲಿ ಹೇಳಿದ್ದಾರೆ. ಭ್ರಷ್ಟಾಚಾರದ ತನಿಖೆಗಳಲ್ಲಿ ಎರಡು ಮಾತ್ರ ಬಿಜೆಪಿ ಸರ್ಕಾರದ್ದು, ಉಳಿದ ಪ್ರಕರಣಗಳು ಯುಪಿಎ ಕಾಲದ್ದು ಎಂದು ಶಾ ಪ್ರತಿಪಾದಿಸಿದರು. (ಸಂಗ್ರಹ ಚಿತ್ರ)
icon

(3 / 5)

ಏತನ್ಮಧ್ಯೆ, ಕೇಂದ್ರ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆಯಲ್ಲಿ ಹೇಳಿದ್ದಾರೆ. ಭ್ರಷ್ಟಾಚಾರದ ತನಿಖೆಗಳಲ್ಲಿ ಎರಡು ಮಾತ್ರ ಬಿಜೆಪಿ ಸರ್ಕಾರದ್ದು, ಉಳಿದ ಪ್ರಕರಣಗಳು ಯುಪಿಎ ಕಾಲದ್ದು ಎಂದು ಶಾ ಪ್ರತಿಪಾದಿಸಿದರು. (ಸಂಗ್ರಹ ಚಿತ್ರ)(PTI)

ವಿಪಕ್ಷಗಳು ಹಿಂಡನ್‌ಬರ್ಗ್‌ ವರದಿ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ. ಜೆಪಿಸಿ ರಚನೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳು, ಈ ಕುರಿತು ತನಿಖೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ ಸಮಿತಿಗೆ ತಮ್ಮ ಬಳಿ ಇರುವ ಸಾಕ್ಷಿ ಏಕೆ ಒದಗಿಸುತ್ತಿಲ್ಲ ಎಂದು ಅಮಿತ್‌ ಶಾ ಪ್ರಶ್ನಿಸಿದ್ದಾರೆ. (ಸಂಗ್ರಹ ಚಿತ್ರ)
icon

(4 / 5)

ವಿಪಕ್ಷಗಳು ಹಿಂಡನ್‌ಬರ್ಗ್‌ ವರದಿ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ. ಜೆಪಿಸಿ ರಚನೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳು, ಈ ಕುರಿತು ತನಿಖೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ ಸಮಿತಿಗೆ ತಮ್ಮ ಬಳಿ ಇರುವ ಸಾಕ್ಷಿ ಏಕೆ ಒದಗಿಸುತ್ತಿಲ್ಲ ಎಂದು ಅಮಿತ್‌ ಶಾ ಪ್ರಶ್ನಿಸಿದ್ದಾರೆ. (ಸಂಗ್ರಹ ಚಿತ್ರ)(PTI)

ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಆದರೆ ಈ ಕುರಿತು ತುಟಿ ಬಿಚ್ಚದ ಕಾಂಗ್ರೆಸ್‌ ನಾಯಕರು, ಅದಾನಿ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವೈಯಕ್ತಿಕ ಟೀಕೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಮಿತ್‌ ಶಾ ತೀವ್ರ ವಾಗ್ದಾಳಿ ನಡೆಸಿದರು. (ಸಂಗ್ರಹ ಚಿತ್ರ)
icon

(5 / 5)

ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಆದರೆ ಈ ಕುರಿತು ತುಟಿ ಬಿಚ್ಚದ ಕಾಂಗ್ರೆಸ್‌ ನಾಯಕರು, ಅದಾನಿ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವೈಯಕ್ತಿಕ ಟೀಕೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಮಿತ್‌ ಶಾ ತೀವ್ರ ವಾಗ್ದಾಳಿ ನಡೆಸಿದರು. (ಸಂಗ್ರಹ ಚಿತ್ರ)(PTI)


IPL_Entry_Point

ಇತರ ಗ್ಯಾಲರಿಗಳು